Homeಮುಖಪುಟಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

ಹರಿಯಾಣ ಹಿಂಸಾಚಾರ: ಹಿಂದುತ್ವ ಗುಂಪುಗಳ ಬೆದರಿಕೆಗೆ ಪಲಾಯಾಣ ಮಾಡುತ್ತಿರುವ ಮುಸ್ಲಿಂ ವಲಸೆ ಕಾರ್ಮಿಕರು

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ನಂತರ ವಲಸಿಗರನ್ನು ಸ್ಥಳೀಯ ಹಿಂದುತ್ವ ಗುಂಪುಗಳು ಅಲ್ಲಿಂದ ಹೋಗುವಂತೆ ಹಿಂಸಾಚಾರದ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನೂರಾರು ಮುಸ್ಲಿಂ ವಲಸಿಗ ಕಾರ್ಮಿಕರು ಪಲಾಯನ ಮಾಡಬೇಕಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ.

ನುಹ್‌ನಲ್ಲಿನ ಕಾರ್ಮಿಕರಿಗೆ ಅಲ್ಲಿಂದ ಹೊರಡಲು ಸಮಯ ಸೀಮಿತಗೊಳಿಸಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅವರಲ್ಲಿ ಹಲವರು ಹಿಂಸಾಚಾರ ಪೀಡಿತ ಜಿಲ್ಲೆಯಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಸಣ್ಣ ಚೀಲಗಳೊಂದಿಗೆ ಅಲ್ವಾರ್ ಅಥವಾ ಸೊಹ್ನಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪತ್ರಿಕೆ ತಿಳಿಸಿದೆ.

ಸೋಮವಾರ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನಿಂದ ಧಾರ್ಮಿಕ ಮೆರವಣಿಗೆ ನಡೆಸಿತು. ಆನಂತರ ಹಿಂಸಾಚಾರ ಬುಗಿಲೆದ್ದು, ಇಬ್ಬರು ಹೋಮ್ ಗಾರ್ಡ್‌ಗಳು ಮತ್ತು ಒಬ್ಬ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಈ ಹಿಂಸಾಚಾರ ನುಹ್‌ನ ನೆರೆಯ ಜಿಲ್ಲೆಗಳಿಗೆ ಹರಡುತ್ತಿದ್ದಂತೆ, ಗುರುಗ್ರಾಮ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಲಾಯಿತು. ಗುಂಪುಗಳು ಮುಸ್ಲಿ ಸಮುದಾಯದವರು ಮನೆಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ ನಂತರ ಮುಸ್ಲಿಮರ ವಲಸೆ ಕುಟುಂಬಗಳ ಗುಡಿಸಲುಗಳನ್ನು ಸುಟ್ಟು ಹಾಕಲಾಯಿತು.

ಕೆಲವರು ಮಂಗಳವಾರ ರಾತ್ರಿ ಮೋಟಾರ್‌ಸೈಕಲ್‌ಗಳಲ್ಲಿ ಬಂದರು, ”ನಾವು ಮನೆ ಬಿಟ್ಟು ವಲಸೆ ಬರದೇ ಇದ್ದರೆ ನಮ್ಮ ಕೊಳೆಗೇರಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿದರು. ಪೊಲೀಸರು ರಾತ್ರಿಯಿಂದ ಇಲ್ಲಿ ಹಾಜರಿದ್ದಾರೆ ಆದರೆ ನನ್ನ ಕುಟುಂಬವು ಹೆದರುತ್ತಿದೆ ಮತ್ತು ನಾವು ನಗರವನ್ನು ತೊರೆಯುತ್ತಿದ್ದೇವೆ” ಎಂದು ವಲಸೆ ರಿಕ್ಷಾ ಚಾಲಕ ರೆಹಮತ್ ಅಲಿ ಪಿಟಿಐಗೆ ತಿಳಿಸಿದರು.

ಪಶ್ಚಿಮ ಬಂಗಾಳದಿಂದ ಸುಮಾರು 100 ವಲಸೆ ಕುಟುಂಬಗಳು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದು, ಕೇವಲ 15 ಕುಟುಂಬಗಳು ಮಾತ್ರ ಅಲ್ಲಿಯೇ ಉಳಿದುಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆ ಕುಟುಂಬಗಳು ಸಹ ಹೊರಡಲು ಬಯಸುತ್ತಾರೆ ಆದರೆ ಅವರ ಬಳಿ ಹಣ ಮತ್ತು ವಾಹನಗಳಿಲ್ಲದ ಕಾರಣ ಸಾಧ್ಯವಿಲ್ಲ” ಎಂದು ಚಾನೆಲ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುರುಗ್ರಾಮ್‌ನ ಮುಸ್ಲಿಂ ಪ್ರಾಬಲ್ಯದ ಕೊಳೆಗೇರಿಯಲ್ಲಿ ವಲಸಿಗರೊಬ್ಬರು ಮಾತನಾಡಿದ್ದು, ”ಒಬ್ಬ ವ್ಯಕ್ತಿ ತನ್ನ ಹೆಸರನ್ನು ಕೇಳಿದನು, ಅದಕ್ಕೆ ಅವನು ಹಿಂದೂ ಎಂದು ಸುಳ್ಳು ಹೇಳಿದ್ದಾನೆ. ನಂತರ, ಆತ ಸುಳ್ಳು ಹೇಳಿದ್ದಾನೆ ಎಂದು ತಿಳಿದು 40 ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.

ವಲಸಿಗರಲ್ಲಿ ಒಬ್ಬರಾದ 25 ವರ್ಷದ ಶಮೀಮ್ ಹುಸೇನ್, ”ಮಂಗಳವಾರದಂದು ಗುಂಪೊಂದು ಎಲ್ಲಾ ಮುಸ್ಲಿಮರು ಪ್ರದೇಶವನ್ನು ತೊರೆಯುವಂತೆ ಕೇಳಿದೆ” ಎಂದು NDTV ಗೆ ತಿಳಿಸಿದರು.

”ನಮ್ಮಲ್ಲಿ ಹಿಂತಿರುಗಲು ಹಣವಿಲ್ಲ ಮತ್ತು ಸ್ಥಳೀಯ ಅಂಗಡಿಯವರಿಗೆ ಪಾವತಿಸಲು ಸಾಲಗಳಿವೆ. ನನಗೆ ಏನಾದರೂ ಪರವಾಗಿಲ್ಲ, ಆದರೆ ನನಗೆ ಒಂದು ವರ್ಷದ ಮಗನಿದ್ದಾನೆ ಅವನನ್ನು ಕಾಪಾಡಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ನಿವಾಸಿಗಳು ನಮ್ಮನ್ನು ರಕ್ಷಿಸಬೇಕೆಂಬುದು ನನ್ನ ಪ್ರಾಮಾಣಿಕ ವಿನಂತಿ. ದಯವಿಟ್ಟು ನಮಗೆ ಸಹಾಯ ಮಾಡಿ” ಎಂದು ಅಳಲು ತೋಡಿಕೊಂಡಿದ್ದಾರೆ.

”ತಾನು ಏಳು ದಿನಗಳ ಹಿಂದೆಯಷ್ಟೇ ಗುರುಗ್ರಾಮಕ್ಕೆ ಬಂದಿದ್ದು, ಒಂದೆರಡು ದಿನಗಳ ಹಿಂದೆ ಬಂದಿಳಿದ ಡೆಲಿವರಿ ಕೆಲಸಗಾರನ ಕೆಲಸಕ್ಕೆ ಕೂಲಿ ನೀಡಿಲ್ಲ” ಎಂದು ಹುಸೇನ್ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇನ್ನೊಬ್ಬ ವಲಸೆ ಕಾರ್ಮಿಕ, ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ನಿವಾಸಿ ಧರಂಪಾಲ್ ಗುಜ್ಜರ್ ಅವರು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದು, ”ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕರು ಸೋಮವಾರ ಹೊರಡಲು ಹೇಳಿದರು. ತಾನು ಮತ್ತು ಇತರ ವಲಸೆ ಕಾರ್ಮಿಕರು ಇಡೀ ರಾತ್ರಿ ಬೀದಿಗಳಲ್ಲಿ ಕಳೆಯಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...