Homeಚಳವಳಿರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ ಹನುಮಾನ್ ಬೆನಿವಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಜಮಾಯಿಸಿರುವ ರೈತರಿಗೆ ದೇಶಾದ್ಯಂತ ಜನರು ತಮ್ಮ ಬೆಂಬಲ ನೀಡುತ್ತಿದ್ದಾರೆ. ರಾಜಕೀಯ ನಾಯಕರೂ ಸಹ ಅನ್ನದಾತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ಹರಿಯಾಣ ಸ್ವತಂತ್ರ ಶಾಸಕ ಸೋಂಬೀರ್ ಸಾಂಗ್ವಾನ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಂಬೀರ್ ಸಾಂಗ್ವಾನ್ ಅವರು ಪಕ್ಷೇತರ ಶಾಸಕರಾಗಿದ್ದು, ಹರಿಯಾಣ ರಾಜ್ಯದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ, “ನಾನು ರೈತರನ್ನು ಬೆಂಬಲಿಸಿ ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಇಡೀ ದೇಶದ ರೈತರಂತೆಯೇ, ನನ್ನ ವಿಧಾನಸಭಾ ಕ್ಷೇತ್ರ ದಾದ್ರಿಯ ರೈತರೂ ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, ಅವರಿಗೆ ಬೆಂಬಲ ನೀಡುವುದು ನನ್ನ ನೈತಿಕ ಕರ್ತವ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ಜೊತೆಗೆ, “ನನ್ನ ಆತ್ಮಸಾಕ್ಷಿ ಮಾತು ಕೇಳಿದ ನಂತರ ನಾನು ರೈತರಿಗೆ ಸಂಪೂರ್ಣ ಬೆಂಬಲ ನೀಡಿದ್ದೇನೆ” ಎಂದು ಶಾಸಕ ಸೋಂಬೀರ್ ಸಾಂಗ್ವಾನ್ ಪತ್ರದಲ್ಲಿ ಬರೆದಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಲು ಹರಿಯಾಣದ ಅನೇಕ ಬೆಂಬಲಿಗರೊಡನೆ ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ರಾಷ್ಟ್ರ ರಾಜಧಾನಿಗೆ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇನೆ ಎಂದು ಶಾಸಕ ಸಾಂಗ್ವಾನ್ ಹೇಳಿದ್ದಾರೆ.

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ, ರಾಜಸ್ಥಾನ ಸಂಸದ ಹನುಮಾನ್ ಬೆನಿವಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಅಕಾಲಿ ದಳ ಈಗಾಗಲೇ ಆಡಳಿತಾರೂಢ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿದೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...