Homeಮುಖಪುಟರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

- Advertisement -
- Advertisement -

ರೈತರ ‘ದೆಹಲಿ ಚಲೋ’ ಪ್ರತಿಭಟನೆಯ ವೇಳೆ ದಾಖಲಿಸಿದ್ದ ಎಫ್‌ಐಆರ್‌ಗೆ  ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಬಂಧಿಸಿದ್ದಾರೆ.

ಫೆಬ್ರವರಿ 21ರಂದು ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾದ ಪಂಜಾಬ್‌ನ ಬಟಿಂಡಾದ ರೈತ ಶುಭಕರನ್ ಸಿಂಗ್ (21) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮುಕ್ತಿ ಮೋರ್ಚಾ (ಕೆಎಂಎಂ) ನಾಳೆ ಸಭೆಯನ್ನು ಆಯೋಜಿಸಿತ್ತು. ಆದರೆ ಇದಕ್ಕೂ ಮುನ್ನಾ ಈ ಮಹತ್ವದ ಬೆಳವಣಿಗೆ ನಡೆದಿದೆ. ಅಂಬಾಲಾ ಪೊಲೀಸರು ಗುರುವಾರ ಮೊಹಾಲಿಯಿಂದ ನವದೀಪ್ ಸಿಂಗ್ ಜಲಬೇರಾ ಅವರನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಹರ್ಯಾಣ ಪೊಲೀಸ್‌ನ ಅಪರಾಧ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪ್ರಕಾರ, ಫೆಬ್ರವರಿ 13 ರಂದು 307 (ಕೊಲೆ ಯತ್ನ) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾದ ಪ್ರಕರಣ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಲ್ಬೇರಾ ಅವರನ್ನು ಬಂಧಿಸಲಾಗಿದೆ.

ಅಂಬಾಲಾ ಮೂಲದ ಜಲ್ಬೆರಾ ಅವರು ನವೆಂಬರ್ 2020ರಲ್ಲಿ ಕೇಂದ್ರದ ಮೂರು  ಕೃಷಿ ಕಾನೂನುಗಳ ವಿರುದ್ಧ ರೈತರ ಚಳವಳಿಯ ಸಮಯದಲ್ಲಿ ಪೊಲೀಸ್ ವಾಟರ್ ಟಾಂಕ್‌ ಮೇಲೆ ಏರಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದರು. 2020ರಲ್ಲಿ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ದೆಹಲಿಯತ್ತ ಮೆರವಣಿಗೆ ನಡೆಸಿದ್ದರು ಮತ್ತು ಭಾರೀ ಪೊಲೀಸ್ ಬ್ಯಾರಿಕೇಡ್‌ಗಳ ಮಧ್ಯೆ ರಾಜಧಾನಿಯ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ರೈತರು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಜಲಬೇರಾ ಪರ ವಕೀಲ ರೋಹಿತ್ ಜೈನ್ ಹೇಳಿದ್ದಾರೆ. ಎಫ್‌ಐಆರ್‌ನಲ್ಲಿ ಹಲವಾರು ಉನ್ನತ ರೈತ ಮುಖಂಡರು ಸೇರಿದಂತೆ 20 ಜನರನ್ನು ಹೆಸರಿಸಲಾಗಿದೆ. ಪೊಲೀಸರು ತಮ್ಮ ವಿರುದ್ಧ ಹೊರಿಸಿರುವ ಆರೋಪಗಳನ್ನು ರೈತರು ನಿರಾಕರಿಸಿದ್ದಾರೆ ಎಂದು ಜೈನ್ ಹೇಳಿದ್ದಾರೆ.

ಆಂದೋಲನಕ್ಕೆ ಬಳಸಿದ ಕಾರು ಮತ್ತು ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಲು ಜಲಬೇರಾ ಅವರ ಬಂಧನದ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಪಂಜಾಬ್ ಮತ್ತು ಹರಿಯಾಣ ನಡುವಿನ ಎರಡು ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡಿರುವ ರೈತರು ಇತ್ತೀಚೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದರು.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಬಂಧಿಸಿದ ಕಾನೂನು ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಬಿಜೆಪಿ ನೇತೃತ್ವದ ಕೇಂದ್ರವನ್ನು ಒತ್ತಾಯಿಸಲು ‘ದೆಹಲಿ ಚಲೋ’ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ರೈತರನ್ನು ತಡೆದಿದ್ದರು. ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಸಿಂಗ್ ಕೊಲ್ಲಲ್ಪಟ್ಟಿದ್ದರು. ಘರ್ಷಣೆಯಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದರು.

ಇದನ್ನು ಓದಿ: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...