Homeಮುಖಪುಟಹರಿಯಾಣ ನಂತರ ಮಹಾರಾಷ್ಟ್ರದ ಕಡೆಗೆ ಆರೆಸ್ಸೆಸ್‌ | ಬಿಜೆಪಿಗೆ ಲಾಭ ಮಾಡಲು ತಂಡ ರಚನೆ!

ಹರಿಯಾಣ ನಂತರ ಮಹಾರಾಷ್ಟ್ರದ ಕಡೆಗೆ ಆರೆಸ್ಸೆಸ್‌ | ಬಿಜೆಪಿಗೆ ಲಾಭ ಮಾಡಲು ತಂಡ ರಚನೆ!

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿಯಿದ್ದು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಪರವಾಗಿ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವ್ಯಾಪಕ ಪ್ರಚಾರ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಬಿಜೆಪಿಯ ಮಾತೃ ಸಂಘಟನೆಯಾಗಿರುವ ಆರ್‌ಎಸ್‌ಎಸ್ ತನ್ನ ಎಲ್ಲಾ ಅಂಗಸಂಸ್ಥೆಗಳೊಂದಿಗೆ ಸಮನ್ವಯದಿಂದ ಈ ಕ್ರಮವನ್ನು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹರಿಯಾಣ 

“ರಾಜ್ಯದಾದ್ಯಂತ ತಂಡಗಳನ್ನು ರಚಿಸಲಾಗಿದೆ ಮತ್ತು ಅವರು ತಮ್ಮ ಪ್ರದೇಶಗಳಲ್ಲಿನ ಜನರನ್ನು ತಲುಪಲು ಪ್ರಾರಂಭಿಸಿದ್ದು, ಸಂದೇಶವನ್ನು ತೆಗೆದುಕೊಳ್ಳುತ್ತಿದ್ದಾರೆ” ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ. ಪ್ರತಿ ತಂಡವು 5-10 ಜನರೊಂದಿಗೆ ಸಣ್ಣ ಗುಂಪು ಸಭೆಗಳನ್ನು ನಡೆಸುತ್ತಿದ್ದು, ಆಯಾ ಪ್ರದೇಶಗಳಲ್ಲಿನ ‘ಮೊಹಲ್ಲಾ’ಗಳಲ್ಲಿ ತಮ್ಮ ಸ್ಥಳೀಯ ನೆಟ್‌ವರ್ಕ್ ಮೂಲಕ ಕುಟುಂಬಗಳನ್ನು ತಲುಪುತ್ತಿದೆ ಎಂದು ಮೂಲಗಳು ತಿಳಿಸಿವೆ. ಹರಿಯಾಣ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಈ ಸಭೆಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಬಿಜೆಪಿಯನ್ನು ಬೆಂಬಲಿಸಿ ಎಂದು ಸ್ಪಷ್ಟವಾಗಿ ಹೇಳುವುದಿಲ್ಲ. ಆದರೆ ರಾಷ್ಟ್ರೀಯ ಹಿತಾಸಕ್ತಿ, ಹಿಂದುತ್ವ, ಉತ್ತಮ ಆಡಳಿತ, ಅಭಿವೃದ್ಧಿ, ಸಾರ್ವಜನಿಕ ಕಲ್ಯಾಣ ಮತ್ತು ಸಮಾಜಕ್ಕೆ ಸಂಬಂಧಿಸಿದ ವಿವಿಧ ಸ್ಥಳೀಯ ವಿಷಯಗಳ ಬಗ್ಗೆ ನಿಕಟ ಚರ್ಚೆಗಳ ಮೂಲಕ ಜನರಲ್ಲಿ ಅಭಿಪ್ರಾಯ ರೂಪಿಸುತ್ತಾರೆ” ಎಂದು ಮೂಲಗಳು ತಿಳಿಸಿವೆ.

ತಂಡಗಳನ್ನು ರಚಿಸುವ ಮೊದಲು, ಆರೆಸ್ಸೆಸ್ ಮತ್ತು ಅದರ ಅಂಗಸಂಸ್ಥೆಗಳ ಪದಾಧಿಕಾರಿಗಳು ರಾಜ್ಯದ ಎಲ್ಲಾ ಹಂತಗಳಲ್ಲಿ ಕಾರ್ಯತಂತ್ರವನ್ನು ರೂಪಿಸಲು ಸಮನ್ವಯ ಸಭೆಗಳನ್ನು ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಇತ್ತಿಚೆಗೆ ಮುಕ್ತಾಯಗೊಂಡ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ನಂತರ ಆರೆಸ್ಸೆಸ್‌ನ ಈ ಕ್ರಮಕ್ಕೆ ಭಾರಿ ಮಹತ್ವ ಸಿಕ್ಕಿದೆ. ಹರಿಯಾಣದಾದ್ಯಂತ ತನ್ನ ಅಂಗಸಂಸ್ಥೆಗಳೊಂದಿಗೆ ನಡೆಸಿದ ಸಮನ್ವಯದೊಂದಿಗೆ ಆರ್‌ಎಸ್‌ಎಸ್ ನಡೆಸಿದ “ಡ್ರಾಯಿಂಗ್ ರೂಮ್ ಸಭೆಗಳು” ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಯಶಸ್ಸಿನ ಹಿಂದಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಗೆ ಹಿನ್ನೆಡೆ: ಬಿಜೆಪಿ ತೊರೆಯಲು ಮುಂದಾದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್

90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯಿದ್ದರೂ ಬಿಜೆಪಿ 48 ಸ್ಥಾನಗಳನ್ನು ಗೆದ್ದು ಈ ವರೆಗಿನ ಅತ್ಯಂತ ಸ್ಥಾನಗಳನ್ನು ತನ್ನದಾಗಿಸಿತ್ತು. “ಹರಿಯಾಣದಲ್ಲಿ ರಚಿಸಲಾದ ಆರೆಸ್ಸೆಸ್‌ನ ಕಾರ್ಯಕರ್ತರ ತಂಡ ರಾಜ್ಯಾದ್ಯಂತ 1.25 ಲಕ್ಷಕ್ಕೂ ಹೆಚ್ಚು ಸಣ್ಣ ಗುಂಪು ಸಭೆಗಳನ್ನು ನಡೆಸಿದೆ” ಎಂದು ಮತ್ತೊಂದು ಮೂಲವು ಪಿಟಿಐಗೆ ತಿಳಿಸಿದೆ.

ಈ ಸಭೆಗಳು ಹರಿಯಾಣದ ಹಿಂದಿನ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ನೇತೃತ್ವದ ಕಾಂಗ್ರೆಸ್ ಸರ್ಕಾರದ “ಜಾಟ್-ಕೇಂದ್ರಿತ ನೀತಿಗಳು” ಸೇರಿದಂತೆ ವಿವಿಧ ವಿಷಯಗಳನ್ನು ಹೈಲೈಟ್ ಮಾಡುವ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ನೆರವಾದವು ಎಂದು ಮೂಲಗಳು ತಿಳಿಸಿವೆ.

“ಈ ತಂಡಗಳು ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ಜನರ ಆತಂಕವನ್ನು ನಿವಾರಿಸಿದರು. ಅವರು ರೈತರೊಂದಿಗೆ ತೊಡಗಿಸಿಕೊಂಡಿದ್ದು ಅವರ ಭಾವನೆಗಳನ್ನು ಬಿಜೆಪಿ ಪರವಾಗಿ ತಿರುಗಿಸುವಲ್ಲಿ ಯಶಸ್ವಿಯಾದರು” ಎಂದು ಮೂಲಗಳು ತಿಳಿಸಿವೆ. ಆರೆಸ್ಸೆಸ್ ಕಾರ್ಯಕರ್ತರಲ್ಲಿನ ಉತ್ಸಾಹದ ಕೊರತೆಯಿ ಕಾರಣಕ್ಕೆ ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ಮಾಡುವಂತೆ ಆಗಿತ್ತು ಎಂದು ವ್ಯಾಪಕವಾಗಿ ನಂಬಲಾಗಿದೆ.

ಇದನ್ನೂ ಓದಿ: ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...

ಜಮ್ಮು-ಕಾಶ್ಮೀರ| ನಕಲಿ ಗೋರಕ್ಷಕರು ಬೆನ್ನಟ್ಟಿದ್ದರಿಂದ ನದಿಗೆ ಹಾರಿದ ವ್ಯಕ್ತಿ ಕಣ್ಮರೆ; ನಾಲ್ವರ ಬಂಧನ

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಹೆದ್ದಾರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ್ದರಿಂದ ಹೆದರಿದ ಆತ ಸುರಕ್ಷತೆಗಾಗಿ ನದಿಗೆ ಹಾರಿದ್ದಾನೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ರಾಂಬನ್ ಜಿಲ್ಲೆಯ ಉಖ್ರಾಲ್ ತಹಸಿಲ್‌ನ ಪೋಗಲ್‌ನ ಮುಂಡ್‌ಖಾಲ್...

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ)...

ಮಹಿಳಾ ಮೀಸಲಾತಿ ಮಸೂದೆ: ಏಪ್ರಿಲ್ 15 ರಂದು ಕಾಂಗ್ರೆಸ್ ಸರ್ವಪಕ್ಷ ಸಭೆ ಕರೆಯಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚಿಸಲು ಏಪ್ರಿಲ್ 15 ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,...

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...

ನಕಲಿ ನ್ಯಾಯಾಧೀಶನನ್ನು ಬಂಧಿಸಿದ ದೆಹಲಿ ಪೊಲೀಸರು; ಬಂದೂಕು ಹೊಂದಿದ್ದ ವ್ಯಕ್ತಿಗಳು

ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಂಗ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿಂದ ಬಂದೂಕು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರ...

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...