Homeಮುಖಪುಟಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

- Advertisement -
- Advertisement -

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್ ತಿಂಗಳಲ್ಲಿ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ‘ಹೆಚ್‌ ಫೈಲ್ಸ್’ (ಹರಿಯಾಣ ಫೈಲ್ಸ್ ) ಎಂಬ ಶೀರ್ಷಿಕೆಯಲ್ಲಿ ತಮ್ಮ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಡಿಜಿಟಲ್ ರೂಪದಲ್ಲಿ ವಿವರಣೆ ಕೊಟ್ಟಿದ್ದಾರೆ.

2024ರಲ್ಲಿ ಹರಿಯಾಣದಲ್ಲಿ ನಡೆದಿರುವುದು ಚುನಾವಣೆ ಅಲ್ಲ, ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಜಂಟಿಯಾಗಿ ನಡೆಸಿದ ‘ಮತಗಳ್ಳತನ’. ಬಿಜೆಪಿ ಕಾಂಗ್ರೆಸ್ ವಿರುದ್ದ ಅಲ್ಪ ಮತದಿಂದ ಗೆದ್ದಿದ್ದರೂ, ದೊಡ್ಡ ಮಟ್ಟದ ವಂಚನೆ ನಡೆದಿದೆ. ಇದಕ್ಕಾಗಿ ‘ಕೇಂದ್ರೀಕೃತ ಕಾರ್ಯಾಚರಣೆ’ ನಡೆಸಲಾಗಿದೆ. ಮುಂಬವರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ನಡೆಯಬಹುದು ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನದ ಬಳಿಕ ಎಕ್ಸಿಟ್ ಪೋಲ್‌ಗಳು ಮತ್ತು ಒಪೀನಿಯನ್ ಪೋಲ್‌ಗಳು ಕಾಂಗ್ರೆಸ್‌ ಭರ್ಜರಿ ಜಯಗಳಿಸುವ ಮುನ್ಸೂಚನೆ ನೀಡಿತ್ತು. ಆದರೆ, ನಾವು ಕೇವಲ 8 ಪ್ರಮುಖ ಸ್ಥಾನಗಳಲ್ಲಿ 22,779 ಮತಗಳಿಂದ ಸೋತೆವು. ನಕಲಿ ಮತಗಳು ಮತ್ತು ವಂಚನೆಯ ಮೂಲಕ ಫಲಿತಾಂಶವನ್ನು ತಿರುಗಿಸಲಾಯಿತು ಎಂದು ಆರೋಪಿಸಿದ್ದಾರೆ. “ಜೆನ್‌ ಝೀ’ ಮತದಾರರೇ ನಿಮ್ಮ ಭವಿಷ್ಯವನ್ನು ಕದಿಯಲಾಗುತ್ತಿದೆ” ಎಂದು ಎಚ್ಚರಿಸಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 25,41,144 ನಕಲಿ ಮತಗಳು ಚಲಾವಣೆಯಾಗಿವೆ. ಇದು ಹರಿಯಾಣದ ಒಟ್ಟು 2 ಕೋಟಿ ಮತದಾರರಲ್ಲಿ 12.5 ಶೇಕಡ ಆಗಿದೆ. ಎಂಟರಲ್ಲಿ ಒಂದು ನಕಲಿ ಮತ ಚಲಾವಣೆಯಾಗಿದೆ. ಮತದಾರರ ಪಟ್ಟಿ, ಮಾಹಿತಿ, ಫೋಟೋ ಮತ್ತು ಸಂಖ್ಯೆಗಳು ‘ನನ್ನ ಆರೋಪಗಳಿಗೆ ಅಲ್ಲಗಳೆಯಲಾಗದ ಸಾಕ್ಷಿಗಳಾಗಿವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಒಟ್ಟು 5.21 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಇದೆ. 1.24 ಲಕ್ಷ ಒಂದೇ ಫೋಟೋ ಇದೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಎರಡೂ ಕಡೆ ಮತ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಸ್ಥಿತ್ವದಲ್ಲಿಯೇ ಇಲ್ಲದ 93,174 ಮತದಾರರ ವಿಳಾಸಗಳು ಪಟ್ಟಿಯಲ್ಲಿವೆ. ಮನೆ ಇಲ್ಲದವರ ಮನೆ ಸಂಖ್ಯೆ ಶೂನ್ಯ ಆಗಿರುತ್ತದೆ. ಆದರೆ, ಇಲ್ಲಿ ಮನೆ ಇಲ್ಲದವರು ಎಂದು ಉಲ್ಲೇಖಿಸಿ ನಕಲಿ ವಿಳಾಸಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪರಿಶೀಲನೆ ಇಲ್ಲದೆ 19.26 ಲಕ್ಷ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಒಬ್ಬ ಮತದಾರ 2 ಬೂತ್‌ಗಳಲ್ಲಿ 223 ಬಾರಿ ಕಾಣಿಸಿಕೊಂಡಿದ್ದಾರೆ. ಫಾರ್ಮ್ 6 (ಹೊಸ ಮತದಾರ ಸೇರ್ಪಡೆ) ಮತ್ತು ಫಾರ್ಮ್ 7 (ಅಳಿಸುವಿಕೆ) ದುರುಪಯೋಗವಾಗಿದೆ. ಇತರ ರಾಜ್ಯಗಳಿಂದ ನಕಲಿ ಲಾಗಿನ್‌ಗಳ ಮೂಲಕ ಕಾಂಗ್ರೆಸ್ ಮತಗಳನ್ನು ಅಳಿಸಲಾಗಿದೆ. ಪ್ರತ್ಯೇಕವಾಗಿ ಲೆಕ್ಕವಿಲ್ಲ, ಆದರೂ ಈ ಸಂಖ್ಯೆ 25 ಲಕ್ಷದ ಒಳಗೆಯಿದೆ ಎಂದು ವಿವರಿಸಿದ್ದಾರೆ.

ಬ್ರೆಝಿಲ್‌ನ ಮಾಡೆಲ್ ಒಬ್ಬರ ಫೋಟೋ. ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಮಲಾ ಮುಂತಾದ ವಿಭಿನ್ನ ಹೆಸರುಗಳಲ್ಲಿ ಹರಿಯಾಣದ ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಇವರು ಹರಿಯಾಣದ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು (ಸರ್ಕಾರಿ ನೌಕರರಿಂದ) ಭಾರೀ ಪ್ರಮಾಣದಲ್ಲಿ ಬಿಜೆಪಿಗೆ ಬಿದ್ದಿವೆ. ಇದು ಮತ್ತು ಬೂತ್ ಮತಗಳ ನಡುವೆ ದೊಡ್ಡ ವ್ಯತ್ಯಾಸ ಕಂಡು ಬಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಸಿಸಿಟಿವಿ ದೃಶ್ಯಗಳನ್ನು ನಾಶ ಮಾಡಿದೆ. ಡಿಜಿಟಲ್ ಮತದಾರ ಪಟ್ಟಿಗಳನ್ನು ಬಿಡುಗಡೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಸೇರಿ ಭಾರತೀಯ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತಗಳ್ಳತನ ಕುರಿತು ಸ್ವತಂತ್ರ ತನಿಖೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಡೇಟಾವನ್ನು ಸಾರ್ವಜನಿಕ ಆಡಿಟ್‌ಗೆ ಬಿಡುಗಡೆ ಮಾಡುವಂತೆ ಮತ್ತು ಮತಗಳ್ಳತನದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗ ಈ ಹಿಂದಿನಂತೆ ರಾಹುಲ್ ಗಾಂಧಿಯ ಆರೋಪಗಳನ್ನು ಆಧಾರರಹಿತ ಎಂದು ತಿರಸ್ಕರಿಸಿದೆ. ಯಾವುದೇ ಅಕ್ರಮದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದಿದೆ.

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...