Homeಮುಖಪುಟಹರಿಯಾಣ: ಮುಸ್ಲಿಂ ವಲಸೆ ಕಾರ್ಮಿಕರ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಹೈಕೋರ್ಟ್ ತಡೆ

ಹರಿಯಾಣ: ಮುಸ್ಲಿಂ ವಲಸೆ ಕಾರ್ಮಿಕರ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಹರಿಯಾಣದ ಬಿಜೆಪಿ ಸರ್ಕಾರವು ನುಹ್ ಜಿಲ್ಲೆಯಲ್ಲಿನ ವಲಸೆ ಕಾರ್ಮಿಕರ ಕಟ್ಟಡ ಹಾಗೂ ಗುಡಿಸಲುಗಳನ್ನು ನೆಲಸಮ ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದು, ಈ ಕಾರ್ಯಾಚರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ತಡೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗುರುವಾರದಿಂದ ನಾಲ್ಕು ದಿನಗಳ ಕಾಲ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಅಕ್ರಮ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸುತ್ತಿದ್ದಾರೆ, ಅವುಗಳಲ್ಲಿ ಹೆಚ್ಚಿನವು ಮುಸ್ಲಿಂ ವಲಸೆ ಕಾರ್ಮಿಕರಿಗೆ ಸೇರಿದವುಗಳಾಗಿವೆ.

ಕಳೆದ ವಾರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದ ವಿರುದ್ಧದ ಕ್ರಮವಾಗಿ ಈ ಕಾರ್ಯಾಚರಣೆ ನಡೆಸಲಾಯಿತು. ನುಹ್ ಮತ್ತು ನೆರೆಯ ಗುರುಗ್ರಾಮ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು, ಮಸೀದಿಯ ಇಮಾಮ್ ಮತ್ತು ಬಜರಂಗದಳದ ಸದಸ್ಯ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ಸೋಮವಾರ, ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಹರ್‌ಪ್ರೀತ್ ಕೌರ್ ಜೀವನ್ ಅವರ ವಿಭಾಗೀಯ ಪೀಠವು, ಈ ವಿಷಯವನ್ನು ಕೈಗೆತ್ತಿಕೊಂಡಿತು. ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಮನೋಹರ್ ಲಾಲ್ ಖಟ್ಟರ್ ಸರ್ಕಾರಕ್ಕೆ ನ್ಯಾಯಮೂರ್ತಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿವರವಾದ ಆದೇಶವನ್ನು ಇನ್ನೂ ನೀಡಲಾಗಿಲ್ಲ, ಮತ್ತು ನ್ಯಾಯಾಲಯವು ಪ್ರಕರಣವನ್ನು ಒಂದು ದಿನದ ನಂತರ ಮತ್ತೆ ಕೈಗೆತ್ತಿಕೊಳ್ಳಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆಯಲ್ಲಿ ಮೊದಲು ಕೋಮು ಘರ್ಷಣೆಗಳು ಭುಗಿಲೆದ್ದವು. ಆನಂತರ ಅದು ತ್ವರಿತವಾಗಿ ಜಿಲ್ಲೆಯಾದ್ಯಂತ ಹರಡಿತು.

ಗುರುಗ್ರಾಮ್‌ನಲ್ಲಿ ಹಿಂದೂ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57 ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು. ಅದರ ಉಪ ಇಮಾನನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಗುರುವಾರ, ಹರಿಯಾಣ ಸರ್ಕಾರವು ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ ಆರೋಪದ ಮೇಲೆ ಜಿಲ್ಲೆಯ ಟೌರು ಪಟ್ಟಣದಲ್ಲಿ 250ಕ್ಕೂ ಹೆಚ್ಚು ಮುಸ್ಲಿಂ ವಲಸೆ ಕಾರ್ಮಿಕರ ಗುಡಿಸಲುಗಳನ್ನು ನೆಲಸಮಗೊಳಿಸಿದೆ. ಶುಕ್ರವಾರ ಇದೇ ಆಧಾರದ ಮೇಲೆ ಹಲವಾರು ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ.

ಶನಿವಾರ, ನಲ್ಹಾರ್‌ನ ಶಹೀದ್ ಹಸನ್ ಖಾನ್ ಮೇವಾಟಿ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ಸುಮಾರು ಒಂದು ಡಜನ್ ಅಂಗಡಿಗಳನ್ನು, ಹೆಚ್ಚಾಗಿ ಔಷಧಾಲಯಗಳನ್ನು ಧ್ವಂಸಗೊಳಿಸಲಾಯಿತು. ಭಾನುವಾರ, ನುಹ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಹೋಟೆಲ್‌ನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲಾಯಿತು.

ಇದನ್ನೂ ಓದಿ: ಹರಿಯಾಣ: ಪ್ರಚೋದನಕಾರಿ ವಿಡಿಯೋ ಶೇರ್ ಮಾಡುತ್ತಿರುವ ಬಲಪಂಥೀಯ ಮಾಧ್ಯಮಗಳಿಗೆ ಡಿಜಿಪಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...