Homeಮುಖಪುಟಆಮ್ಲಜನಕ ಸಾಗಣೆಗೆ ಹರಿಯಾಣದ ಅಧಿಕಾರಿಯಿಂದ ತಡೆ: ಮನೀಶ್ ಸಿಸೋಡಿಯಾ

ಆಮ್ಲಜನಕ ಸಾಗಣೆಗೆ ಹರಿಯಾಣದ ಅಧಿಕಾರಿಯಿಂದ ತಡೆ: ಮನೀಶ್ ಸಿಸೋಡಿಯಾ

- Advertisement -
- Advertisement -

ಹರಿಯಾಣ ಸರ್ಕಾರದ ಅಧಿಕಾರಿಯೊಬ್ಬರು ಫರಿದಾಬಾದ್‌ನ ಆಮ್ಲಜನಕ ಸ್ಥಾವರದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯಾಗುವುದಕ್ಕೆ ತಡೆಯೊಡ್ಡಿದ್ದರು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಆರೋಪಿಸಿದ್ದಾರೆ.

ದೆಹಲಿಯ ಆಮ್ಲಜನಕದ ಪ್ರಮಾಣವನ್ನು 378 ಮೆಟ್ರಿಕ್ ಟನ್‌ನಿಂದ 700 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಸರ್ಕಾರ ಒತ್ತಾಯಿಸುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಹರಿಯಾಣ ಸರ್ಕಾರದ ಅಧಿಕಾರಿಯೊಬ್ಬರು ಫರಿದಾಬಾದ್‌ನ ಸ್ಥಾವರದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯಾಗುವುದನ್ನು ನಿಲ್ಲಿಸಿದ್ದಾರೆ. ಉತ್ತರಪ್ರದೇಶದಲ್ಲಿಯೂ ಮಂಗಳವಾರ ಇದೇ ರೀತಿಯ ಘಟನೆ ನಡೆದಿದೆ. ಇದರಿಂದ ಕೆಲವು ಆಸ್ಪತ್ರೆಗಳಲ್ಲಿ ಸಮಸ್ಯೆಗೆ ಕಾರಣವಾಯಿತು, ಈಗ ಆಮ್ಲಜನಕದ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

“ಹೆಚ್ಚಿದ ಆಮ್ಲಜನಕದ ಬಳಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಆಮ್ಲಜನಕ ಕೋಟಾವನ್ನು 700 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ರೋಗಿಗಳನ್ನು ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ” ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

ದೆಹಲಿಯ ಹಲವಾರು ಆಸ್ಪತ್ರೆಗಳಿಗೆ ಹರಿಯಾಣ ಸರ್ಕಾರವು ಆಮ್ಲಜನಕವನ್ನು ಪೂರೈಸಲು ಅನುಮತಿಸುತ್ತಿಲ್ಲ. ನೂರಾರು ಕೊರೊನಾ ವೈರಸ್ ಸೋಂಕಿತ ರೋಗಿಗಳು ತಮ್ಮ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಆಮ್ಲಜನಕ ಪೂರೈಕೆಮಾಡಲು ನಮ್ಮಲ್ಲಿ ಸೀಮಿತ ಸ್ಟಾಕ್ ಮಾತ್ರ ಉಳಿದಿದೆ. ಇದರ ನಡುವೆ ಹರಿಯಾಣ ಸರ್ಕಾರ ಇಂತಹ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ಹರಿಯಾಣದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯನ್ನು ನಿಲ್ಲಿಸುವುದರಿಂದ ಹೆಚ್ಚಿನ ಸಂಖ್ಯೆಯ ಆಸ್ಪತ್ರೆಗಳ ಮೇಲೆ ತೀವ್ರತರದ ಪರಿಣಾಮ ಬೀರುತ್ತದೆ. ಇದರಿಂದ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸಿಸೋಡಿಯಾ ಒತ್ತಾಯಿಸಿದ್ದರು.


ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...