Homeಮುಖಪುಟದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿಲ್ಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ಆಡಳಿತದ ಹರ್ಯಾಣದಲ್ಲಿ ಪೊಲೀಸರು ಶಂಭು ಗಡಿಯಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿ ರೈತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಹರ್ಯಾಣ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದು, ಗಡಿಯಲ್ಲಿ ರೈತರ ಟ್ರಕ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ರೈತ ಸಂಘದ ಮುಖಂಡರು ಹಾಗೂ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ಮುಂಡಾ ನಡೆಸಿದ ಮಾತುಕತೆ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ರೈತರು ದೆಹಲಿ ಚಲೋ ಯಾತ್ರೆಯನ್ನು ಮುಂದುವರಿಸಿದ್ದಾರೆ. ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಕಾರಾಗೃಹವನ್ನಾಗಿ ಪರಿವರ್ತಿಸುವಂತೆ ದೆಹಲಿ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು. ಮನವಿಯನ್ನು ತಿರಸ್ಕರಿಸಿದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್, ರೈತರ ಬೇಡಿಕೆಗಳು ನಿಜವಾದವು ಮತ್ತು ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಕೇಂದ್ರ ಸರ್ಕಾರ ವಾಸ್ತವವಾಗಿ ಅವರನ್ನು ಮಾತುಕತೆಗೆ ಆಹ್ವಾನಿಸಬೇಕು ಮತ್ತು ಅವರ ನಿಜವಾದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು. ನಾಡಿನ ರೈತರು ನಮ್ಮ ಅನ್ನದಾತರು, ಅವರನ್ನು ಬಂಧಿಸಿ ಈ ರೀತಿ ನಡೆಸಿಕೊಳ್ಳುವುದು ಅವರ ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ನಾವು ಬೆಂಬಲಿಸಲು  ಸಾಧ್ಯವಿಲ್ಲ. ಹೀಗಾಗಿ ಕ್ರೀಡಾಂಗಣವನ್ನು ಜೈಲಾಗಿ ಪರಿವರ್ತಿಸಲು ಒಪ್ಪಿಗೆ ನೀಡಲಾಗದು ಎಂದು ಹೇಳಿದ್ದಾರೆ.

ಹರ್ಯಾಣ ಮತ್ತು ಉತ್ತರಪ್ರದೇಶದ ಗಡಿ ಪ್ರದೇಶಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಕಂಡುಬಂದಿದ್ದು, ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಬ್ಯಾರಿಕೇಡ್‌ಗಳು, ಕಾಂಕ್ರೀಟ್ ಬ್ಲಾಕ್‌ಗಳು, ಕಬ್ಬಿಣದ ಮೊಳೆಗಳನ್ನು ಹಾಕಿ ರೈತರು ರಾಜಧಾನಿಗೆ ಪ್ರವೇಶಿಸದಂತೆ ನಿರ್ಬಂಧವನ್ನು ವಿಧಿಸಲಾಗಿದೆ. ದೆಹಲಿ ಪೊಲೀಸರು ಸೋಮವಾರ ನಗರದಾದ್ಯಂತ ಸೆಕ್ಷನ್ 144ನ್ನು ಜಾರಿಗೊಳಿಸಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಗಡಿಗಳನ್ನು ಭದ್ರಪಡಿಸಿದ್ದಾರೆ. ಹೆಚ್ಚುವರಿಯಾಗಿ ಯಾವುದೇ ಚಟುವಟಿಕೆಗಳ ಬಗ್ಗೆ ನಿಗಾ ಇಡಲು ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ಕಣ್ಗಾವಲು ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ.

ರಾಜೀವ್ ಚೌಕ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಪಟೇಲ್ ಚೌಕ್, ಉದ್ಯೋಗ ಭವನ, ಜನಪಥ್ ಮತ್ತು ಬರಾಖಂಬಾ ರಸ್ತೆಯ ಮೆಟ್ರೋ ನಿಲ್ದಾಣಗಳ ಕೆಲವು ಗೇಟ್‌ಗಳನ್ನು ಮುಚ್ಚಲಾಗಿದೆ. ಬೃಹತ್ ಭದ್ರತೆಗೆ ಬೆದರದ ರೈತರು ದೆಹಲಿಯತ್ತ ಸಾಗಿದ್ದಾರೆ. ರಾಜ್ಯ ಸರ್ಕಾರಗಳು ದೆಹಲಿಗೆ ತೆರಳದಂತೆ ತಡೆದರೆ  ಅನಿರ್ದಿಷ್ಟಾವಧಿವರೆಗೆ ಧರಣಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಅವರು ರೈತರೊಂದಿಗೆ ಚರ್ಚೆಗೆ ಸರ್ಕಾರ ಏಕೆ ಸಿದ್ಧವಾಗಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಬೇಕು. ನಾವು ಭಾರತದ ಜನರಿಗೆ ಹೇಳಲು ಬಯಸುತ್ತೇವೆ, ನಾವು ಸರ್ಕಾರದ ವಿರುದ್ಧವಲ್ಲ, ನಾವು ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸಿದ್ದೇವೆ. ಅವರು ಪೊಲೀಸರನ್ನು ಕಳುಹಿಸುತ್ತಿದ್ದಾರೆ ಮತ್ತು ಹರಿಯಾಣದ ಪ್ರತಿಯೊಂದು ಹಳ್ಳಿಗಳಲ್ಲಿ ಜಲಫಿರಂಗಿಗಳನ್ನು ಬಳಸುತ್ತಿದ್ದಾರೆ. ಹರ್ಯಾಣದಲ್ಲಿ ರೈತರಿಗೆ ಹಿಂಸೆ ನೀಡುತ್ತಿದ್ದಾರೆ. ಈ ಎರಡೂ ರಾಜ್ಯಗಳು ಗಡಿಯನ್ನು ಬಂದ್‌ ಮಾಡಿರುವ ರೀತಿ ನೋಡಿದರೆ ಅದು ಭಾರತದ ಭಾಗವಾಗಿಲ್ಲದಂತೆ ತೋರುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...