Homeಮುಖಪುಟಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ...

ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳದ ಹರ್ಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಥಿ ಮತ್ತು ಪಕ್ಷದ ಕಾರ್ಯಕರ್ತರೋರ್ವರನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ರಾಜ್ಯದ ಜಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. INDIA ಒಕ್ಕೂಟದ ಜೊತೆ INLD ಮೈತ್ರಿ ಮಾತಕತೆ ಹಂತದಲ್ಲಿ ನಡೆದ ಈ ಘಟನೆಯು ಹರ್ಯಾಣದಲ್ಲಿ ಕಾನೂನು ಸುವ್ಯವಸ್ಥೆ ಪ್ರಶ್ನೆಯನ್ನು ಹುಟ್ಟು ಹಾಕಿರುವುದರ ಜೊತೆಗೆ ಸಂಶಯಕ್ಕೆ ಕಾರಣವಾಗಿದೆ.

ಜಜ್ಜರ್‌ನ ಬಹದ್ದೂರ್‌ಗಢ ಪಟ್ಟಣದಲ್ಲಿ ಎಸ್‌ಯುವಿ ಕಾರಿನಲ್ಲಿ ತೆರಳುತ್ತಿದ್ದಾಗ ನಫೆ ಸಿಂಗ್ ರಾಥಿ ಮೇಲೆ ಫೈರಿಂಗ್‌ ಮಾಡಲಾಗಿದೆ. ಈ ದಾಳಿಯಲ್ಲಿ ನಫೆ ಸಿಂಗ್ ರಾಥಿ ಸೇರಿ ಇಬ್ಬರು ಮೃತಪಟ್ಟಿದ್ದು, ರಾಥಿಯ ಮೂವರು ಭದ್ರತಾ ಸಿಬ್ಬಂದಿಗಳಿಗೆ ಕೂಡ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನಡೆದ ಈ ದಾಳಿಯಿಂದ ಬಿಜೆಪಿ ಆಡಳಿತದ ಹರ್ಯಾಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಐಎನ್‌ಎಲ್‌ಡಿ ನಾಯಕ ಅಭಯ್ ಚೌಟಾಲಾ, ರಾಥಿ ಅವರಿಗೆ ಜೀವ ಬೆದರಿಕೆ ಇದ್ದರೂ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಘಟನೆಯ ಹೊಣೆ ಹೊತ್ತು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯ ಗೃಹ ಸಚಿವ ಅನಿಲ್ ವಿಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯ ಘಟಕದ ಮುಖ್ಯಸ್ಥರಾಗಿರುವ, ಎರಡು ಬಾರಿ ಶಾಸಕರಿಗಿದ್ದ ನಫೆ ಸಿಂಗ್ ರಾಥಿ ಅವರಿಗೆ ಭದ್ರತೆಯನ್ನು ಒದಗಿಸಲಾಗಿಲ್ಲ, ಅವರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಭದ್ರತೆಯನ್ನು ಒದಗಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಜ್ಯ ಗೃಹ ಸಚಿವರಿಗೆ ಲಿಖಿತವಾಗಿ ಮನವಿ ಸಲ್ಲಿಸಲಾಗಿತ್ತು, ಆದರೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹರ್ಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಅವರು ಮಾಜಿ ಶಾಸಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ಐಎನ್‌ಎಲ್‌ಡಿ ರಾಜ್ಯಾಧ್ಯಕ್ಷ ನಫೆ ಸಿಂಗ್ ರಾಥಿ ಅವರನ್ನು ಹರ್ಯಾಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಸುದ್ದಿ ತುಂಬಾ ದುಃಖಕರವಾಗಿದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಕಾನೂನು ಸುವ್ಯವಸ್ಥೆ ದಿವಾಳಿಯಾಗಿದೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸಿದೆ. ಇಂದು ರಾಜ್ಯದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಅಗಲಿದ ಆತ್ಮಕ್ಕೆ ನನ್ನ ಶ್ರದ್ಧಾಂಜಲಿ ಮತ್ತು ಕುಟುಂಬಕ್ಕೆ ಆಳವಾದ ಸಂತಾಪ. ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ದಾಳಿಯಲ್ಲಿ ಗಾಯಗೊಂಡಿರುವ ಭದ್ರತಾ ಸಿಬ್ಬಂದಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಭೂಪಿಂದರ್ ಸಿಂಗ್ ಹೂಡಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸುಶೀಲ್ ಗುಪ್ತಾ ಘಟನೆಯನ್ನು ಖಂಡಿಸಿ ಖಟ್ಟರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹರ್ಯಾಣದಲ್ಲಿ ಕಾನೂನಿನ ಆಡಳಿತ ಕೊನೆಗೊಂಡಿದೆ ಮತ್ತು ಜಂಗಲ್ ರಾಜ್ ಮೇಲುಗೈ ಸಾಧಿಸಿದೆ. ಹರಿಯಾಣದಲ್ಲಿ ಇಂದು ಯಾರೂ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೋಯಿತ್ರಾ, ಹರ್ಯಾಣದ  ಐಎನ್‌ಎಲ್‌ಡಿ ಅಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಜಜ್ಜರ್ ಜಿಲ್ಲೆಯ ಬಹದ್ದೂರ್‌ಗಢದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವರದಿಗಳ ಪ್ರಕಾರ, ಅಪರಿಚಿತ ದಾಳಿಕೋರರು ಅವರ ಕಾರಿನ ಮೇಲೆ 40-50 ಸುತ್ತಿನ ಬುಲೆಟ್‌ಗಳನ್ನು ಹಾರಿಸಿದ್ದಾರೆ. ಐಎನ್‌ಎಲ್‌ಡಿ ಕಾಂಗ್ರೆಸ್‌ನೊಂದಿಗೆ ಅಂತಿಮ ಮಾತುಕತೆಯಲ್ಲಿತ್ತು ಮತ್ತು ಶೀಘ್ರದಲ್ಲೇ ಇಂಡಿಯಾ ಮೈತ್ರಿಗೆ ಸೇರುವ ನಿರೀಕ್ಷೆಯಿತ್ತು. ಈ ಘಟನೆ ಹರಿಯಾಣದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ವೈದ್ಯರ ಹೇಳಿಕೆ:

ಐಎನ್‌ಎಲ್‌ಡಿ ನಾಯಕ ದಾಖಲಾಗಿರುವ ಬ್ರಹ್ಮ ಶಕ್ತಿ ಸಂಜೀವನಿ ಆಸ್ಪತ್ರೆಯ ಡಾ. ಮನೀಷ್ ಶರ್ಮಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಾಜಿ ಶಾಸಕರು ಸೇರಿ ನಾಲ್ವರನ್ನು ಆಸ್ಪತ್ರೆಗೆ ಕರೆತರಲಾಯಿತು ಮತ್ತು ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು ಮತ್ತು ಮೃತಪಟ್ಟರು. ನಾವು ನಮ್ಮಿಂದಾಗುವ ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ. ಇನ್ನು ಭುಜ, ತೊಡೆ ಮತ್ತು ಎದೆಯ ಎಡಭಾಗದಲ್ಲಿ ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಮಾಜಿ ಶಾಸಕ ನಫೆ ಸಿಂಗ್ ಮತ್ತು ಜೈಕಿಶನ್ ಎಂಬವರ ಕುತ್ತಿಗೆ, ಬೆನ್ನು ಮತ್ತು ಭುಜಕ್ಕೆ ಅನೇಕ ಸುತ್ತಿನ ಗುಂಡು ಹಾರಿಸಲಾಗಿದೆ. ಈ ರೀತಿಯ ದಾಳಿಯು ತೀವ್ರ ರಕ್ತಸ್ರಾವ ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ ಯುಕೆಯ ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...