Homeಚಳವಳಿರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ ಹನುಮಾನ್ ಬೆನಿವಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಜಮಾಯಿಸಿರುವ ರೈತರಿಗೆ ದೇಶಾದ್ಯಂತ ಜನರು ತಮ್ಮ ಬೆಂಬಲ ನೀಡುತ್ತಿದ್ದಾರೆ. ರಾಜಕೀಯ ನಾಯಕರೂ ಸಹ ಅನ್ನದಾತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ಹರಿಯಾಣ ಸ್ವತಂತ್ರ ಶಾಸಕ ಸೋಂಬೀರ್ ಸಾಂಗ್ವಾನ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಂಬೀರ್ ಸಾಂಗ್ವಾನ್ ಅವರು ಪಕ್ಷೇತರ ಶಾಸಕರಾಗಿದ್ದು, ಹರಿಯಾಣ ರಾಜ್ಯದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ, “ನಾನು ರೈತರನ್ನು ಬೆಂಬಲಿಸಿ ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಇಡೀ ದೇಶದ ರೈತರಂತೆಯೇ, ನನ್ನ ವಿಧಾನಸಭಾ ಕ್ಷೇತ್ರ ದಾದ್ರಿಯ ರೈತರೂ ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, ಅವರಿಗೆ ಬೆಂಬಲ ನೀಡುವುದು ನನ್ನ ನೈತಿಕ ಕರ್ತವ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ಜೊತೆಗೆ, “ನನ್ನ ಆತ್ಮಸಾಕ್ಷಿ ಮಾತು ಕೇಳಿದ ನಂತರ ನಾನು ರೈತರಿಗೆ ಸಂಪೂರ್ಣ ಬೆಂಬಲ ನೀಡಿದ್ದೇನೆ” ಎಂದು ಶಾಸಕ ಸೋಂಬೀರ್ ಸಾಂಗ್ವಾನ್ ಪತ್ರದಲ್ಲಿ ಬರೆದಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಲು ಹರಿಯಾಣದ ಅನೇಕ ಬೆಂಬಲಿಗರೊಡನೆ ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ರಾಷ್ಟ್ರ ರಾಜಧಾನಿಗೆ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇನೆ ಎಂದು ಶಾಸಕ ಸಾಂಗ್ವಾನ್ ಹೇಳಿದ್ದಾರೆ.

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ, ರಾಜಸ್ಥಾನ ಸಂಸದ ಹನುಮಾನ್ ಬೆನಿವಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಅಕಾಲಿ ದಳ ಈಗಾಗಲೇ ಆಡಳಿತಾರೂಢ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿದೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...