Homeಮುಖಪುಟಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 89 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಗೆ ಭಿವಾನಿ ಕ್ಷೇತ್ರವನ್ನು ಬಿಟ್ಟಕೊಡಲಾಗಿದೆ. ಕಾಂಗ್ರೆಸ್ ಬುಧವಾರ ತಡರಾತ್ರಿ ಐವರು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮತ್ತು ಕೊನೆಯ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಸಿರ್ಸಾದ ರಾನಿಯಾ ವಿಧಾನಸಭಾ ಕ್ಷೇತ್ರದಿಂದ ಪತ್ರಕರ್ತ ಸರ್ವ ಮಿತ್ರ ಕಾಂಬೋಜ್ ಅವರನ್ನು ಕಣಕ್ಕಿಳಿಸಿದೆ. ಅಂಬಾಲಾ ಕ್ಯಾಂಟ್‌ನಿಂದ ಪರಿಮಲ್ ಪರಿ, ಪಾಣಿಪತ್ ಗ್ರಾಮಾಂತರದಿಂದ ಯುವ ನಾಯಕ ಸಚಿನ್ ಕುಂದು, ನರ್ವಾನಾ (ಎಸ್‌ಸಿ) ಸ್ಥಾನದಿಂದ ಸತ್ಬೀರ್ ದುಬ್ಲೇನ್ ಮತ್ತು ಟಿಗಾಂವ್‌ನಿಂದ ರೋಹಿತ್ ನಗರ್ ಪಟ್ಟಿಯಲ್ಲಿದ್ದ ಇತರ ಅಭ್ಯರ್ಥಿಗಳಾಗಿದ್ದಾರೆ.

ಗುರುವಾರ ಬೆಳಗ್ಗೆ, ಉಕ್ಲಾನಾದಿಂದ ನರೇಶ್ ಸೆಲ್ವಾಲ್ (ಎಸ್‌ಸಿ-ಮೀಸಲು) ಮತ್ತು ನಾರ್ನಾಂಡ್ ಸ್ಥಾನದಿಂದ ಜಸ್ಬೀರ್ ಸಿಂಗ್ ಎಂಬ ಇಬ್ಬರು ಅಭ್ಯರ್ಥಿಗಳ ಐದನೇ ಮತ್ತು ಕೊನೆಯ ಪಟ್ಟಿಯನ್ನು ಪಕ್ಷವೂ ಬಿಡುಗಡೆ ಮಾಡಿತ್ತು. ಉಕ್ಲಾನಾದಿಂದ ಸಂಸದೆ ಕುಮಾರಿ ಸೆಲ್ಜಾ ಸ್ಪರ್ಧಿಸಲು ಉತ್ಸುಕರಾಗಿದ್ದರು. ಅಂತಿಮ ಪಟ್ಟಿಯಲ್ಲಿ, ಸೋಹ್ನಾದಿಂದ ಈ ಹಿಂದೆ JJP ಜೊತೆಗೆ ಇದ್ದ ರೋಹ್ತಾಶ್ ಖತಾನಾ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿ, ಭಿವಾನಿ ಸ್ಥಾನವನ್ನು CPI(M) ಗೆ ಬಿಟ್ಟುಕೊಟ್ಟಿದೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

ಹರ್ಯಾಣ ಚುನಾವಣೆಗೆ ಪಕ್ಷವು ಆಮ್ ಆದ್ಮಿ ಪಕ್ಷ (ಎಎಪಿ) ಯೊಂದಿಗೆ ಸೀಟು ಹಂಚಿಕೆ ಮಾತುಕತೆಯಲ್ಲಿ ತೊಡಗಿತ್ತಾದರೂ, ಎರಡೂ ಕಡೆಯಿಂದ ಭಾರಿ ಚೌಕಾಶಿ ನಡೆದು ಸೀಟು ತೀರ್ಮಾನ ಬಿಕ್ಕಟ್ಟಿಗೆ ಸಿಲುಕಿತ್ತು. ಕೊನೆಗೆ AAP ತನ್ನ ಅಭ್ಯರ್ಥಿಗಳ ಅನೇಕ ಪಟ್ಟಿಗಳನ್ನು ಬಿಡುಗಡೆ ಮಾಡಿದೆ.

ಹರಿಯಾಣ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್‌ನ ಕೆಲವು ನಾಯಕರು ಸ್ವತಂತ್ರರಾಗಿ ಚುನಾವಣಾ ಕಣಕ್ಕೆ ಪ್ರವೇಶಿಸಲು ನಿರ್ಧರಿಸಿದ್ದು, ಪಕ್ಷವೂ ಗುರುವಾರ ಬಂಡಾಯ ಎದುರಿಸಿದೆ. ಬಂಡಾಯ ಎದ್ದವರಲ್ಲಿ ನಲ್ವಾದಿಂದ ಮಾಜಿ ರಾಜ್ಯ ಸಚಿವ ಸಂಪತ್ ಸಿಂಗ್, ತಿಗಾಂವ್‌ನಿಂದ ಮಾಜಿ ಶಾಸಕರಾದ ಲಲಿತ್ ನಗರ ಮತ್ತು ಬಲ್ಲಭಗಢದಿಂದ ಶಾರದಾ ರಾಥೋಡ್ ಸೇರಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಇತರ ಆಕಾಂಕ್ಷಿಗಳಲ್ಲಿ ಚಿತ್ರಾ ಸರ್ವರಾ (ಅಂಬಾಲಾ ಕಂಟೋನ್ಮೆಂಟ್) ಮತ್ತು ರೋಹಿತಾ ರೇವ್ರಿ (ಪಾಣಿಪತ್ ನಗರ) ಇದ್ದಾರೆ.

ಬವಾನಿ ಖೇರಾದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಾಮ್‌ ಕಿಶನ್‌ ಫೌಜಿ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಕೂಡಾ ಟಿಕೆಟ್ ನಿರಾಕರಿಸಿದ ಪಕ್ಷದ ನಾಯಕರಿಂದ ಬಂಡಾಯ ಎದುರಿಸುತ್ತಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...