HomeUncategorizedಹರಿಯಾಣ: ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭ; ಚುನಾವಣೆ ಬಗ್ಗೆ ಸಂಕ್ಷಿಪ್ತ ವಿವರ

ಹರಿಯಾಣ: ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭ; ಚುನಾವಣೆ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಬಿಗಿ ಭದ್ರತೆಯ ನಡುವೆ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಬೆಳಗ್ಗೆ ಮತದಾನ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ವಿನೇಶ್ ಫೋಗಟ್, ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು 1,027 ಇತರ ಅಭ್ಯರ್ಥಿಗಳ ಭವಿಷ್ಯವು ಎರಡು ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹತೆ ಹೊಂದಿರುವ ಈ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಆದರೆ ಕಾಂಗ್ರೆಸ್ 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂಓದಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್

8,821 ನೂರು ವರ್ಷ ವಯಸ್ಸು ಕಳೆದ ಮತದಾರರು ಸೇರಿದಂತೆ 2,03,54,350 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪಂಕಜ್ ಅಗರ್ವಾಲ್ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ 101 ಮಹಿಳೆಯರು ಮತ್ತು 464 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 1,031 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಒಟ್ಟು 20,632 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅಗರ್ವಾಲ್ ಹೇಳಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಐಎನ್‌ಎಲ್‌ಡಿ-ಬಿಎಸ್‌ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷದ ಮೈತ್ರಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ಕಳೆದ 2019 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳನ್ನು ಗೆದ್ದಿತ್ತು.

ಕಾಂಗ್ರೆಸ್ ತನ್ನ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾದ ಸಿಪಿಐ(ಎಂ) ಗೆ ಭಿವಾನಿ ಸ್ಥಾನವನ್ನು ಬಿಟ್ಟುಕೊಟ್ಟಿದೆ. ಸಿರ್ಸಾ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸದೆ, ಹರಿಯಾಣ ಲೋಕಿತ್ ಪಕ್ಷದ ಮುಖ್ಯಸ್ಥ ಗೋಪಾಲ್ ಕಾಂಡಾ ಅವರಿಗೆ ಬಿಟ್ಟುಕೊಟ್ಟಿದೆ. ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ಇದೆ. ಇದರ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಕೆಲವು ನಾಯಕರು ಬಂಡಾಯವೆದ್ದು ಕಣದಲ್ಲಿದ್ದಾರೆ.

ಇದನ್ನೂಓದಿ: ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳ ಹತ್ಯೆ

ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಹರಿಯಾಣ ಪೊಲೀಸರು ಸಂಪೂರ್ಣ ಸನ್ನದ್ಧರಾಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಶತ್ರುಜೀತ್ ಕಪೂರ್ ಶುಕ್ರವಾರ ಹೇಳಿದ್ದಾರೆ. ಸುಮಾರು 30,000 ಪೊಲೀಸ್ ಸಿಬ್ಬಂದಿ ಮತ್ತು 225 ಅರೆಸೇನಾ ಕಂಪನಿಗಳನ್ನು ನಿಯೋಜಿಸಲಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಗೃಹ ರಕ್ಷಕ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

3,616 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 145 ಅತಿ ಸೂಕ್ಷ್ಮ ಎಂದು ಪರಿಗಣಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಮಾದರಿ ನೀತಿ ಸಂಹಿತೆಯ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, 516 ಫ್ಲೈಯಿಂಗ್ ಸ್ಕ್ವಾಡ್‌ಗಳು, 469 ಸ್ಥಿರ-ಕಣ್ಗಾವಲು ತಂಡಗಳು ಮತ್ತು 32 ತ್ವರಿತ-ಪ್ರತಿಕ್ರಿಯೆ ತಂಡಗಳನ್ನು ರಚಿಸಿದೆ. ಹೆಚ್ಚುವರಿಯಾಗಿ, 1,156 ಗಸ್ತು ತಂಡಗಳು ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿವೆ ಎಂದು ಡಿಜಿಪಿ ಹೇಳಿದರು.

ಒಟ್ಟು ಮತದಾರರಲ್ಲಿ 1,07,75,957 ಪುರುಷರು, 95,77,926 ಮಹಿಳೆಯರು ಮತ್ತು 467 ತೃತೀಯಲಿಂಗಿಗಳಾಗಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. 18 ರಿಂದ 19 ವರ್ಷದೊಳಗಿನ 5,24,514 ಮತದಾರರು ಇದ್ದು, 1,49,142 ವಿಕಲಚೇತನ ಮತದಾರರಿದ್ದಾರೆ. ಒಟ್ಟು 2,31,093 ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, ಇದರಲ್ಲಿ 89,940 ಪುರುಷರು ಮತ್ತು 1,41,153 ಮಹಿಳೆಯರು ಇದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....