Homeಮುಖಪುಟಹರಿಯಾಣ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ಜೆಜೆಪಿಯ ಚೌಟಾಲಾ

ಹರಿಯಾಣ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ಜೆಜೆಪಿಯ ಚೌಟಾಲಾ

- Advertisement -
- Advertisement -

ಮೂವರು ಸ್ವತಂತ್ರ ಶಾಸಕರು ಹರಿಯಾಣದ ನಯಾಬ್ ಸಿಂಗ್ ಸೈನಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡ ಕೆಲವು ದಿನಗಳ ನಂತರ, ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಯ ದುಶ್ಯಂತ್ ಚೌತಾಲ ಅವರು ಗುರುವಾರ ಹರ್ಯಾಣದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ವಿಶ್ವಾಸಮತ ಯಾಚನೆಗೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಜನನಾಯಕ್ ಜನತಾ ಪಕ್ಷವು ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ಕಾಂಗ್ರೆಸ್‌ಗೆ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಈಗಾಗಲೇ ಹೇಳಿದೆ.

ಮೇ 7 ರಂದು, ಮೂವರು ಸ್ವತಂತ್ರ ಶಾಸಕರ ಹಠಾತ್ ನಡೆಯ ನಂತರ ಹರಿಯಾಣ ಸರ್ಕಾರವು ಆಘಾತವನ್ನು ಅನುಭವಿಸಿದ್ದು, ಸೈನಿ ಸರ್ಕಾರ ಬಹುಮತ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದೆ. ಪುಂಡ್ರಿಯಿಂದ ರಣಧೀರ್ ಗೋಲನ್, ನಿಲೋಖೇರಿಯಿಂದ ಧರ್ಮಪಾಲ್ ಗೊಂಡರ್ ಮತ್ತು ಚಾರ್ಖಿ ದಾದ್ರಿಯಿಂದ ಸೋಂಬಿರ್ ಸಿಂಗ್ ಸಾಂಗ್ವಾನ್ ಮೂವರು ಶಾಸಕರು ಬೆಂಬಲ ವಾಪಸ್ ಪಡೆದಿದ್ದು, ಅವರೆಲ್ಲರೂ ಕಾಂಗ್ರೆಸ್‌ ಜೊತೆ ನಿಲ್ಲಲು ನಿರ್ಧರಿಸಿದ್ದಾರೆ.

ಎರಡು ತಿಂಗಳ ಹಿಂದೆ ರಚನೆಯಾದ ಸರ್ಕಾರವು ಈಗ ಬಹುಮತದ ಕೊರತೆ ಎದುರಿಸುತ್ತಿದೆ. ಏಕೆಂದರೆ, ಬಿಜೆಪಿಯನ್ನು ಬೆಂಬಲಿಸಿದ ಒಬ್ಬರು ಬಿಜೆಪಿ ಮತ್ತು ಇನ್ನೊಬ್ಬರು ಸ್ವತಂತ್ರ ಶಾಸಕರು ರಾಜೀನಾಮೆ ನೀಡಿದ್ದಾರೆ. ಅವರನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ತಮ್ಮ ಬೆಂಬಲವನ್ನು ಹಿಂಪಡೆದಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿರುವ ಜೆಜೆಪಿ ಈ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. “ಪ್ರಸ್ತುತ ಬಿಜೆಪಿ ಸರ್ಕಾರವನ್ನು ಮೂಲೆಗುಂಪು ಮಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಬೇಕು” ಎಂದು ದುಷ್ಯಂತ್ ಚೌತಾಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು “ಬಹುಮತ” ಹೊಂದಿಲ್ಲದಿದ್ದರೆ ರಾಜ್ಯಪಾಲರು ಹರಿಯಾಣದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಅವರು ಹೇಳಿದರು.

ಸರ್ಕಾರಕ್ಕೆ ಅಗತ್ಯವಿರುವ ಬಲವಿದೆಯೇ ಮತ್ತು ಬಹುಮತ ಇಲ್ಲದಿದ್ದಲ್ಲಿ ತಕ್ಷಣವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಲು ವಿಶ್ವಾಸಮತ ಪರೀಕ್ಷೆಗೆ ಆದೇಶಿಸಲು ರಾಜ್ಯಪಾಲರಿಗೆ ಅಧಿಕಾರವಿದೆ ಎಂದು ಅವರು ಹೇಳಿದರು.

ಆದರೂ, ತಮ್ಮ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ. ಅವರ ಹಿಂದಿನ ಮತ್ತು ಪಕ್ಷದ ಸಹೋದ್ಯೋಗಿ ಎಂಎಲ್ ಖಟ್ಟರ್ ಅವರು ‘ಅನೇಕ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ, ಚಿಂತಿಸಲು ಏನೂ ಇಲ್ಲ’ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೇವಲ ಹದಿನೈದು ದಿನಗಳು ಬಾಕಿ ಇರುವಾಗ ಮತ್ತು ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಸಮಯದಲ್ಲಿ ರಾಜ್ಯದಲ್ಲಿ ತ್ವರಿತ ಗತಿಯ ರಾಜಕೀಯ ಬೆಳವಣಿಗೆಗಳು ಬಂದಿವೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಯು ಪ್ರಸ್ತುತ 88 ರ ಪರಿಣಾಮಕಾರಿ ಬಲವನ್ನು ಹೊಂದಿದೆ. ಕರ್ನಾಲ್ ಮತ್ತು ರಾನಿಯಾ ವಿಧಾನಸಭಾ ಸ್ಥಾನಗಳು ಖಾಲಿ ಇವೆ. ಸದನದಲ್ಲಿ ಬಿಜೆಪಿ 40, ಕಾಂಗ್ರೆಸ್ 30 ಮತ್ತು ಜೆಜೆಪಿ 10 ಶಾಸಕರನ್ನು ಹೊಂದಿದೆ. ಐಎನ್‌ಡಿಎಲ್ ಮತ್ತು ಹರಿಯಾಣ ಲೋಕಿತ್ ಪಕ್ಷವು ಒಬ್ಬ ಸದಸ್ಯರನ್ನು ಹೊಂದಿದೆ. ಆರು ಜನ ಪಕ್ಷೇತರ ಶಾಸಕರಿದ್ದಾರೆ.

ಸರ್ಕಾರಕ್ಕೆ ಇಬ್ಬರು ಸ್ವತಂತ್ರ ಶಾಸಕರ ಬೆಂಬಲವಿದೆ. ಸ್ವತಂತ್ರ ಶಾಸಕ ನಯನ್ ಪಾಲ್ ರಾವತ್ ಅವರು 2019 ರಲ್ಲಿ ಬಿಜೆಪಿಗೆ ಬೇಷರತ್ ಬೆಂಬಲ ನೀಡಿದ್ದರು ಮತ್ತು ಅದು ಈಗಲೂ ಮುಂದುವರೆದಿದೆ.

ಇದನ್ನೂ ಓದಿ; ಸಂದೇಶಖಾಲಿ ‘ಸ್ಟಿಂಗ್ ಆಪರೇಷನ್’: ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಟಿಎಂಸಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...