Homeಚಳವಳಿಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

ಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಈಗ ಸರ್ಕಾರದ ವಿರುದ್ಧದ ಹೋರಾಟವಾಗಿ ಬದಲಾಗಿದೆ. ರೈತರ ಮಾತು ಕೇಳದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರು ನಿರ್ಧರಿಸಿದ್ದಾರೆ.  ಹರಿಯಾಣ ಸರ್ಕಾರ ಮಾರ್ಚ್ 10ಕ್ಕೆ ವಿಶ್ವಾಸಮತ ಯಾಚನೆ ಮಾಡಲಿದ್ದು, ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುವುದಾಗಿ ಘೋಷಿಸಿರುವ ರೈತ ಮುಖಂಡರು, ಮಾರ್ಚ್ 13 ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಆರಂಭಿಸಲಿದ್ದಾರೆ. ಸ್ಥಳೀಯ ರೈತರೊಂದಿಗೆ ಮಾತನಾಡಿ, ಕೃಷಿ ಕಾನೂನುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮಾರ್ಚ್ 10 ರಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌, ವಿಶ್ವಾಸಮತ ಯಾಚಿಸಲಿದ್ದಾರೆ. ಅಂದು ರಾಜ್ಯದ ಬಿಜೆಪಿ-ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ತಮ್ಮ ಸ್ಥಳೀಯ ಶಾಸಕರ ಮೇಲೆ ಒತ್ತಡ ಹೇರುವಂತೆ ಎಸ್‌ಕೆಎಂ ರೈತರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ಬಿಜೆಪಿ- ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸಬೇಕು ಎಂಬುದು ಸಂಯುಕ್ತ ಕಿಸಾನ್ ಮೋರ್ಚಾದ ಆಲೋಚನೆಯಾಗಿದೆ. ಹರಿಯಾಣದ ಹಲವು ಶಾಸಕರು ರೈತ ಹೋರಾಟಕ್ಕೆ ಮುಕ್ತ ಬೆಂಬಲ ನೀಡಿದ್ದಾರೆ.

“ರೈತರ ಚಳವಳಿಯ ಈ ನಿರ್ಣಾಯಕ ಹಂತದಲ್ಲಿ ರೈತರೊಂದಿಗೆ ನಿಲ್ಲದವರಿಗೆ ಭವಿಷ್ಯದಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ಹರಿಯಾಣದ ಶಾಸಕರಿಗೆ ತಿಳಿಸಿ” ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ಹರಿಯಾಣದ ರೈತರಿಗೆ ತಿಳಿಸಿದೆ.

90 ಸದಸ್ಯರ ವಿಧಾನಸಭೆಯಲ್ಲಿ 50 ಶಾಸಕರೊಂದಿಗೆ ಬಿಜೆಪಿ-ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿಕೂಟದಲ್ಲಿ ಬಹುಮತವಿದೆ. ಆದರೆ ರೈತ ಹೋರಾಟ ಬೆಂಬಲಿಸಿ ಸ್ವತಂತ್ರ ಶಾಸಕರು ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದರು. ಹಾಗಾಗಿ ಕಳೆದ ವಾರ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ಹರಿಯಾಣದ ವಿರೋಧ ಪಕ್ಷವಾದ ಕಾಂಗ್ರೆಸ್, ಮನೋಹರ್ ಲಾಲ್ ಖಟ್ಟರ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಬಿಜೆಪಿಯಲ್ಲಿ 40 ಶಾಸಕರು ಇದ್ದರೆ, ಜೆಜೆಪಿಯಲ್ಲಿ 10 ಶಾಸಕರು ಇದ್ದಾರೆ. ಉಳಿದ 38 ಜನರಲ್ಲಿ ಕಾಂಗ್ರೆಸ್‌ನಲ್ಲಿ 30 ಶಾಸಕರು, ಹರಿಯಾಣ ಲೋಖಿತ್ ಪಕ್ಷಕ್ಕೆ ಒಬ್ಬ ಶಾಸಕರು ಇದ್ದರೆ ಏಳು ಮಂದಿ ಸ್ವತಂತ್ರ ಶಾಸಕರು ಇದ್ದಾರೆ. ಈ ಒಕ್ಕೂಟವು ಏಳು ಸ್ವತಂತ್ರರಲ್ಲಿ ಐವರು ಮತ್ತು ಸದನದಲ್ಲಿ ಹರಿಯಾಣ ಲೋಖಿತ್ ಪಕ್ಷದ ಬೆಂಬಲವನ್ನು ಹೊಂದಿದೆ. ಸರಳ ಬಹುಮತಕ್ಕೆ 45 ಸದಸ್ಯರ ಅಗತ್ಯವಿದೆ.


ಇದನ್ನೂ ಓದಿ: ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...