Homeಚಳವಳಿಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಮತ್ತೆ ಜಲ ಫಿರಂಗಿ ಬಳಸಿದ ಪೊಲೀಸರು

ಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಮತ್ತೆ ಜಲ ಫಿರಂಗಿ ಬಳಸಿದ ಪೊಲೀಸರು

- Advertisement -
- Advertisement -

ಹರಿಯಾಣದಲ್ಲಿ ರೈತರು ಮತ್ತು ಮನೋಹರ್‌ ಲಾಲ್ ಖಟ್ಟರ್‌ ಸರ್ಕಾರದ ನಡುವಿನ ಬಿಕ್ಕಟ್ಟು ಮತ್ತಷ್ಟು ಹದಗೆಟ್ಟಿದ್ದು, ಪ್ರತಿಭಟನಾ ನಿರತ ರೈತರ ಮೇಲೆ ಮತ್ತೆ ಪೊಲೀಸ್ ಸಿಬ್ಬಂದಿ ಜಲ ಫಿರಂಗಿ ಬಳಸಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದ್ದಾರೆ.

ಹರಿಯಾಣದ ಜಜ್ಜಾರ್‌ನಲ್ಲಿ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮದ ವಿರುದ್ಧ ರೈತರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ರೈತರನ್ನು ತಡೆಯಲು ಭದ್ರತಾ ಸಿಬ್ಬಂದಿ ಜಲ ಫಿರಂಗಿ ಬಳಸಿದ್ದಾರೆ.

ಕಪ್ಪು ಧ್ವಜಗಳನ್ನು ಹಿಡಿದ ರೈತರು ಮತ್ತು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ನಿಯೋಜನೆಯಾಗಿದ್ದ ಭದ್ರತಾ ಸಿಬ್ಬಂದಿಯನ್ನು ಕಂಡು ಹಿಂದೆ ಸರಿಯದೆ ಮುನ್ನುಗ್ಗುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

 ಇದನ್ನೂ ಓದಿ: ರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ಕಳೆದ ಒಂದು ವರ್ಷದಿಂದಲೂ ವಿವಾದಿತ ಕೃಷಿ ಕಾನೂನುಗಳ ರದ್ದಿಗಾಗಿ ಹೋರಾಡುತ್ತಿರುವ ರೈತರು ಹರಿಯಾಣದಲ್ಲಿ ಖಟ್ಟರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಯಾವುದೇ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ನಡೆಯಲು ಬಿಡದೆ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಈ ಹಿನ್ನೆಲೆಯಲ್ಲಿ ಇಂದಿನ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮಕ್ಕೂ ಭಾರಿ ಭದ್ರತೆ ಒದಗಿಸಲಾಗಿತ್ತು. ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಹಲವು ಮಾರ್ಗಗಳನ್ನು ಬದಲಾಯಿಸಲಾಗಿತ್ತು. ಆದರೂ ಪಟ್ಟು ಬಿಡದ ರೈತರು ಕಾರ್ಯಕ್ರಮ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉಪ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸದಂತೆ ರೈತರಲ್ಲಿ ಮನವಿ ಮಾಡಿದ್ದಾರೆ.

“ನೀವು ಪ್ರಜಾಪ್ರಭುತ್ವ ರೀತಿಯಲ್ಲಿ ಪ್ರತಿಭಟಿಸಬಹುದು. ನಾವೆಲ್ಲ ನಿಮ್ಮ ಮಕ್ಕಳು. ನಾವೀಗ ನಾವು ಸರ್ಕಾರಿ ಕರ್ತವ್ಯದಲ್ಲಿದ್ದೇವೆ. ದಯವಿಟ್ಟು ನಮ್ಮನ್ನು ಕರ್ತವ್ಯ ನಿರ್ವಹಿಸುವುದರಿಂದ ತಡೆಯಬೇಡಿ. ದಯವಿಟ್ಟು ಕಾರ್ಯಕ್ರಮಕ್ಕೆ ಅಡ್ಡಿಪಡಿಸದೆ ನಿಮ್ಮ ಪ್ರತಿಭಟನೆಯನ್ನು ಮುಂದುವರೆಸಿ” ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಕರ್ನಾಲ್‌ನಲ್ಲಿ ರೈತರು ಪ್ರತಿಭಟನೆ ನಡೆಸುವ ವೇಳೆ ರೈತರ ತಲೆ ಒಡೆಯಿರಿ ಎಂದು ಅಧಿಕಾರಿಯೊಬ್ಬ ಆದೇಶ ನೀಡಿ, ಹತ್ತಕ್ಕೂ ಹೆಚ್ಚು ರೈತರಿಗೆ ಗಂಭೀರ ಗಾಯಗಳಾಗಿದ್ದವು. ಈ ವಿಚಾರದಿಂದ ಖಟ್ಟರ್‌ ಸರ್ಕಾರ ಭಾರಿ ಟೀಕೆಗೆ ಒಳಗಾಗಿತ್ತು.


ಇದನ್ನೂ ಓದಿ: 10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...