Homeಮುಖಪುಟಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

- Advertisement -
- Advertisement -

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್ ತಿಂಗಳಲ್ಲಿ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ‘ಹೆಚ್‌ ಫೈಲ್ಸ್’ (ಹರಿಯಾಣ ಫೈಲ್ಸ್ ) ಎಂಬ ಶೀರ್ಷಿಕೆಯಲ್ಲಿ ತಮ್ಮ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಡಿಜಿಟಲ್ ರೂಪದಲ್ಲಿ ವಿವರಣೆ ಕೊಟ್ಟಿದ್ದಾರೆ.

2024ರಲ್ಲಿ ಹರಿಯಾಣದಲ್ಲಿ ನಡೆದಿರುವುದು ಚುನಾವಣೆ ಅಲ್ಲ, ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಜಂಟಿಯಾಗಿ ನಡೆಸಿದ ‘ಮತಗಳ್ಳತನ’. ಬಿಜೆಪಿ ಕಾಂಗ್ರೆಸ್ ವಿರುದ್ದ ಅಲ್ಪ ಮತದಿಂದ ಗೆದ್ದಿದ್ದರೂ, ದೊಡ್ಡ ಮಟ್ಟದ ವಂಚನೆ ನಡೆದಿದೆ. ಇದಕ್ಕಾಗಿ ‘ಕೇಂದ್ರೀಕೃತ ಕಾರ್ಯಾಚರಣೆ’ ನಡೆಸಲಾಗಿದೆ. ಮುಂಬವರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ನಡೆಯಬಹುದು ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನದ ಬಳಿಕ ಎಕ್ಸಿಟ್ ಪೋಲ್‌ಗಳು ಮತ್ತು ಒಪೀನಿಯನ್ ಪೋಲ್‌ಗಳು ಕಾಂಗ್ರೆಸ್‌ ಭರ್ಜರಿ ಜಯಗಳಿಸುವ ಮುನ್ಸೂಚನೆ ನೀಡಿತ್ತು. ಆದರೆ, ನಾವು ಕೇವಲ 8 ಪ್ರಮುಖ ಸ್ಥಾನಗಳಲ್ಲಿ 22,779 ಮತಗಳಿಂದ ಸೋತೆವು. ನಕಲಿ ಮತಗಳು ಮತ್ತು ವಂಚನೆಯ ಮೂಲಕ ಫಲಿತಾಂಶವನ್ನು ತಿರುಗಿಸಲಾಯಿತು ಎಂದು ಆರೋಪಿಸಿದ್ದಾರೆ. “ಜೆನ್‌ ಝೀ’ ಮತದಾರರೇ ನಿಮ್ಮ ಭವಿಷ್ಯವನ್ನು ಕದಿಯಲಾಗುತ್ತಿದೆ” ಎಂದು ಎಚ್ಚರಿಸಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 25,41,144 ನಕಲಿ ಮತಗಳು ಚಲಾವಣೆಯಾಗಿವೆ. ಇದು ಹರಿಯಾಣದ ಒಟ್ಟು 2 ಕೋಟಿ ಮತದಾರರಲ್ಲಿ 12.5 ಶೇಕಡ ಆಗಿದೆ. ಎಂಟರಲ್ಲಿ ಒಂದು ನಕಲಿ ಮತ ಚಲಾವಣೆಯಾಗಿದೆ. ಮತದಾರರ ಪಟ್ಟಿ, ಮಾಹಿತಿ, ಫೋಟೋ ಮತ್ತು ಸಂಖ್ಯೆಗಳು ‘ನನ್ನ ಆರೋಪಗಳಿಗೆ ಅಲ್ಲಗಳೆಯಲಾಗದ ಸಾಕ್ಷಿಗಳಾಗಿವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಒಟ್ಟು 5.21 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಇದೆ. 1.24 ಲಕ್ಷ ಒಂದೇ ಫೋಟೋ ಇದೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಎರಡೂ ಕಡೆ ಮತ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಸ್ಥಿತ್ವದಲ್ಲಿಯೇ ಇಲ್ಲದ 93,174 ಮತದಾರರ ವಿಳಾಸಗಳು ಪಟ್ಟಿಯಲ್ಲಿವೆ. ಮನೆ ಇಲ್ಲದವರ ಮನೆ ಸಂಖ್ಯೆ ಶೂನ್ಯ ಆಗಿರುತ್ತದೆ. ಆದರೆ, ಇಲ್ಲಿ ಮನೆ ಇಲ್ಲದವರು ಎಂದು ಉಲ್ಲೇಖಿಸಿ ನಕಲಿ ವಿಳಾಸಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪರಿಶೀಲನೆ ಇಲ್ಲದೆ 19.26 ಲಕ್ಷ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಒಬ್ಬ ಮತದಾರ 2 ಬೂತ್‌ಗಳಲ್ಲಿ 223 ಬಾರಿ ಕಾಣಿಸಿಕೊಂಡಿದ್ದಾರೆ. ಫಾರ್ಮ್ 6 (ಹೊಸ ಮತದಾರ ಸೇರ್ಪಡೆ) ಮತ್ತು ಫಾರ್ಮ್ 7 (ಅಳಿಸುವಿಕೆ) ದುರುಪಯೋಗವಾಗಿದೆ. ಇತರ ರಾಜ್ಯಗಳಿಂದ ನಕಲಿ ಲಾಗಿನ್‌ಗಳ ಮೂಲಕ ಕಾಂಗ್ರೆಸ್ ಮತಗಳನ್ನು ಅಳಿಸಲಾಗಿದೆ. ಪ್ರತ್ಯೇಕವಾಗಿ ಲೆಕ್ಕವಿಲ್ಲ, ಆದರೂ ಈ ಸಂಖ್ಯೆ 25 ಲಕ್ಷದ ಒಳಗೆಯಿದೆ ಎಂದು ವಿವರಿಸಿದ್ದಾರೆ.

ಬ್ರೆಝಿಲ್‌ನ ಮಾಡೆಲ್ ಒಬ್ಬರ ಫೋಟೋ. ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಮಲಾ ಮುಂತಾದ ವಿಭಿನ್ನ ಹೆಸರುಗಳಲ್ಲಿ ಹರಿಯಾಣದ ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಇವರು ಹರಿಯಾಣದ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು (ಸರ್ಕಾರಿ ನೌಕರರಿಂದ) ಭಾರೀ ಪ್ರಮಾಣದಲ್ಲಿ ಬಿಜೆಪಿಗೆ ಬಿದ್ದಿವೆ. ಇದು ಮತ್ತು ಬೂತ್ ಮತಗಳ ನಡುವೆ ದೊಡ್ಡ ವ್ಯತ್ಯಾಸ ಕಂಡು ಬಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಸಿಸಿಟಿವಿ ದೃಶ್ಯಗಳನ್ನು ನಾಶ ಮಾಡಿದೆ. ಡಿಜಿಟಲ್ ಮತದಾರ ಪಟ್ಟಿಗಳನ್ನು ಬಿಡುಗಡೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಸೇರಿ ಭಾರತೀಯ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತಗಳ್ಳತನ ಕುರಿತು ಸ್ವತಂತ್ರ ತನಿಖೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಡೇಟಾವನ್ನು ಸಾರ್ವಜನಿಕ ಆಡಿಟ್‌ಗೆ ಬಿಡುಗಡೆ ಮಾಡುವಂತೆ ಮತ್ತು ಮತಗಳ್ಳತನದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗ ಈ ಹಿಂದಿನಂತೆ ರಾಹುಲ್ ಗಾಂಧಿಯ ಆರೋಪಗಳನ್ನು ಆಧಾರರಹಿತ ಎಂದು ತಿರಸ್ಕರಿಸಿದೆ. ಯಾವುದೇ ಅಕ್ರಮದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದಿದೆ.

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...