Homeಮುಖಪುಟಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 89 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಗೆ ಭಿವಾನಿ ಕ್ಷೇತ್ರವನ್ನು ಬಿಟ್ಟಕೊಡಲಾಗಿದೆ. ಕಾಂಗ್ರೆಸ್ ಬುಧವಾರ ತಡರಾತ್ರಿ ಐವರು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮತ್ತು ಕೊನೆಯ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಸಿರ್ಸಾದ ರಾನಿಯಾ ವಿಧಾನಸಭಾ ಕ್ಷೇತ್ರದಿಂದ ಪತ್ರಕರ್ತ ಸರ್ವ ಮಿತ್ರ ಕಾಂಬೋಜ್ ಅವರನ್ನು ಕಣಕ್ಕಿಳಿಸಿದೆ. ಅಂಬಾಲಾ ಕ್ಯಾಂಟ್‌ನಿಂದ ಪರಿಮಲ್ ಪರಿ, ಪಾಣಿಪತ್ ಗ್ರಾಮಾಂತರದಿಂದ ಯುವ ನಾಯಕ ಸಚಿನ್ ಕುಂದು, ನರ್ವಾನಾ (ಎಸ್‌ಸಿ) ಸ್ಥಾನದಿಂದ ಸತ್ಬೀರ್ ದುಬ್ಲೇನ್ ಮತ್ತು ಟಿಗಾಂವ್‌ನಿಂದ ರೋಹಿತ್ ನಗರ್ ಪಟ್ಟಿಯಲ್ಲಿದ್ದ ಇತರ ಅಭ್ಯರ್ಥಿಗಳಾಗಿದ್ದಾರೆ.

ಗುರುವಾರ ಬೆಳಗ್ಗೆ, ಉಕ್ಲಾನಾದಿಂದ ನರೇಶ್ ಸೆಲ್ವಾಲ್ (ಎಸ್‌ಸಿ-ಮೀಸಲು) ಮತ್ತು ನಾರ್ನಾಂಡ್ ಸ್ಥಾನದಿಂದ ಜಸ್ಬೀರ್ ಸಿಂಗ್ ಎಂಬ ಇಬ್ಬರು ಅಭ್ಯರ್ಥಿಗಳ ಐದನೇ ಮತ್ತು ಕೊನೆಯ ಪಟ್ಟಿಯನ್ನು ಪಕ್ಷವೂ ಬಿಡುಗಡೆ ಮಾಡಿತ್ತು. ಉಕ್ಲಾನಾದಿಂದ ಸಂಸದೆ ಕುಮಾರಿ ಸೆಲ್ಜಾ ಸ್ಪರ್ಧಿಸಲು ಉತ್ಸುಕರಾಗಿದ್ದರು. ಅಂತಿಮ ಪಟ್ಟಿಯಲ್ಲಿ, ಸೋಹ್ನಾದಿಂದ ಈ ಹಿಂದೆ JJP ಜೊತೆಗೆ ಇದ್ದ ರೋಹ್ತಾಶ್ ಖತಾನಾ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿ, ಭಿವಾನಿ ಸ್ಥಾನವನ್ನು CPI(M) ಗೆ ಬಿಟ್ಟುಕೊಟ್ಟಿದೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

ಹರ್ಯಾಣ ಚುನಾವಣೆಗೆ ಪಕ್ಷವು ಆಮ್ ಆದ್ಮಿ ಪಕ್ಷ (ಎಎಪಿ) ಯೊಂದಿಗೆ ಸೀಟು ಹಂಚಿಕೆ ಮಾತುಕತೆಯಲ್ಲಿ ತೊಡಗಿತ್ತಾದರೂ, ಎರಡೂ ಕಡೆಯಿಂದ ಭಾರಿ ಚೌಕಾಶಿ ನಡೆದು ಸೀಟು ತೀರ್ಮಾನ ಬಿಕ್ಕಟ್ಟಿಗೆ ಸಿಲುಕಿತ್ತು. ಕೊನೆಗೆ AAP ತನ್ನ ಅಭ್ಯರ್ಥಿಗಳ ಅನೇಕ ಪಟ್ಟಿಗಳನ್ನು ಬಿಡುಗಡೆ ಮಾಡಿದೆ.

ಹರಿಯಾಣ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್‌ನ ಕೆಲವು ನಾಯಕರು ಸ್ವತಂತ್ರರಾಗಿ ಚುನಾವಣಾ ಕಣಕ್ಕೆ ಪ್ರವೇಶಿಸಲು ನಿರ್ಧರಿಸಿದ್ದು, ಪಕ್ಷವೂ ಗುರುವಾರ ಬಂಡಾಯ ಎದುರಿಸಿದೆ. ಬಂಡಾಯ ಎದ್ದವರಲ್ಲಿ ನಲ್ವಾದಿಂದ ಮಾಜಿ ರಾಜ್ಯ ಸಚಿವ ಸಂಪತ್ ಸಿಂಗ್, ತಿಗಾಂವ್‌ನಿಂದ ಮಾಜಿ ಶಾಸಕರಾದ ಲಲಿತ್ ನಗರ ಮತ್ತು ಬಲ್ಲಭಗಢದಿಂದ ಶಾರದಾ ರಾಥೋಡ್ ಸೇರಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಇತರ ಆಕಾಂಕ್ಷಿಗಳಲ್ಲಿ ಚಿತ್ರಾ ಸರ್ವರಾ (ಅಂಬಾಲಾ ಕಂಟೋನ್ಮೆಂಟ್) ಮತ್ತು ರೋಹಿತಾ ರೇವ್ರಿ (ಪಾಣಿಪತ್ ನಗರ) ಇದ್ದಾರೆ.

ಬವಾನಿ ಖೇರಾದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಾಮ್‌ ಕಿಶನ್‌ ಫೌಜಿ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಕೂಡಾ ಟಿಕೆಟ್ ನಿರಾಕರಿಸಿದ ಪಕ್ಷದ ನಾಯಕರಿಂದ ಬಂಡಾಯ ಎದುರಿಸುತ್ತಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...