Homeಮುಖಪುಟಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 89 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಗೆ ಭಿವಾನಿ ಕ್ಷೇತ್ರವನ್ನು ಬಿಟ್ಟಕೊಡಲಾಗಿದೆ. ಕಾಂಗ್ರೆಸ್ ಬುಧವಾರ ತಡರಾತ್ರಿ ಐವರು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮತ್ತು ಕೊನೆಯ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಸಿರ್ಸಾದ ರಾನಿಯಾ ವಿಧಾನಸಭಾ ಕ್ಷೇತ್ರದಿಂದ ಪತ್ರಕರ್ತ ಸರ್ವ ಮಿತ್ರ ಕಾಂಬೋಜ್ ಅವರನ್ನು ಕಣಕ್ಕಿಳಿಸಿದೆ. ಅಂಬಾಲಾ ಕ್ಯಾಂಟ್‌ನಿಂದ ಪರಿಮಲ್ ಪರಿ, ಪಾಣಿಪತ್ ಗ್ರಾಮಾಂತರದಿಂದ ಯುವ ನಾಯಕ ಸಚಿನ್ ಕುಂದು, ನರ್ವಾನಾ (ಎಸ್‌ಸಿ) ಸ್ಥಾನದಿಂದ ಸತ್ಬೀರ್ ದುಬ್ಲೇನ್ ಮತ್ತು ಟಿಗಾಂವ್‌ನಿಂದ ರೋಹಿತ್ ನಗರ್ ಪಟ್ಟಿಯಲ್ಲಿದ್ದ ಇತರ ಅಭ್ಯರ್ಥಿಗಳಾಗಿದ್ದಾರೆ.

ಗುರುವಾರ ಬೆಳಗ್ಗೆ, ಉಕ್ಲಾನಾದಿಂದ ನರೇಶ್ ಸೆಲ್ವಾಲ್ (ಎಸ್‌ಸಿ-ಮೀಸಲು) ಮತ್ತು ನಾರ್ನಾಂಡ್ ಸ್ಥಾನದಿಂದ ಜಸ್ಬೀರ್ ಸಿಂಗ್ ಎಂಬ ಇಬ್ಬರು ಅಭ್ಯರ್ಥಿಗಳ ಐದನೇ ಮತ್ತು ಕೊನೆಯ ಪಟ್ಟಿಯನ್ನು ಪಕ್ಷವೂ ಬಿಡುಗಡೆ ಮಾಡಿತ್ತು. ಉಕ್ಲಾನಾದಿಂದ ಸಂಸದೆ ಕುಮಾರಿ ಸೆಲ್ಜಾ ಸ್ಪರ್ಧಿಸಲು ಉತ್ಸುಕರಾಗಿದ್ದರು. ಅಂತಿಮ ಪಟ್ಟಿಯಲ್ಲಿ, ಸೋಹ್ನಾದಿಂದ ಈ ಹಿಂದೆ JJP ಜೊತೆಗೆ ಇದ್ದ ರೋಹ್ತಾಶ್ ಖತಾನಾ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿ, ಭಿವಾನಿ ಸ್ಥಾನವನ್ನು CPI(M) ಗೆ ಬಿಟ್ಟುಕೊಟ್ಟಿದೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

ಹರ್ಯಾಣ ಚುನಾವಣೆಗೆ ಪಕ್ಷವು ಆಮ್ ಆದ್ಮಿ ಪಕ್ಷ (ಎಎಪಿ) ಯೊಂದಿಗೆ ಸೀಟು ಹಂಚಿಕೆ ಮಾತುಕತೆಯಲ್ಲಿ ತೊಡಗಿತ್ತಾದರೂ, ಎರಡೂ ಕಡೆಯಿಂದ ಭಾರಿ ಚೌಕಾಶಿ ನಡೆದು ಸೀಟು ತೀರ್ಮಾನ ಬಿಕ್ಕಟ್ಟಿಗೆ ಸಿಲುಕಿತ್ತು. ಕೊನೆಗೆ AAP ತನ್ನ ಅಭ್ಯರ್ಥಿಗಳ ಅನೇಕ ಪಟ್ಟಿಗಳನ್ನು ಬಿಡುಗಡೆ ಮಾಡಿದೆ.

ಹರಿಯಾಣ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್‌ನ ಕೆಲವು ನಾಯಕರು ಸ್ವತಂತ್ರರಾಗಿ ಚುನಾವಣಾ ಕಣಕ್ಕೆ ಪ್ರವೇಶಿಸಲು ನಿರ್ಧರಿಸಿದ್ದು, ಪಕ್ಷವೂ ಗುರುವಾರ ಬಂಡಾಯ ಎದುರಿಸಿದೆ. ಬಂಡಾಯ ಎದ್ದವರಲ್ಲಿ ನಲ್ವಾದಿಂದ ಮಾಜಿ ರಾಜ್ಯ ಸಚಿವ ಸಂಪತ್ ಸಿಂಗ್, ತಿಗಾಂವ್‌ನಿಂದ ಮಾಜಿ ಶಾಸಕರಾದ ಲಲಿತ್ ನಗರ ಮತ್ತು ಬಲ್ಲಭಗಢದಿಂದ ಶಾರದಾ ರಾಥೋಡ್ ಸೇರಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಇತರ ಆಕಾಂಕ್ಷಿಗಳಲ್ಲಿ ಚಿತ್ರಾ ಸರ್ವರಾ (ಅಂಬಾಲಾ ಕಂಟೋನ್ಮೆಂಟ್) ಮತ್ತು ರೋಹಿತಾ ರೇವ್ರಿ (ಪಾಣಿಪತ್ ನಗರ) ಇದ್ದಾರೆ.

ಬವಾನಿ ಖೇರಾದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಾಮ್‌ ಕಿಶನ್‌ ಫೌಜಿ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಕೂಡಾ ಟಿಕೆಟ್ ನಿರಾಕರಿಸಿದ ಪಕ್ಷದ ನಾಯಕರಿಂದ ಬಂಡಾಯ ಎದುರಿಸುತ್ತಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...