Homeಮುಖಪುಟಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ -...

ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

- Advertisement -
- Advertisement -

ಹರಿಯಾಣ ವಿಧಾನಸಭೆಗೆ ಹೊಸದಾಗಿ ಚುನಾಯಿತವಾದ 90 ಸದಸ್ಯರ ಪೈಕಿ 86 ಶಾಸಕರು (96%) ಕೋಟ್ಯಾಧಿಪತಿಗಳಾಗಿದ್ದು, 12 (13%) ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಣೆ ಮಾಡಿದೆ. ಕೋಟ್ಯಾಧಿಪತಿ ಶಾಸಕರ ಸಂಖ್ಯೆ ಏರಿಕೆಯಾಗಿದ್ದು, 2019ರ ಚುನಾವಣೆಯಲ್ಲಿ 93% ಕೋಟ್ಯಾಧಿಪತಿ ಶಾಸಕರಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ಶಾಸಕರ ಪೈಕಿ 44%ದಷ್ಟು ಮಂದಿ 10 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ. ಮತ್ತೊಂದೆಡೆ 2.2%ರಷ್ಟು ಶಾಸಕರು ಮಾತ್ರ 20 ಲಕ್ಷಕ್ಕಿಂತ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್‌ ಅಂಕಿಅಂಶಗಳು ಹೇಳಿದೆ.

ಪ್ರತಿ ವಿಜೇತ ಅಭ್ಯರ್ಥಿಯ ಸರಾಸರಿ ಆಸ್ತಿಯು 24.97 ಕೋಟಿ ರೂಪಾಯಿಗಳಷ್ಟಿದ್ದು, ಇದು 2019 ರಲ್ಲಿ 18.29 ಕೋಟಿ ರೂಪಾಯಿಗಳಿತ್ತು ಎಂದು ವರದಿ ಉಲ್ಲೇಖಿಸಿದೆ. 

ಪಕ್ಷವಾರು, 96% ಬಿಜೆಪಿ ಶಾಸಕರು, 95% ಕಾಂಗ್ರೆಸ್ ಶಾಸಕರು ಮತ್ತು 100% ಐಎನ್‌ಎಲ್‌ಡಿ ಶಾಸಕರು 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಜೊತೆಗೆ ಒಬ್ಬ ಪಕ್ಷೇತರ ಶಾಸಕ 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ನೂತನ ಹರಿಯಾಣ ವಿಧಾನಸಭೆಯಲ್ಲಿ ಹಿಸಾರ್‌ನ ಸ್ವತಂತ್ರ ಶಾಸಕಿ ಸಾವಿತ್ರಿ ಜಿಂದಾಲ್ ಒಟ್ಟು 270 ಕೋಟಿ ರೂಪಾಯಿ ಆಸ್ತಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಬಿಜೆಪಿಯ ಶಕ್ತಿ ರಾಣಿ ಶರ್ಮಾ ಮತ್ತು ಶ್ರುತಿ ಚೌಧರಿ ಕ್ರಮವಾಗಿ 145 ಕೋಟಿ ಮತ್ತು 134 ಕೋಟಿ ರೂ. ಆಸ್ತಿಗಳನ್ನು ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ.

2024 ರಲ್ಲಿ ಒಟ್ಟು 30 ಶಾಸಕರು ಮರು ಆಯ್ಕೆಯಾಗಿದ್ದಾರೆ, ಅವರ ಸರಾಸರಿ ಆಸ್ತಿಯು 2019 ರಿಂದ 2024ರ ವೇಳೆಗೆ 59% ದಷ್ಟು ಹೆಚ್ಚಾಗಿದೆ ಎಂದು ವರದಿ ಹೇಳಿದೆ. ಈ 30 ಶಾಸಕರ ಸರಾಸರಿ ಆಸ್ತಿಯು 9.08 ಕೋಟಿಯಿಂದ 14.46 ಕೋಟಿಗೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳ ಪೈಕಿ 12 ಮಂದಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ಆರು ಮಂದಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದು, ಒಬ್ಬ ಆರೋಪಿ ಕೊಲೆ ಯತ್ನದ ಆರೋಪಿ ಎಂದು ಅಂಕಿಅಂಶಗಳು ಹೇಳಿವೆ. 2019ರಲ್ಲಿ ಏಳು ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳಿದ್ದವು.

ಪಕ್ಷವಾರು, 19% ಕಾಂಗ್ರೆಸ್ ಶಾಸಕರು, 6% ಬಿಜೆಪಿ ಶಾಸಕರು ಮತ್ತು 67% ಪಕ್ಷೇತರ ಶಾಸಕರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇವೆ ಎಂದು ಘೋಷಿಸಿದ್ದಾರೆ.

ಇದನ್ನೂಓದಿ: ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ, 68% ವಿಜೇತ ಅಭ್ಯರ್ಥಿಗಳು ಪದವೀಧರರು ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಆದರೆ 29% ದಷ್ಟು ಶಾಸಕರು 8 ನೇ ತರಗತಿಯಿಂದ 12 ನೇ ತರಗತಿಯವರೆಗೆ ಮಾತ್ರ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಹರಿಯಾಣದ ಹೊಸ ಸದನವು 14% ಮಹಿಳಾ ಶಾಸಕರನ್ನು ಹೊಂದಿದೆ. ಇದು 2019ಕ್ಕೆ ಹೋಲಿಸಿದರೆ 10% ಹೆಚ್ಚಳವಾಗಿದೆ. ಅದಾಗ್ಯೂ, ಈ ಶಾಸಕರಲ್ಲಿ 66% ಶಾಸಕರು 51 ರಿಂದ 80 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರದಿ ಹೇಳಿದೆ.

ಹರಿಯಾಣದ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಆಡಳಿತ ವಿರೋಧಿ ಅಲೆಯ ಮಧ್ಯೆ ಕೂಡಾ ಕಾಂಗ್ರೆಸ್‌ ಅನ್ನು ಅಧಿಕಾರದಿಂದ ಹೊರಗಿಟ್ಟಿದೆ.

ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್‌ 37 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಜೆಜೆಪಿ ಮತ್ತು ಎಎಪಿಯಂತಹ ಪಕ್ಷಗಳು ಖಾತೆ ತೆರೆಯುವಲ್ಲಿ ವಿಫಲವಾಗಿವೆ.

ವಿಡಿಯೊ ನೋಡಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...