Homeಮುಖಪುಟಅನುಮತಿ ಇಲ್ಲದಿದ್ದರೂ ಮೆರವಣಿಗೆ ನಡೆಸಲು ಮುಂದಾಗಿರುವ ವಿಎಚ್‌ಪಿ: ನುಹ್‌ನಲ್ಲಿ ಇಂಟರ್ನೆಟ್ ಬಂದ್

ಅನುಮತಿ ಇಲ್ಲದಿದ್ದರೂ ಮೆರವಣಿಗೆ ನಡೆಸಲು ಮುಂದಾಗಿರುವ ವಿಎಚ್‌ಪಿ: ನುಹ್‌ನಲ್ಲಿ ಇಂಟರ್ನೆಟ್ ಬಂದ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ನವರು ಅನುಮತಿ ನಿರಾಕರಿಸಿದರೂ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ ಹಾಗಾಗಿ  ಹರ್ಯಾಣದ ಅಧಿಕಾರಿಗಳು ಶನಿವಾರ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಆಗಸ್ಟ್ 28 ರವರೆಗೆ ನಿಷೇಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಸಾರ್ವಜನಿಕವಾಗಿ ಸೇರುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಜಿಲ್ಲೆಯ ನಿವಾಸಿಗಳು ಬಂದೂಕುಗಳು, ಕೋಲುಗಳು ಮತ್ತು ಕೊಡಲಿಗಳಂತಹ ಶಸ್ತ್ರಾಸ್ತ್ರಗಳನ್ನು (ಪರವಾನಗಿ ಪಡೆದಿರುವ ಶಸ್ತ್ರಾಸ್ತ್ರಗಳು) ಸಾರ್ವಜನಿಕವಾಗಿ ಒಯ್ಯುವುದನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ನವರು ಆಗಸ್ಟ್ 28 ರಂದು ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಪುನರಾರಂಭಿಸಲು ಯೋಜಿಸುತ್ತಿದೆ. ಜುಲೈ 31ರಂದು ಇದೇ ಮೆರವಣಿಗೆಯಿಂದ ನುಹ್‌ನಲ್ಲಿ ಹಿಂಸಾಚಾರ ಆರಂಭವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ನಡೆದವು, ಈ ಹಿಂಸಾಚಾರವು ಮುಂದಿನ ದಿನಗಳಲ್ಲಿ ನೆರೆಯ ಗುರುಗ್ರಾಮ್‌ಕ್ಕೂ ಹರಡಿತು.

ಗುರುಗ್ರಾಮ್‌ನಲ್ಲಿ ಹಿಂದೂತ್ವವಾದಿಗಳು ಈ ಹಿಂಸಾಚಾರವನ್ನು ನಡೆದರು. ಸೆಕ್ಟರ್ 57 ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್‌ನನ್ನು ಕೊಂದುಹಾಕಿದರು. ಆಗಸ್ಟ್ 1 ರಂದು ಸೆಕ್ಟರ್ 70 ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಲಾಯಿತು. ಎರಡು ಜಿಲ್ಲೆಗಳಲ್ಲಿ ಹಿಂಸಾಚಾರವು ಆರು ಜನರನ್ನು ಬಲಿತೆಗೆದುಕೊಂಡಿತು.

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂಬ ಆತಂಕದಲ್ಲಿ ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳು ಆಗಸ್ಟ್ 28 ರಂದು ಮೆರವಣಿಗೆಗೆ ಅನುಮತಿಯನ್ನು ನಿರಾಕರಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮತ್ತೊಂದೆಡೆ ಮೆರವಣಿಗೆಗೆ ಸ್ಥಳೀಯ ಆಡಳಿತ ಭದ್ರತೆ ಒದಗಿಸಿ ಅನುಕೂಲ ಮಾಡಿಕೊಡಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಸುರೇಂದ್ರ ಜೈನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ”ಧಾರ್ಮಿಕ ಮೆರವಣಿಗೆಗಳಿಗೆ ಅನುಮತಿ ತೆಗೆದುಕೊಳ್ಳುವುದಿಲ್ಲ. ಧಾರ್ಮಿಕ ಮೆರವಣಿಗೆಗಳಿಗೆ, ಆಡಳಿತವು ಸ್ವತಃ ಮುಂದೆ ಬರುತ್ತದೆ, ಸಹಕಾರ ನೀಡಿ, ಭದ್ರತೆಯನ್ನು ಕೊಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನುಹ್‌ ನಲ್ಲಿ ನಡೆದಂತೆ ಮಧ್ಯಪ್ರದೇಶದಲ್ಲಿ ಬಿಜೆಪಿ  ಗಲಭೆ  ಸೃಷ್ಟಿಸಲು ಯತ್ನಿಸುತ್ತದೆ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...