Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...