Homeಮುಖಪುಟಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

ಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

- Advertisement -
- Advertisement -

ಕೊರೊನಾ ನಿಯಂತ್ರಣಕ್ಕೆ ಹರಿಯಾಣದಲ್ಲಿ ಹೇರಲಾಗಿರುವ ಲಾಕ್‌ಡೌನ್ ಅನ್ನು ಮೇ 17 ರವರೆಗೆ ವಿಸ್ತರಿಸಲಾಗಿದೆ. ಜೊತೆಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 5 ಸಾವಿರ ರೂಪಾಯಿ ನೀಡಲು ಹರಿಯಾಣ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.

“ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಹೆಚ್ಚು ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಮೇ 10 ರಿಂದ 17 ರವರೆಗೆ ಸುರಕ್ಷಿತ್ ಹರಿಯಾಣ ಅಭಿಯಾನ ಘೋಷಿಸಿದ್ದು, ಹರಿಯಾಣದಲ್ಲಿ ಕೊರೊನಾ ಹರಡುವುದನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹರಿಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

“ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅವರ ಜೀವನೋಪಾಯ ಸ್ಥಗಿತಗೊಂಡಿರುವುದರಿಂದ 5000 ರೂಪಾಯಿಗಳನ್ನು ನೀಡಲು ನಿರ್ಧರಿಸಲಾಗಿದೆ. ಕೊರೊನಾ ಕಾರಣದಿಂದಾಗಿ ಅವರೆಲ್ಲಾ ಮನೆಯಲ್ಲಿಯೇ ಇರಬೇಕಾಗುತ್ತದೆ. ಹೀಗಾಗಿ ಅವರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ” ಎಂದು ಸಚಿವ ಅನಿಲ್ ವಿಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!


ಸಾಂಕ್ರಾಮಿಕ ಎಚ್ಚರಿಕೆ ‘ಸುರಕ್ಷಿತ್ ಹರಿಯಾಣ’ ರಾಜ್ಯದಲ್ಲಿ ಮೇ 10-17 ರಿಂದ ಒಂದು ವಾರದವರೆಗೆ ಘೋಷಿಸಲಾಗಿದೆ. 1 ನೇ ಲಾಕ್‌ಡೌನ್‌ನ ನಿಯಮಗಳಿಗೆ ಮತ್ತಷ್ಟು ನಿಯಮಗಳನ್ನು ಸೇರಿಸಲಾಗಿದೆ. ಮದುವೆ ಮತ್ತು ಅಂತ್ಯಕ್ರಿಯೆಗಳಲ್ಲಿ ಸಹ 11 ಕ್ಕೂ ಹೆಚ್ಚು ಜನರು ಒಟ್ಟುಗೂಡುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಯಾವುದೇ ಮೆರವಣಿಗೆಗೆ ಅವಕಾಶವಿಲ್ಲ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.

ವಿವಾಹಗಳನ್ನು ಗರಿಷ್ಠ 11 ಜನರ ಮಿತಿಯೊಂದಿಗೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಬರಾತ್ (ವಿವಾಹ ವಿಧಿ) ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ ವ್ಯಾಕ್ಸಿನೇಷನ್ ಕೇಂದ್ರಗಳು, ಬ್ಯಾಂಕುಗಳು ಮತ್ತು ಅಗತ್ಯ ಸೇವೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ ಎಂದು ತಿಳಿಸಲಾಗಿದೆ.

ಹರಿಯಾಣದಲ್ಲಿ 24 ಗಂಟೆಗಳಲ್ಲಿ 13,548 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 1,16,867 ಕ್ಕೆ ಏರಿಕೆಯಾಗಿದೆ. ಈ ಹಿಂದೆ ಸೋಂಕು ನಿಯಂತ್ರಿಸಲು ಮೇ 3 ರಿಂದ ಮೇ 9 ರವರೆಗೆ ಒಂದು ವಾರದ ಸಂಪೂರ್ಣ ಲಾಕ್‌ಡೌನ್ ವಿಧಿಸಲಾಗಿತ್ತು.

ರಾಜ್ಯದಲ್ಲಿಯೂ ಲಾಕ್‌ಡೌನ್ ಪದ ಬಳಸದೇ ಲಾಕ್‌ಡೌನ್ ಹೇರಿರುವುದನ್ನು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದು, ಆರ್ಥಿಕ ಪ್ಯಾಕೇಜ್ ಘೋಷಣೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...