Homeಮುಖಪುಟಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

ಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

- Advertisement -
- Advertisement -

ಹರಿಯಾಣ ಐಎಎಸ್ ಅಧಿಕಾರಿ ರಾಣಿ ನಗರ್‌ (34) ಎಂಬುವವರು ‘ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ’ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಣಿ ನಗರ್‌ ಪ್ರಸ್ತುತ ಆರ್ಕೈವ್ಸ್ ವಿಭಾಗದ ನಿರ್ದೇಶಕಿ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹೆಚ್ಚುವರಿ ನಿರ್ದೇಶಕಿಯಾಗಿ ಉಸ್ತುವಾರಿ ವಹಿಸಿಕೊಂಡಿದ್ದರು.

ಹರಿಯಾಣ ಕೇಡರ್‌ನ 2014 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ರಾಣಿ ನಗರ್‌, ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ ಇಲ್ಲದಿರುವುದೇ ತನ್ನ ರಾಜಿನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದಾರೆ.

ರಾಣಿ ನಗರ್‌ ಅವರು ಈ ಹಿಂದೆ ಲಾಕ್‌ಡೌನ್ ತೆಗೆದುಹಾಕಿದ ನಂತರ ರಾಜೀನಾಮೆ ನೀಡುವುದಾಗಿ ಇತ್ತೀಚೆಗೆ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅವರು ತಮ್ಮ ರಾಜೀನಾಮೆಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಅವರಿಗೆ ಕಳುಹಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಮನವಿ ಮಾಡಿದ್ದಾರೆ.

ರಾಣಿ ಅವರ ಪತ್ರವನ್ನು ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಅವರು ತಮ್ಮ ರಾಜೀನಾಮೆ ಪ್ರತಿಗಳನ್ನು ರಾಷ್ಟ್ರಪತಿ, ಪ್ರಧಾನಿ, ಹರಿಯಾಣ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

“ಈ ರಾಜೀನಾಮೆಯನ್ನು ಸಲ್ಲಿಸಲು ಕಾರಣ ಸರ್ಕಾರಿ ಕರ್ತವ್ಯದ ವೈಯಕ್ತಿಕ ಸುರಕ್ಷತೆ” ಎಂದು ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದಲ್ಲಿ “ಭಾರತೀಯ ಆಡಳಿತ ಸೇವೆಯ ಹುದ್ದೆಗೆ ನಾನು ರಾಜೀನಾಮೆ ನೀಡುವುದನ್ನು ತಕ್ಷಣದಿಂದ ಜಾರಿಗೆ ತರುತ್ತೇನೆ, ಅದು ಮೇ 4, 2020 ರಿಂದ ಮುಂಜಾನೆ ಜಾರಿಗೆ ಬರುತ್ತದೆ” ಎಂದು ಅವರು ಬರೆದಿದ್ದಾರೆ. ಈ ಪತ್ರವನ್ನು ಅವರ ಫೇಸ್‌ಬುಕ್ ಪುಟದಲ್ಲಿಯೂ ಪೋಸ್ಟ್ ಮಾಡಲಾಗಿದ್ದು.

ಇದರ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ರಾಜೀನಾಮೆಯನ್ನು “ಆಘಾತಕಾರಿ ಘಟನೆ” ಎಂದು ಹೇಳಿದ್ದಾರೆ. ರಾಜ್ಯದ ಬಿಜೆಪಿ-ಜೆಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುರ್ಜೆವಾಲಾ “ಮಹಿಳಾ ಐಎಎಸ್ ಅಧಿಕಾರಿ ತಾನು ಅಸುರಕ್ಷಿತ ಎಂದು ಭಾವಿಸಿ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮಹಿಳಾ ಐಎಎಸ್ ಅಧಿಕಾರಿ ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯನ್ನು ಕಾರಣವೆಂದು ಉಲ್ಲೇಖಿಸಿ ರಾಜೀನಾಮೆ ನೀಡಿದರೆ, ಹರಿಯಾಣದಲ್ಲಿ ಯಾರು ಸುರಕ್ಷಿತವಾಗಿರುತ್ತಾರೆ. ಇದು ನಿಮ್ಮ ಸರ್ಕಾರದ ಮೇಲಿನ ವಿಶ್ವಾಸವಿಲ್ಲವೇ, ಇದು ನಿಮ್ಮ ವೈಫಲ್ಯಕ್ಕೆ ಜೀವಂತ ಪುರಾವೆಯಲ್ಲವೇ” ಎಂದು ಸುರ್ಜೆವಾಲಾ ಮುಖ್ಯಮಂತ್ರಿ ಖಟ್ಟರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಣಿ ನಗರ್‌ ಅವರು ಜೂನ್ 2018 ರಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿತ್ತು, ಆದರೆ ಅಧಿಕಾರಿಯ ವಿರುದ್ಧ ಆರೋಪಗಳು ಸಾಬಿತಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತನ್ನ ಫೇಸ್‌ಬುಕ್ ಪುಟದ ಹಿಂದಿನ ಪೋಸ್ಟ್‌ನಲ್ಲಿ ಹಿರಿಯ ಅಧಿಕಾರಿ ವಿರುದ್ಧ ಹಲವಾರು ದೂರುಗಳಿದ್ದರೂ, ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದರು.

ಕಳೆದ ವರ್ಷ ಅವರು ಅಧಿಕಾರಿಯ ವಿರುದ್ಧ ನ್ಯಾಯಾಲಯದಲ್ಲಿ ದೂರು ನೀಡಿದ್ದರು ಮತ್ತು ಅವರ ಹಾಗೂ ಅವರ ಸಹೋದರಿಯ ಜೀವಕ್ಕೆ ಬೆದರಿಕೆ ಇದೆ ಎಂದು ಉಲ್ಲೇಖಿಸಿದ್ದರು.

ಡಿಸೆಂಬರ್ 2017 ರಲ್ಲಿ, ಸಿರ್ಸಾ ಜಿಲ್ಲೆಯ ದಬಾವಲಿಯ ಉಪವಿಭಾಗ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರಾಣಿ ತನ್ನ ಫೇಸ್‌ಬುಕ್ ಪುಟದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅವರ ದೂರಿಗೆ ಪೊಲೀಸರು “ತ್ವರಿತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ವಿಡಿಯೊ ನೋಡಿ: ಸದ್ದು, ಈ ಸುದ್ದಿಗಳು ಏನಾದವು ಸರಣಿಯ 2ನೇ ವಿಡಿಯೊ

ಸದ್ದು, ಈ ಸುದ್ದಿಗಳೇನಾದವು?

#ಸದ್ದು ಈ ಸುದ್ದಿಗಳೇನಾದವು?ಮರೆಯಬಾರದ ಸುದ್ದಿಗಳ ಜೊತೆಗೆ ಇಂದಿನ ಸುದ್ದಿಯ ಇನ್ನೊಂದು ಮುಖವನ್ನು ಮುಂದಿಡುವುದೇ ಈ ಕಾರ್ಯಕ್ರಮ

Posted by Naanu Gauri on Monday, May 4, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...