Homeಮುಖಪುಟಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ಹರಿಯಾಣದ ಪಕ್ಷೇತರ ಶಾಸಕ ಬಲ್‌ರಾಜ್ ಕುಂಡು ಅವರ ಮನೆ, ಕಛೇರಿ ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ. ರೋಹ್ಟಕ್‌ನಲ್ಲಿರುವ ಅವರ ಸಹೋದರರು, ಹಿಸಾರ್‌ನ ಹನ್ಸಿಯಲ್ಲಿರುವ ಅವರ ಅಳಿಯಂದಿರು ಮತ್ತು ಗುರುಗ್ರಾಮ್ ಸೇರಿದಂತೆ ಶಾಸಕರಿಗೆ ಸಂಬಂಧಿಸಿದ ಎಲ್ಲಾ ಕಡೆ ದಾಳಿ ನಡೆಸಲಾಗಿದೆ.

ಸುಮಾರು 100 ಅಧಿಕಾರಿಗಳ ತಂಡವು ಶಾಸಕರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದೆ. ಆದರೆ ಶಾಸಕರ ರೋಹ್ಟಕ್ ಕಚೇರಿಯನ್ನು ನೋಡಿಕೊಳ್ಳುವ ದೇವೇಂದರ್ ಸಿಂಗ್ ಇದನ್ನು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.

“ಶಾಸಕರು ತಮ್ಮ ಗುರುಗ್ರಾಮ್ ನಿವಾಸದಲ್ಲಿದ್ದಾರೆ. ಅವರ ಕುಟುಂಬದ ಇತರ ಸದಸ್ಯರು ರೋಹ್ಟಕ್‌ನಲ್ಲಿರುವ ಮನೆಯಲ್ಲಿದ್ದಾರೆ. ನಾವು ಐಟಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ಸಹಕರಿಸುತ್ತಿದ್ದೇವೆ. ಆದರೆ ಇದು ಮೂರು ಕೃಷಿ ಕಾನೂನುಗಳ ವಿರುದ್ಧ ಮತ್ತು ರೈತರ ಪರವಾಗಿ ಧ್ವನಿ ಎತ್ತಿದ್ದಕ್ಕಾಗಿ ಶಾಸಕರ ಮೇಲೆ ನಡೆಸುತ್ತಿರುವ ಉದ್ದೇಶಪೂರ್ವಕ ದಾಳಿಯಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ರೋಹ್ಟಕ್‌ನ ಮಾಜಿ ಜಿಲ್ಲಾ ಪರಿಷತ್ ಅಧ್ಯಕ್ಷ, ಬಲರಾಜ್ ಕುಂಡು ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸಿದ ನಂತರ 2019 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಹರಿಯಾಣದಲ್ಲಿ ಸರ್ಕಾರ ರಚಿಸಲು ಬಹುಮತದ ಕೊರತೆಯುಂಟಾಗಿತ್ತು. ಹಾಗಾಗಿ ಕುಂಡು ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ನಂತರ, ಸಹಕಾರ ಸಂಘಗಳ ಮಾಜಿ ರಾಜ್ಯ ಸಚಿವ ಮನೀಶ್ ಗ್ರೋವರ್ ಅವರು ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದ ಅವರು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಗ್ರೋವರ್ ವಿರುದ್ಧ ತನಿಖೆ ಆರಂಭಿಸಲಿಲ್ಲ ಎಂದು ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡರು. ಈಗ ಕುಂಡು ಹಲವಾರು ವಿಷಯಗಳಲ್ಲಿ ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಕಳೆದ 92 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಇವರಿಗೆ ಬೆಂಬಲ ಸೂಚಿಸಲು ಶಾಸಕರು ಟಿಕ್ರಿ ಗಡಿಯಲ್ಲಿರುವ ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ. ಜೊತೆಗೆ ಬಿಕೆಯು ಮುಖಂಡ ರಾಕೇಶ್‌ ಟಿಕಾಯತ್ ಅವರ ಮಹಾಪಂಚಾಯತ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಜೊತೆಗೆ ತಮ್ಮ ಕ್ಷೇತ್ರದಲ್ಲಿರುವ ವಿವಿಧ ಕಾಲೇಜುಗಳ ಹೆಣ್ಣುಮಕ್ಕಳಿಗೆ ಸೇವೆ ಸಲ್ಲಿಸಲು ಶಾಸಕರ ಸುಮಾರು 12 ಬಸ್‌ಗಳು ಉಚಿತವಾಗಿ ಕಾರ್ಯನಿರ್ವಹಿಸುತ್ತಿವೆ.


ಇದನ್ನೂ ಓದಿ: ಅವೈಜ್ಞಾನಿಕ ಪಠ್ಯಕ್ರಮ, ಯುಜಿಸಿ ರಾಯಭಾರಕ್ಕೆ ತೀವ್ರ ವಿರೋಧ: ಇಂದಿನ ಗೋ-ಪರೀಕ್ಷೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...