Homeಮುಖಪುಟಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

ಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

- Advertisement -
- Advertisement -

ಹರಿಯಾಣ ಐಎಎಸ್ ಅಧಿಕಾರಿ ರಾಣಿ ನಗರ್‌ (34) ಎಂಬುವವರು ‘ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ’ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಣಿ ನಗರ್‌ ಪ್ರಸ್ತುತ ಆರ್ಕೈವ್ಸ್ ವಿಭಾಗದ ನಿರ್ದೇಶಕಿ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹೆಚ್ಚುವರಿ ನಿರ್ದೇಶಕಿಯಾಗಿ ಉಸ್ತುವಾರಿ ವಹಿಸಿಕೊಂಡಿದ್ದರು.

ಹರಿಯಾಣ ಕೇಡರ್‌ನ 2014 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ರಾಣಿ ನಗರ್‌, ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ ಇಲ್ಲದಿರುವುದೇ ತನ್ನ ರಾಜಿನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದಾರೆ.

ರಾಣಿ ನಗರ್‌ ಅವರು ಈ ಹಿಂದೆ ಲಾಕ್‌ಡೌನ್ ತೆಗೆದುಹಾಕಿದ ನಂತರ ರಾಜೀನಾಮೆ ನೀಡುವುದಾಗಿ ಇತ್ತೀಚೆಗೆ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅವರು ತಮ್ಮ ರಾಜೀನಾಮೆಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಅವರಿಗೆ ಕಳುಹಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಮನವಿ ಮಾಡಿದ್ದಾರೆ.

ರಾಣಿ ಅವರ ಪತ್ರವನ್ನು ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಅವರು ತಮ್ಮ ರಾಜೀನಾಮೆ ಪ್ರತಿಗಳನ್ನು ರಾಷ್ಟ್ರಪತಿ, ಪ್ರಧಾನಿ, ಹರಿಯಾಣ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

“ಈ ರಾಜೀನಾಮೆಯನ್ನು ಸಲ್ಲಿಸಲು ಕಾರಣ ಸರ್ಕಾರಿ ಕರ್ತವ್ಯದ ವೈಯಕ್ತಿಕ ಸುರಕ್ಷತೆ” ಎಂದು ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದಲ್ಲಿ “ಭಾರತೀಯ ಆಡಳಿತ ಸೇವೆಯ ಹುದ್ದೆಗೆ ನಾನು ರಾಜೀನಾಮೆ ನೀಡುವುದನ್ನು ತಕ್ಷಣದಿಂದ ಜಾರಿಗೆ ತರುತ್ತೇನೆ, ಅದು ಮೇ 4, 2020 ರಿಂದ ಮುಂಜಾನೆ ಜಾರಿಗೆ ಬರುತ್ತದೆ” ಎಂದು ಅವರು ಬರೆದಿದ್ದಾರೆ. ಈ ಪತ್ರವನ್ನು ಅವರ ಫೇಸ್‌ಬುಕ್ ಪುಟದಲ್ಲಿಯೂ ಪೋಸ್ಟ್ ಮಾಡಲಾಗಿದ್ದು.

ಇದರ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ರಾಜೀನಾಮೆಯನ್ನು “ಆಘಾತಕಾರಿ ಘಟನೆ” ಎಂದು ಹೇಳಿದ್ದಾರೆ. ರಾಜ್ಯದ ಬಿಜೆಪಿ-ಜೆಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುರ್ಜೆವಾಲಾ “ಮಹಿಳಾ ಐಎಎಸ್ ಅಧಿಕಾರಿ ತಾನು ಅಸುರಕ್ಷಿತ ಎಂದು ಭಾವಿಸಿ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮಹಿಳಾ ಐಎಎಸ್ ಅಧಿಕಾರಿ ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯನ್ನು ಕಾರಣವೆಂದು ಉಲ್ಲೇಖಿಸಿ ರಾಜೀನಾಮೆ ನೀಡಿದರೆ, ಹರಿಯಾಣದಲ್ಲಿ ಯಾರು ಸುರಕ್ಷಿತವಾಗಿರುತ್ತಾರೆ. ಇದು ನಿಮ್ಮ ಸರ್ಕಾರದ ಮೇಲಿನ ವಿಶ್ವಾಸವಿಲ್ಲವೇ, ಇದು ನಿಮ್ಮ ವೈಫಲ್ಯಕ್ಕೆ ಜೀವಂತ ಪುರಾವೆಯಲ್ಲವೇ” ಎಂದು ಸುರ್ಜೆವಾಲಾ ಮುಖ್ಯಮಂತ್ರಿ ಖಟ್ಟರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಣಿ ನಗರ್‌ ಅವರು ಜೂನ್ 2018 ರಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿತ್ತು, ಆದರೆ ಅಧಿಕಾರಿಯ ವಿರುದ್ಧ ಆರೋಪಗಳು ಸಾಬಿತಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತನ್ನ ಫೇಸ್‌ಬುಕ್ ಪುಟದ ಹಿಂದಿನ ಪೋಸ್ಟ್‌ನಲ್ಲಿ ಹಿರಿಯ ಅಧಿಕಾರಿ ವಿರುದ್ಧ ಹಲವಾರು ದೂರುಗಳಿದ್ದರೂ, ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದರು.

ಕಳೆದ ವರ್ಷ ಅವರು ಅಧಿಕಾರಿಯ ವಿರುದ್ಧ ನ್ಯಾಯಾಲಯದಲ್ಲಿ ದೂರು ನೀಡಿದ್ದರು ಮತ್ತು ಅವರ ಹಾಗೂ ಅವರ ಸಹೋದರಿಯ ಜೀವಕ್ಕೆ ಬೆದರಿಕೆ ಇದೆ ಎಂದು ಉಲ್ಲೇಖಿಸಿದ್ದರು.

ಡಿಸೆಂಬರ್ 2017 ರಲ್ಲಿ, ಸಿರ್ಸಾ ಜಿಲ್ಲೆಯ ದಬಾವಲಿಯ ಉಪವಿಭಾಗ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರಾಣಿ ತನ್ನ ಫೇಸ್‌ಬುಕ್ ಪುಟದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅವರ ದೂರಿಗೆ ಪೊಲೀಸರು “ತ್ವರಿತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ವಿಡಿಯೊ ನೋಡಿ: ಸದ್ದು, ಈ ಸುದ್ದಿಗಳು ಏನಾದವು ಸರಣಿಯ 2ನೇ ವಿಡಿಯೊ

ಸದ್ದು, ಈ ಸುದ್ದಿಗಳೇನಾದವು?

#ಸದ್ದು ಈ ಸುದ್ದಿಗಳೇನಾದವು?ಮರೆಯಬಾರದ ಸುದ್ದಿಗಳ ಜೊತೆಗೆ ಇಂದಿನ ಸುದ್ದಿಯ ಇನ್ನೊಂದು ಮುಖವನ್ನು ಮುಂದಿಡುವುದೇ ಈ ಕಾರ್ಯಕ್ರಮ

Posted by Naanu Gauri on Monday, May 4, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...