Homeಮುಖಪುಟಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

ಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

- Advertisement -
- Advertisement -

ಹರಿಯಾಣ ಐಎಎಸ್ ಅಧಿಕಾರಿ ರಾಣಿ ನಗರ್‌ (34) ಎಂಬುವವರು ‘ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ’ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಣಿ ನಗರ್‌ ಪ್ರಸ್ತುತ ಆರ್ಕೈವ್ಸ್ ವಿಭಾಗದ ನಿರ್ದೇಶಕಿ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹೆಚ್ಚುವರಿ ನಿರ್ದೇಶಕಿಯಾಗಿ ಉಸ್ತುವಾರಿ ವಹಿಸಿಕೊಂಡಿದ್ದರು.

ಹರಿಯಾಣ ಕೇಡರ್‌ನ 2014 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ರಾಣಿ ನಗರ್‌, ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ ಇಲ್ಲದಿರುವುದೇ ತನ್ನ ರಾಜಿನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದಾರೆ.

ರಾಣಿ ನಗರ್‌ ಅವರು ಈ ಹಿಂದೆ ಲಾಕ್‌ಡೌನ್ ತೆಗೆದುಹಾಕಿದ ನಂತರ ರಾಜೀನಾಮೆ ನೀಡುವುದಾಗಿ ಇತ್ತೀಚೆಗೆ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅವರು ತಮ್ಮ ರಾಜೀನಾಮೆಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಅವರಿಗೆ ಕಳುಹಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಮನವಿ ಮಾಡಿದ್ದಾರೆ.

ರಾಣಿ ಅವರ ಪತ್ರವನ್ನು ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಅವರು ತಮ್ಮ ರಾಜೀನಾಮೆ ಪ್ರತಿಗಳನ್ನು ರಾಷ್ಟ್ರಪತಿ, ಪ್ರಧಾನಿ, ಹರಿಯಾಣ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

“ಈ ರಾಜೀನಾಮೆಯನ್ನು ಸಲ್ಲಿಸಲು ಕಾರಣ ಸರ್ಕಾರಿ ಕರ್ತವ್ಯದ ವೈಯಕ್ತಿಕ ಸುರಕ್ಷತೆ” ಎಂದು ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದಲ್ಲಿ “ಭಾರತೀಯ ಆಡಳಿತ ಸೇವೆಯ ಹುದ್ದೆಗೆ ನಾನು ರಾಜೀನಾಮೆ ನೀಡುವುದನ್ನು ತಕ್ಷಣದಿಂದ ಜಾರಿಗೆ ತರುತ್ತೇನೆ, ಅದು ಮೇ 4, 2020 ರಿಂದ ಮುಂಜಾನೆ ಜಾರಿಗೆ ಬರುತ್ತದೆ” ಎಂದು ಅವರು ಬರೆದಿದ್ದಾರೆ. ಈ ಪತ್ರವನ್ನು ಅವರ ಫೇಸ್‌ಬುಕ್ ಪುಟದಲ್ಲಿಯೂ ಪೋಸ್ಟ್ ಮಾಡಲಾಗಿದ್ದು.

ಇದರ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ರಾಜೀನಾಮೆಯನ್ನು “ಆಘಾತಕಾರಿ ಘಟನೆ” ಎಂದು ಹೇಳಿದ್ದಾರೆ. ರಾಜ್ಯದ ಬಿಜೆಪಿ-ಜೆಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುರ್ಜೆವಾಲಾ “ಮಹಿಳಾ ಐಎಎಸ್ ಅಧಿಕಾರಿ ತಾನು ಅಸುರಕ್ಷಿತ ಎಂದು ಭಾವಿಸಿ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮಹಿಳಾ ಐಎಎಸ್ ಅಧಿಕಾರಿ ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯನ್ನು ಕಾರಣವೆಂದು ಉಲ್ಲೇಖಿಸಿ ರಾಜೀನಾಮೆ ನೀಡಿದರೆ, ಹರಿಯಾಣದಲ್ಲಿ ಯಾರು ಸುರಕ್ಷಿತವಾಗಿರುತ್ತಾರೆ. ಇದು ನಿಮ್ಮ ಸರ್ಕಾರದ ಮೇಲಿನ ವಿಶ್ವಾಸವಿಲ್ಲವೇ, ಇದು ನಿಮ್ಮ ವೈಫಲ್ಯಕ್ಕೆ ಜೀವಂತ ಪುರಾವೆಯಲ್ಲವೇ” ಎಂದು ಸುರ್ಜೆವಾಲಾ ಮುಖ್ಯಮಂತ್ರಿ ಖಟ್ಟರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಣಿ ನಗರ್‌ ಅವರು ಜೂನ್ 2018 ರಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿತ್ತು, ಆದರೆ ಅಧಿಕಾರಿಯ ವಿರುದ್ಧ ಆರೋಪಗಳು ಸಾಬಿತಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತನ್ನ ಫೇಸ್‌ಬುಕ್ ಪುಟದ ಹಿಂದಿನ ಪೋಸ್ಟ್‌ನಲ್ಲಿ ಹಿರಿಯ ಅಧಿಕಾರಿ ವಿರುದ್ಧ ಹಲವಾರು ದೂರುಗಳಿದ್ದರೂ, ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದರು.

ಕಳೆದ ವರ್ಷ ಅವರು ಅಧಿಕಾರಿಯ ವಿರುದ್ಧ ನ್ಯಾಯಾಲಯದಲ್ಲಿ ದೂರು ನೀಡಿದ್ದರು ಮತ್ತು ಅವರ ಹಾಗೂ ಅವರ ಸಹೋದರಿಯ ಜೀವಕ್ಕೆ ಬೆದರಿಕೆ ಇದೆ ಎಂದು ಉಲ್ಲೇಖಿಸಿದ್ದರು.

ಡಿಸೆಂಬರ್ 2017 ರಲ್ಲಿ, ಸಿರ್ಸಾ ಜಿಲ್ಲೆಯ ದಬಾವಲಿಯ ಉಪವಿಭಾಗ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರಾಣಿ ತನ್ನ ಫೇಸ್‌ಬುಕ್ ಪುಟದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅವರ ದೂರಿಗೆ ಪೊಲೀಸರು “ತ್ವರಿತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ವಿಡಿಯೊ ನೋಡಿ: ಸದ್ದು, ಈ ಸುದ್ದಿಗಳು ಏನಾದವು ಸರಣಿಯ 2ನೇ ವಿಡಿಯೊ

ಸದ್ದು, ಈ ಸುದ್ದಿಗಳೇನಾದವು?

#ಸದ್ದು ಈ ಸುದ್ದಿಗಳೇನಾದವು?ಮರೆಯಬಾರದ ಸುದ್ದಿಗಳ ಜೊತೆಗೆ ಇಂದಿನ ಸುದ್ದಿಯ ಇನ್ನೊಂದು ಮುಖವನ್ನು ಮುಂದಿಡುವುದೇ ಈ ಕಾರ್ಯಕ್ರಮ

Posted by Naanu Gauri on Monday, May 4, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...