Homeಮುಖಪುಟಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ...

ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳದ ಹರ್ಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಥಿ ಮತ್ತು ಪಕ್ಷದ ಕಾರ್ಯಕರ್ತರೋರ್ವರನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ರಾಜ್ಯದ ಜಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. INDIA ಒಕ್ಕೂಟದ ಜೊತೆ INLD ಮೈತ್ರಿ ಮಾತಕತೆ ಹಂತದಲ್ಲಿ ನಡೆದ ಈ ಘಟನೆಯು ಹರ್ಯಾಣದಲ್ಲಿ ಕಾನೂನು ಸುವ್ಯವಸ್ಥೆ ಪ್ರಶ್ನೆಯನ್ನು ಹುಟ್ಟು ಹಾಕಿರುವುದರ ಜೊತೆಗೆ ಸಂಶಯಕ್ಕೆ ಕಾರಣವಾಗಿದೆ.

ಜಜ್ಜರ್‌ನ ಬಹದ್ದೂರ್‌ಗಢ ಪಟ್ಟಣದಲ್ಲಿ ಎಸ್‌ಯುವಿ ಕಾರಿನಲ್ಲಿ ತೆರಳುತ್ತಿದ್ದಾಗ ನಫೆ ಸಿಂಗ್ ರಾಥಿ ಮೇಲೆ ಫೈರಿಂಗ್‌ ಮಾಡಲಾಗಿದೆ. ಈ ದಾಳಿಯಲ್ಲಿ ನಫೆ ಸಿಂಗ್ ರಾಥಿ ಸೇರಿ ಇಬ್ಬರು ಮೃತಪಟ್ಟಿದ್ದು, ರಾಥಿಯ ಮೂವರು ಭದ್ರತಾ ಸಿಬ್ಬಂದಿಗಳಿಗೆ ಕೂಡ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನಡೆದ ಈ ದಾಳಿಯಿಂದ ಬಿಜೆಪಿ ಆಡಳಿತದ ಹರ್ಯಾಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಐಎನ್‌ಎಲ್‌ಡಿ ನಾಯಕ ಅಭಯ್ ಚೌಟಾಲಾ, ರಾಥಿ ಅವರಿಗೆ ಜೀವ ಬೆದರಿಕೆ ಇದ್ದರೂ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಘಟನೆಯ ಹೊಣೆ ಹೊತ್ತು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯ ಗೃಹ ಸಚಿವ ಅನಿಲ್ ವಿಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯ ಘಟಕದ ಮುಖ್ಯಸ್ಥರಾಗಿರುವ, ಎರಡು ಬಾರಿ ಶಾಸಕರಿಗಿದ್ದ ನಫೆ ಸಿಂಗ್ ರಾಥಿ ಅವರಿಗೆ ಭದ್ರತೆಯನ್ನು ಒದಗಿಸಲಾಗಿಲ್ಲ, ಅವರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಭದ್ರತೆಯನ್ನು ಒದಗಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಜ್ಯ ಗೃಹ ಸಚಿವರಿಗೆ ಲಿಖಿತವಾಗಿ ಮನವಿ ಸಲ್ಲಿಸಲಾಗಿತ್ತು, ಆದರೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹರ್ಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಅವರು ಮಾಜಿ ಶಾಸಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ಐಎನ್‌ಎಲ್‌ಡಿ ರಾಜ್ಯಾಧ್ಯಕ್ಷ ನಫೆ ಸಿಂಗ್ ರಾಥಿ ಅವರನ್ನು ಹರ್ಯಾಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಸುದ್ದಿ ತುಂಬಾ ದುಃಖಕರವಾಗಿದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಕಾನೂನು ಸುವ್ಯವಸ್ಥೆ ದಿವಾಳಿಯಾಗಿದೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸಿದೆ. ಇಂದು ರಾಜ್ಯದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಅಗಲಿದ ಆತ್ಮಕ್ಕೆ ನನ್ನ ಶ್ರದ್ಧಾಂಜಲಿ ಮತ್ತು ಕುಟುಂಬಕ್ಕೆ ಆಳವಾದ ಸಂತಾಪ. ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ದಾಳಿಯಲ್ಲಿ ಗಾಯಗೊಂಡಿರುವ ಭದ್ರತಾ ಸಿಬ್ಬಂದಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಭೂಪಿಂದರ್ ಸಿಂಗ್ ಹೂಡಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸುಶೀಲ್ ಗುಪ್ತಾ ಘಟನೆಯನ್ನು ಖಂಡಿಸಿ ಖಟ್ಟರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹರ್ಯಾಣದಲ್ಲಿ ಕಾನೂನಿನ ಆಡಳಿತ ಕೊನೆಗೊಂಡಿದೆ ಮತ್ತು ಜಂಗಲ್ ರಾಜ್ ಮೇಲುಗೈ ಸಾಧಿಸಿದೆ. ಹರಿಯಾಣದಲ್ಲಿ ಇಂದು ಯಾರೂ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೋಯಿತ್ರಾ, ಹರ್ಯಾಣದ  ಐಎನ್‌ಎಲ್‌ಡಿ ಅಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಜಜ್ಜರ್ ಜಿಲ್ಲೆಯ ಬಹದ್ದೂರ್‌ಗಢದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವರದಿಗಳ ಪ್ರಕಾರ, ಅಪರಿಚಿತ ದಾಳಿಕೋರರು ಅವರ ಕಾರಿನ ಮೇಲೆ 40-50 ಸುತ್ತಿನ ಬುಲೆಟ್‌ಗಳನ್ನು ಹಾರಿಸಿದ್ದಾರೆ. ಐಎನ್‌ಎಲ್‌ಡಿ ಕಾಂಗ್ರೆಸ್‌ನೊಂದಿಗೆ ಅಂತಿಮ ಮಾತುಕತೆಯಲ್ಲಿತ್ತು ಮತ್ತು ಶೀಘ್ರದಲ್ಲೇ ಇಂಡಿಯಾ ಮೈತ್ರಿಗೆ ಸೇರುವ ನಿರೀಕ್ಷೆಯಿತ್ತು. ಈ ಘಟನೆ ಹರಿಯಾಣದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ವೈದ್ಯರ ಹೇಳಿಕೆ:

ಐಎನ್‌ಎಲ್‌ಡಿ ನಾಯಕ ದಾಖಲಾಗಿರುವ ಬ್ರಹ್ಮ ಶಕ್ತಿ ಸಂಜೀವನಿ ಆಸ್ಪತ್ರೆಯ ಡಾ. ಮನೀಷ್ ಶರ್ಮಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಾಜಿ ಶಾಸಕರು ಸೇರಿ ನಾಲ್ವರನ್ನು ಆಸ್ಪತ್ರೆಗೆ ಕರೆತರಲಾಯಿತು ಮತ್ತು ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು ಮತ್ತು ಮೃತಪಟ್ಟರು. ನಾವು ನಮ್ಮಿಂದಾಗುವ ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ. ಇನ್ನು ಭುಜ, ತೊಡೆ ಮತ್ತು ಎದೆಯ ಎಡಭಾಗದಲ್ಲಿ ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಮಾಜಿ ಶಾಸಕ ನಫೆ ಸಿಂಗ್ ಮತ್ತು ಜೈಕಿಶನ್ ಎಂಬವರ ಕುತ್ತಿಗೆ, ಬೆನ್ನು ಮತ್ತು ಭುಜಕ್ಕೆ ಅನೇಕ ಸುತ್ತಿನ ಗುಂಡು ಹಾರಿಸಲಾಗಿದೆ. ಈ ರೀತಿಯ ದಾಳಿಯು ತೀವ್ರ ರಕ್ತಸ್ರಾವ ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ ಯುಕೆಯ ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...