Homeಮುಖಪುಟಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

- Advertisement -
- Advertisement -

ಹರಿಯಾಣದ ಗಡಿಯಲ್ಲಿರುವ ರಾಜಸ್ಥಾನದ ಘಟ್ಮೀಕಾ ಗ್ರಾಮದಲ್ಲಿ ಗುರುವಾರ ರಾತ್ರಿ ಭಾರೀ ಪೊಲೀಸರು ಜಮಾಯಿಸಿದ್ದರು. ಆದರೆ ರಾತ್ರಿಯ ವಿಲಕ್ಷಣ ಮೌನವು ಬೆಳಿಗ್ಗೆ ಇಲ್ಲವಾಗಿತ್ತು. ಘಟಮೀಕಾದ ಇಬ್ಬರು ಮುಸ್ಲಿಮರನ್ನು ಹತ್ಯೆಗೈದವರ ವಿರುದ್ಧ ಪ್ರತಿಭಟಿಸಲು ಸಮೀಪದ ಹಳ್ಳಿಗಳಿಂದ ಸುಮಾರು 2,000ಕ್ಕೂ ಜನರು ಧಾವಿಸಿದ್ದರು.

ರಾಜಸ್ಥಾನ-ಹರಿಯಾಣ ಗಡಿಗೆ ಸಮೀಪವಿರುವ ಹರಿಯಾಣದಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿರುವ ಕುರಿತು ‘ದಿ ವೈರ್‌’ ವರದಿ ಮಾಡಿದೆ. ಈ ಅಪರಾಧಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಸ್ವಯಂಘೋಷಿತ ‘ಗೋ ರಕ್ಷಕರು’ ಎಂದು ಕರೆದುಕೊಂಡಿರುವ ಆರೋಪಿಗಳಿಂದಾಗಿ ಭೀತಿ ಉಂಟಾಗಿದೆ.

(ರಾಷ್ಟ್ರ ರಾಜಧಾನಿಯಿಂದ ಕೇವಲ 100 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಘಟನೆ ನಡೆದಿದ್ದು, ಗೋರಕ್ಷಣೆ ಹೆಸರಲ್ಲಿ ದುಷ್ಕೃತ್ಯ ಜರುಗಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿದ್ದ ಇಬ್ಬರು ಮುಸ್ಲಿಮರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಕಾರಿನೊಳಗೆ ಕೂಡಿಹಾಕಿ ಜೀವಂತವಾಗಿ ಕೊಂದಿರುವ ಆರೋಪ ಕೇಳಿಬಂದಿದೆ.)

ಘಟಮೀಕದಲ್ಲಿ ಸಣ್ಣ ರೈತರು ಮತ್ತು ಲಾರಿ ಚಾಲಕರು ಹೆಚ್ಚಾಗಿ ವಾಸಿಸುತ್ತಿದ್ದು, 2017ರಲ್ಲಿ ಉಮರ್ ಖಾನ್ ಹತ್ಯೆಯಾಗಿತ್ತು. ಆ ನಂತರದಲ್ಲಿ ಈ ಗ್ರಾಮದಲ್ಲಿ ಅಂತಹ ಉದ್ವಿಗ್ನ ವಾತಾವರಣ ಕಂಡುಬಂದಿರಲಿಲ್ಲ.

‘ದಿ ವೈರ್‌’ನೊಂದಿಗೆ ಮಾತನಾಡಿರುವ ಉಮರ್ ಅವರ ಮಗ ಮಕ್ಸೂದ್, “ಹಾಲಿನ ಉದ್ದೇಶಕ್ಕಾಗಿಯಾದರೂ ಪಕ್ಕದ ಹಳ್ಳಿಗಳಿಂದ ಹಸುಗಳನ್ನು ಖರೀದಿಸಲು ಸಾಧ್ಯವಿಲ್ಲವಾಗಿದೆ ಎಂದು ಜನ ಹೇಳುತ್ತಿದ್ದಾರೆ. ನನ್ನ ತಂದೆಗೆ ಬಂದೊದಗಿದ ಸ್ಥಿತಿಯು ಅವರಲ್ಲಿ ಭೀತಿಯನ್ನು ಉಂಟುಮಾಡಿದೆ” ಎಂದಿದ್ದಾರೆ.

“ಪೆಹ್ಲು, ರಖ್ಬರ್, ಜುನೈದ್ ಮತ್ತು ನನ್ನ ತಂದೆ ಉಮರ್ ಅವರಂತಹ ಹಲವಾರು ಪ್ರಕರಣಗಳ ನಂತರವೂ ಗೂಂಡಾಗಳು ತಮ್ಮ ಧೈರ್ಯವನ್ನು ಮುಂದುವರಿಸಿದ್ದಾರೆ. ಅಪರಾಧಿಗಳಿಗೆ ಪ್ರಸ್ತುತ ಕೇಂದ್ರ ಬಿಜೆಪಿ ಸರ್ಕಾರವು ಭೀತಿಯಿಲ್ಲದ ವಾತಾವರಣವನ್ನು ಸೃಷ್ಟಿ ಮಾಡಿದೆ” ಎನ್ನುತ್ತಾರೆ ಮಕ್ಸೂದ್.

ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಆರೋಪಗಳಲ್ಲಿ ಪೊಲೀಸರು ಕೊಲೆಯ ಸೆಕ್ಷನ್‌ಗಳನ್ನು ಏಕೆ ಸೇರಿಸಿಲ್ಲ? ಅದನ್ನು ಕೇವಲ ಅಪಹರಣದ ಪ್ರಕರಣವೆಂದು ಏಕೆ ತೋರಿಸಲು ಪ್ರಯತ್ನಿಸುತ್ತಿದ್ದಾರೆ? ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 365 (ಅಪಹರಣ), 367 (ಒಬ್ಬ ವ್ಯಕ್ತಿಗೆ ನೋವು ನೀಡಲು ಅಪಹರಣ) ಮತ್ತು 368 (ತಪ್ಪಾದ ಬಂಧನ) ಅಡಿಯಲ್ಲಿ FIR ದಾಖಲಿಸಲಾಗಿದೆ. ಆದಾಗ್ಯೂ, ಕೆಲವು ಸ್ಥಳೀಯರು ಪೊಲೀಸರ ಕ್ರಮವನ್ನು ಶ್ಲಾಘಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ರಾಜಸ್ಥಾನ ಪೊಲೀಸರು ಬಂಧಿಸಬಹುದೆಂದು ಇಲ್ಲಿನ ಜನ ಭಾವಿಸಿದ್ದಾರೆ.

Haryana: Two Muslim Men Found Charred to Death in Alleged Case of Cow Vigilantism

ಹಳ್ಳಿಯ ಯುವ ವಿದ್ಯಾರ್ಥಿ ಮುರ್ಸಲೀನ್ ಪ್ರತಿಕ್ರಿಯಿಸಿ, “ತನ್ನ ನೆರೆಹೊರೆಯ ಇಬ್ಬರು ವ್ಯಕ್ತಿಗಳನ್ನು ಜೀವಂತವಾಗಿ ಸುಟ್ಟುಹಾಕಿದ ಸುದ್ದಿಯಿಂದ ಆಘಾತಕ್ಕೊಳಗಾಗಿದ್ದಾನೆ. ಮೋನು ಮಾನೇಸರ್ ಅವರು ಪೋಸ್ಟ್ ಮಾಡಿದ ವೀಡಿಯೊಗಳನ್ನು ಗಮನಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ರೈಫಲ್‌ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಪೋಸ್ಟ್‌ನಲ್ಲಿ ಪೋಸ್ ನೀಡಲಾಗಿದೆ. ಹರಿಯಾಣ ಪೊಲೀಸರ ಬೆಂಬಲ ತಮಗಿರುವುದಾಗಿ ಇವರು ಹೆಮ್ಮೆ ಪಡುತ್ತಿದ್ದಾರೆ. ಇಂದು ಜುನೈದ್, ನಾಳೆ ಅವರು ನನ್ನನ್ನೂ ಕೊಂದು ಹೂಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನಮಗೆ ಎಂದಿಗೂ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸುವುದಿಲ್ಲ” ಎಂದು ವಿಷಾದಿಸಿದ್ದಾರೆ.

“ಆತ ನನ್ನೆದುರು ಬೆಳೆವಣಿಗೆ ಕಂಡವರು.  ಅವನು ಯಾವಾಗಲೂ ಕಠಿಣ ಪರಿಶ್ರಮಿ, ಸಹೃದಯ ಯುವಕ ಎಂದು ನನಗೆ ತಿಳಿದಿತ್ತು” ಎಂದು ಜುನೈದ್‌ನ ನೆರೆಹೊರೆಯವರಾದ ಸಾಹುನಿಯವರು ‘ದಿ ವೈರ್‌’ಗೆ ತಿಳಿಸಿದ್ದಾರೆ. “ಅವರು ನಮ್ಮ ಹಳ್ಳಿಯಲ್ಲಿ ಗೌರವಾನ್ವಿತರಾಗಿ ಗುರುತಿಸಿಕೊಂಡಿದ್ದರು, ಅವರ ಸೌಮ್ಯ ಸ್ವಭಾವದ ಕಾರಣಕ್ಕಾಗಿ ಎಲ್ಲರಿಗೂ ಅವರು ಗೊತ್ತಿದ್ದರು” ಎಂದಿದ್ದಾರೆ.

“ಆತನ ತಲೆಬುರುಡೆಯನ್ನು ನೋಡುವುದಕ್ಕೆ ನನ್ನಿಂದಾಗುತ್ತಿಲ್ಲ. ನನ್ನ ಮಗನನ್ನೇ ಕಳೆದುಕೊಂಡಂತಾಗಿದೆ. ಜುನೈದ್ ಅನೇಕ ಜನರಿಗೆ ಅನ್ನದಾತನಾಗಿದ್ದನು. ಆತನಿಲ್ಲದೆ ಅವನ ಕುಟುಂಬದ ಭವಿಷ್ಯ ಚಿಂತಾಜನಕವಾಗಿದೆ” ಎಂದು ದುಃಖಿಸಿದ್ದಾರೆ.

ಘಟಮೀಕ ಪಕ್ಕದ ಗ್ರಾಮವಾದ ಧಿಮ್ರಿಯಲ್ಲಿ ಸರಪಂಚ್ ತಾಹಿರ್ ಹುಸೇನ್ ಮಾತನಾಡಿ, “ಈ ಪ್ರದೇಶದಲ್ಲಿ ವ್ಯಾಪಕವಾಗಿರುವ ಭಯೋತ್ಪಾದಕ ಕೃತ್ಯವನ್ನು ರಾಜ್ಯ ಸರ್ಕಾರ  ಹೇಗೆ ತಡೆಯಲು ಹೊರಟಿದೆ ಎಂಬುದನ್ನು ತಿಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಈ ಭೀಕರ ಘಟನೆಗೆ ಕಾರಣರಾದವರನ್ನು ಬಂಧಿಸಿ, ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಗಲ್ಲಿಗೇರಿಸಬೇಕು” ಎಂದು ಒತ್ತಾಯಿಸಿದರು.

ಕೆಲವು ವಾರಗಳ ಹಿಂದೆ, ವಾರಿಸ್ ಎಂಬ ಮುಸ್ಲಿಂ ವ್ಯಕ್ತಿ ಈ ಪ್ರದೇಶದಲ್ಲಿ ಸಾವನ್ನಪ್ಪಿದ್ದರು. ರಸ್ತೆ ಅಪಘಾತದಿಂದ ಸಾವಾಗಿದೆ ಎಂದು ಪೊಲೀಸರು ಹೇಳಿದರು. ವಾರಿಸ್ ಅವರ ಕುಟುಂಬವು ಅದನ್ನು ಅಲ್ಲಗಳೆಯಿತು. ಬಜರಂಗದಳದ ಮುಖಂಡರಾದ ಮೋನು ಮಾನೇಸರ್ (ಜುನೈದ್, ನಾಸಿರ್ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಿಗಳು) ಮತ್ತು ಇತರರು ಕೊಲೆ ಮಾಡಿದ್ದಾರೆ ಎಂದು ದೂರಿತು.

“ದೇಶದ ಸಾಮಾಜಿಕ ರಚನೆಯನ್ನು ಹಾಳುಮಾಡಲು ಬಯಸುವ ಕೆಲವು ಜನರಿದ್ದಾರೆ, ಕೆಲವರು ಸಮುದಾಯಗಳ ನಡುವಿನ ಸಾಮಾಜಿಕ ಶಾಂತಿಯನ್ನು ಕದಡಲು ಬಯಸುತ್ತಾರೆ” ಎಂದಿದ್ದಾರೆ ಸರ್‌ಪಂಚ್.

ಇದನ್ನೂ ಓದಿರಿ: ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

“ಸರ್ಕಾರವು ಈ ಘಟನೆಗಳನ್ನು ಗಮನಿಸಬೇಕು, ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಸದ್ಯದ ಆಡಳಿತದ ವ್ಯವಸ್ಥೆಯ ನಮಗೆ ಸಂತೃಪ್ತಿಯಿದೆ. ಐಜಿ ಮತ್ತು ಎಸ್ಪಿ ನಮ್ಮೊಂದಿಗಿದ್ದಾರೆ. ಈ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಅವರಿಗೆ ವಿನಂತಿಸುತ್ತೇವೆ” ಎಂದಿದ್ದಾರೆ.

“ಹರಿಯಾಣ ಪೊಲೀಸರ ಪಾತ್ರವು ಪ್ರಶ್ನಾರ್ಹವಾಗಿದೆ. ಹರಿಯಾಣದಿಂದ ಯಾರಾದರೂ ರಾಜಸ್ಥಾನಕ್ಕೆ ಬಂದು, ಅಂತಹ ಭಯಾನಕ ಅಪರಾಧವನ್ನು ಮಾಡಿ ಹೋಗುವುದು ಹೇಗೆ? ಅವರನ್ನು ತಡೆಯಲು ಪೊಲೀಸ್ ಬೂತ್, ಚೆಕ್ ಪೋಸ್ಟ್ ಇರಲಿಲ್ಲವೇ? ಅವರು ಈ ಬಗ್ಗೆ ಯೋಚಿಸಬೇಕು. ಯಾರಾದರೂ ಎಲ್ಲಿಗಾದರೂ ಹೋಗಿ ಜನರನ್ನು ಹೊಡೆದು ಸುಟ್ಟು ಹಾಕುತ್ತಿರುವುದಾದರೂ ಹೇಗೆ?” ಎಂದು ಹುಸೇನ್‌ ಪ್ರಶ್ನಿಸಿದ್ದಾರೆ.

“ಅಧಿಕಾರದಲ್ಲಿರುವವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಇಲ್ಲದಿದ್ದರೆ ಈ ರೀತಿಯ ಪ್ರಕರಣಗಳು ಮುಂದುವರಿಯುತ್ತಲೇ ಇರುತ್ತವೆ. ವಾತಾವರಣ ಹದಗೆಟ್ಟಿದೆ, ಜನರು ಭಯದಿಂದ ಬದುಕುತ್ತಿದ್ದಾರೆ. ಜನರು ಹೊರಗೆ ಬರುವುದಾದರೂ ಹೇಗೆ? ವ್ಯಾಪಾರ ವಹಿವಾಟು ನಡೆಸುವುದಾದರೂ ಹೇಗೆ? ದೇಶ ಈ ರೀತಿ ಮುಂದುವರಿಯಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...