Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...