Homeಮುಖಪುಟಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ -...

ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

- Advertisement -
- Advertisement -

ಹರಿಯಾಣ ವಿಧಾನಸಭೆಗೆ ಹೊಸದಾಗಿ ಚುನಾಯಿತವಾದ 90 ಸದಸ್ಯರ ಪೈಕಿ 86 ಶಾಸಕರು (96%) ಕೋಟ್ಯಾಧಿಪತಿಗಳಾಗಿದ್ದು, 12 (13%) ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಣೆ ಮಾಡಿದೆ. ಕೋಟ್ಯಾಧಿಪತಿ ಶಾಸಕರ ಸಂಖ್ಯೆ ಏರಿಕೆಯಾಗಿದ್ದು, 2019ರ ಚುನಾವಣೆಯಲ್ಲಿ 93% ಕೋಟ್ಯಾಧಿಪತಿ ಶಾಸಕರಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ಶಾಸಕರ ಪೈಕಿ 44%ದಷ್ಟು ಮಂದಿ 10 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ. ಮತ್ತೊಂದೆಡೆ 2.2%ರಷ್ಟು ಶಾಸಕರು ಮಾತ್ರ 20 ಲಕ್ಷಕ್ಕಿಂತ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್‌ ಅಂಕಿಅಂಶಗಳು ಹೇಳಿದೆ.

ಪ್ರತಿ ವಿಜೇತ ಅಭ್ಯರ್ಥಿಯ ಸರಾಸರಿ ಆಸ್ತಿಯು 24.97 ಕೋಟಿ ರೂಪಾಯಿಗಳಷ್ಟಿದ್ದು, ಇದು 2019 ರಲ್ಲಿ 18.29 ಕೋಟಿ ರೂಪಾಯಿಗಳಿತ್ತು ಎಂದು ವರದಿ ಉಲ್ಲೇಖಿಸಿದೆ. 

ಪಕ್ಷವಾರು, 96% ಬಿಜೆಪಿ ಶಾಸಕರು, 95% ಕಾಂಗ್ರೆಸ್ ಶಾಸಕರು ಮತ್ತು 100% ಐಎನ್‌ಎಲ್‌ಡಿ ಶಾಸಕರು 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಜೊತೆಗೆ ಒಬ್ಬ ಪಕ್ಷೇತರ ಶಾಸಕ 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ನೂತನ ಹರಿಯಾಣ ವಿಧಾನಸಭೆಯಲ್ಲಿ ಹಿಸಾರ್‌ನ ಸ್ವತಂತ್ರ ಶಾಸಕಿ ಸಾವಿತ್ರಿ ಜಿಂದಾಲ್ ಒಟ್ಟು 270 ಕೋಟಿ ರೂಪಾಯಿ ಆಸ್ತಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಬಿಜೆಪಿಯ ಶಕ್ತಿ ರಾಣಿ ಶರ್ಮಾ ಮತ್ತು ಶ್ರುತಿ ಚೌಧರಿ ಕ್ರಮವಾಗಿ 145 ಕೋಟಿ ಮತ್ತು 134 ಕೋಟಿ ರೂ. ಆಸ್ತಿಗಳನ್ನು ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ.

2024 ರಲ್ಲಿ ಒಟ್ಟು 30 ಶಾಸಕರು ಮರು ಆಯ್ಕೆಯಾಗಿದ್ದಾರೆ, ಅವರ ಸರಾಸರಿ ಆಸ್ತಿಯು 2019 ರಿಂದ 2024ರ ವೇಳೆಗೆ 59% ದಷ್ಟು ಹೆಚ್ಚಾಗಿದೆ ಎಂದು ವರದಿ ಹೇಳಿದೆ. ಈ 30 ಶಾಸಕರ ಸರಾಸರಿ ಆಸ್ತಿಯು 9.08 ಕೋಟಿಯಿಂದ 14.46 ಕೋಟಿಗೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳ ಪೈಕಿ 12 ಮಂದಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ಆರು ಮಂದಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದು, ಒಬ್ಬ ಆರೋಪಿ ಕೊಲೆ ಯತ್ನದ ಆರೋಪಿ ಎಂದು ಅಂಕಿಅಂಶಗಳು ಹೇಳಿವೆ. 2019ರಲ್ಲಿ ಏಳು ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳಿದ್ದವು.

ಪಕ್ಷವಾರು, 19% ಕಾಂಗ್ರೆಸ್ ಶಾಸಕರು, 6% ಬಿಜೆಪಿ ಶಾಸಕರು ಮತ್ತು 67% ಪಕ್ಷೇತರ ಶಾಸಕರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇವೆ ಎಂದು ಘೋಷಿಸಿದ್ದಾರೆ.

ಇದನ್ನೂಓದಿ: ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ, 68% ವಿಜೇತ ಅಭ್ಯರ್ಥಿಗಳು ಪದವೀಧರರು ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಆದರೆ 29% ದಷ್ಟು ಶಾಸಕರು 8 ನೇ ತರಗತಿಯಿಂದ 12 ನೇ ತರಗತಿಯವರೆಗೆ ಮಾತ್ರ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಹರಿಯಾಣದ ಹೊಸ ಸದನವು 14% ಮಹಿಳಾ ಶಾಸಕರನ್ನು ಹೊಂದಿದೆ. ಇದು 2019ಕ್ಕೆ ಹೋಲಿಸಿದರೆ 10% ಹೆಚ್ಚಳವಾಗಿದೆ. ಅದಾಗ್ಯೂ, ಈ ಶಾಸಕರಲ್ಲಿ 66% ಶಾಸಕರು 51 ರಿಂದ 80 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರದಿ ಹೇಳಿದೆ.

ಹರಿಯಾಣದ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಆಡಳಿತ ವಿರೋಧಿ ಅಲೆಯ ಮಧ್ಯೆ ಕೂಡಾ ಕಾಂಗ್ರೆಸ್‌ ಅನ್ನು ಅಧಿಕಾರದಿಂದ ಹೊರಗಿಟ್ಟಿದೆ.

ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್‌ 37 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಜೆಜೆಪಿ ಮತ್ತು ಎಎಪಿಯಂತಹ ಪಕ್ಷಗಳು ಖಾತೆ ತೆರೆಯುವಲ್ಲಿ ವಿಫಲವಾಗಿವೆ.

ವಿಡಿಯೊ ನೋಡಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...