Homeಚಳವಳಿಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

ಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಈಗ ಸರ್ಕಾರದ ವಿರುದ್ಧದ ಹೋರಾಟವಾಗಿ ಬದಲಾಗಿದೆ. ರೈತರ ಮಾತು ಕೇಳದ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರು ನಿರ್ಧರಿಸಿದ್ದಾರೆ.  ಹರಿಯಾಣ ಸರ್ಕಾರ ಮಾರ್ಚ್ 10ಕ್ಕೆ ವಿಶ್ವಾಸಮತ ಯಾಚನೆ ಮಾಡಲಿದ್ದು, ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುವುದಾಗಿ ಘೋಷಿಸಿರುವ ರೈತ ಮುಖಂಡರು, ಮಾರ್ಚ್ 13 ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಆರಂಭಿಸಲಿದ್ದಾರೆ. ಸ್ಥಳೀಯ ರೈತರೊಂದಿಗೆ ಮಾತನಾಡಿ, ಕೃಷಿ ಕಾನೂನುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮಾರ್ಚ್ 10 ರಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌, ವಿಶ್ವಾಸಮತ ಯಾಚಿಸಲಿದ್ದಾರೆ. ಅಂದು ರಾಜ್ಯದ ಬಿಜೆಪಿ-ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ತಮ್ಮ ಸ್ಥಳೀಯ ಶಾಸಕರ ಮೇಲೆ ಒತ್ತಡ ಹೇರುವಂತೆ ಎಸ್‌ಕೆಎಂ ರೈತರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ಬಿಜೆಪಿ- ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವನ್ನು ಒತ್ತಡಕ್ಕೆ ಸಿಲುಕಿಸಬೇಕು ಎಂಬುದು ಸಂಯುಕ್ತ ಕಿಸಾನ್ ಮೋರ್ಚಾದ ಆಲೋಚನೆಯಾಗಿದೆ. ಹರಿಯಾಣದ ಹಲವು ಶಾಸಕರು ರೈತ ಹೋರಾಟಕ್ಕೆ ಮುಕ್ತ ಬೆಂಬಲ ನೀಡಿದ್ದಾರೆ.

“ರೈತರ ಚಳವಳಿಯ ಈ ನಿರ್ಣಾಯಕ ಹಂತದಲ್ಲಿ ರೈತರೊಂದಿಗೆ ನಿಲ್ಲದವರಿಗೆ ಭವಿಷ್ಯದಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ಹರಿಯಾಣದ ಶಾಸಕರಿಗೆ ತಿಳಿಸಿ” ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ಹರಿಯಾಣದ ರೈತರಿಗೆ ತಿಳಿಸಿದೆ.

90 ಸದಸ್ಯರ ವಿಧಾನಸಭೆಯಲ್ಲಿ 50 ಶಾಸಕರೊಂದಿಗೆ ಬಿಜೆಪಿ-ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿಕೂಟದಲ್ಲಿ ಬಹುಮತವಿದೆ. ಆದರೆ ರೈತ ಹೋರಾಟ ಬೆಂಬಲಿಸಿ ಸ್ವತಂತ್ರ ಶಾಸಕರು ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದರು. ಹಾಗಾಗಿ ಕಳೆದ ವಾರ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ಹರಿಯಾಣದ ವಿರೋಧ ಪಕ್ಷವಾದ ಕಾಂಗ್ರೆಸ್, ಮನೋಹರ್ ಲಾಲ್ ಖಟ್ಟರ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಬಿಜೆಪಿಯಲ್ಲಿ 40 ಶಾಸಕರು ಇದ್ದರೆ, ಜೆಜೆಪಿಯಲ್ಲಿ 10 ಶಾಸಕರು ಇದ್ದಾರೆ. ಉಳಿದ 38 ಜನರಲ್ಲಿ ಕಾಂಗ್ರೆಸ್‌ನಲ್ಲಿ 30 ಶಾಸಕರು, ಹರಿಯಾಣ ಲೋಖಿತ್ ಪಕ್ಷಕ್ಕೆ ಒಬ್ಬ ಶಾಸಕರು ಇದ್ದರೆ ಏಳು ಮಂದಿ ಸ್ವತಂತ್ರ ಶಾಸಕರು ಇದ್ದಾರೆ. ಈ ಒಕ್ಕೂಟವು ಏಳು ಸ್ವತಂತ್ರರಲ್ಲಿ ಐವರು ಮತ್ತು ಸದನದಲ್ಲಿ ಹರಿಯಾಣ ಲೋಖಿತ್ ಪಕ್ಷದ ಬೆಂಬಲವನ್ನು ಹೊಂದಿದೆ. ಸರಳ ಬಹುಮತಕ್ಕೆ 45 ಸದಸ್ಯರ ಅಗತ್ಯವಿದೆ.


ಇದನ್ನೂ ಓದಿ: ನೂರು ದಿನ ಪೂರೈಸಿದ ಐತಿಹಾಸಿಕ ರೈತ ಹೋರಾಟ: ಶಾಂತಿಯುತ ನೆಲೆಯಿಂದ ಇಡೀ ವಿಶ್ವಕ್ಕೆ ಮಾದರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...