Homeಮುಖಪುಟಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

ಹರಿಯಾಣ: ವೈಯಕ್ತಿಕ ಸುರಕ್ಷತೆಯಿಲ್ಲವೆಂದು ಮಹಿಳಾ ಐಎಎಸ್ ಅಧಿಕಾರಿ ರಾಜಿನಾಮೆ

- Advertisement -
- Advertisement -

ಹರಿಯಾಣ ಐಎಎಸ್ ಅಧಿಕಾರಿ ರಾಣಿ ನಗರ್‌ (34) ಎಂಬುವವರು ‘ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ’ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಣಿ ನಗರ್‌ ಪ್ರಸ್ತುತ ಆರ್ಕೈವ್ಸ್ ವಿಭಾಗದ ನಿರ್ದೇಶಕಿ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹೆಚ್ಚುವರಿ ನಿರ್ದೇಶಕಿಯಾಗಿ ಉಸ್ತುವಾರಿ ವಹಿಸಿಕೊಂಡಿದ್ದರು.

ಹರಿಯಾಣ ಕೇಡರ್‌ನ 2014 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ರಾಣಿ ನಗರ್‌, ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆ ಇಲ್ಲದಿರುವುದೇ ತನ್ನ ರಾಜಿನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದಾರೆ.

ರಾಣಿ ನಗರ್‌ ಅವರು ಈ ಹಿಂದೆ ಲಾಕ್‌ಡೌನ್ ತೆಗೆದುಹಾಕಿದ ನಂತರ ರಾಜೀನಾಮೆ ನೀಡುವುದಾಗಿ ಇತ್ತೀಚೆಗೆ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅವರು ತಮ್ಮ ರಾಜೀನಾಮೆಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಅವರಿಗೆ ಕಳುಹಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಮನವಿ ಮಾಡಿದ್ದಾರೆ.

ರಾಣಿ ಅವರ ಪತ್ರವನ್ನು ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಅವರು ತಮ್ಮ ರಾಜೀನಾಮೆ ಪ್ರತಿಗಳನ್ನು ರಾಷ್ಟ್ರಪತಿ, ಪ್ರಧಾನಿ, ಹರಿಯಾಣ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

“ಈ ರಾಜೀನಾಮೆಯನ್ನು ಸಲ್ಲಿಸಲು ಕಾರಣ ಸರ್ಕಾರಿ ಕರ್ತವ್ಯದ ವೈಯಕ್ತಿಕ ಸುರಕ್ಷತೆ” ಎಂದು ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದಲ್ಲಿ “ಭಾರತೀಯ ಆಡಳಿತ ಸೇವೆಯ ಹುದ್ದೆಗೆ ನಾನು ರಾಜೀನಾಮೆ ನೀಡುವುದನ್ನು ತಕ್ಷಣದಿಂದ ಜಾರಿಗೆ ತರುತ್ತೇನೆ, ಅದು ಮೇ 4, 2020 ರಿಂದ ಮುಂಜಾನೆ ಜಾರಿಗೆ ಬರುತ್ತದೆ” ಎಂದು ಅವರು ಬರೆದಿದ್ದಾರೆ. ಈ ಪತ್ರವನ್ನು ಅವರ ಫೇಸ್‌ಬುಕ್ ಪುಟದಲ್ಲಿಯೂ ಪೋಸ್ಟ್ ಮಾಡಲಾಗಿದ್ದು.

ಇದರ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ರಾಜೀನಾಮೆಯನ್ನು “ಆಘಾತಕಾರಿ ಘಟನೆ” ಎಂದು ಹೇಳಿದ್ದಾರೆ. ರಾಜ್ಯದ ಬಿಜೆಪಿ-ಜೆಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುರ್ಜೆವಾಲಾ “ಮಹಿಳಾ ಐಎಎಸ್ ಅಧಿಕಾರಿ ತಾನು ಅಸುರಕ್ಷಿತ ಎಂದು ಭಾವಿಸಿ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮಹಿಳಾ ಐಎಎಸ್ ಅಧಿಕಾರಿ ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯನ್ನು ಕಾರಣವೆಂದು ಉಲ್ಲೇಖಿಸಿ ರಾಜೀನಾಮೆ ನೀಡಿದರೆ, ಹರಿಯಾಣದಲ್ಲಿ ಯಾರು ಸುರಕ್ಷಿತವಾಗಿರುತ್ತಾರೆ. ಇದು ನಿಮ್ಮ ಸರ್ಕಾರದ ಮೇಲಿನ ವಿಶ್ವಾಸವಿಲ್ಲವೇ, ಇದು ನಿಮ್ಮ ವೈಫಲ್ಯಕ್ಕೆ ಜೀವಂತ ಪುರಾವೆಯಲ್ಲವೇ” ಎಂದು ಸುರ್ಜೆವಾಲಾ ಮುಖ್ಯಮಂತ್ರಿ ಖಟ್ಟರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಣಿ ನಗರ್‌ ಅವರು ಜೂನ್ 2018 ರಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿತ್ತು, ಆದರೆ ಅಧಿಕಾರಿಯ ವಿರುದ್ಧ ಆರೋಪಗಳು ಸಾಬಿತಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತನ್ನ ಫೇಸ್‌ಬುಕ್ ಪುಟದ ಹಿಂದಿನ ಪೋಸ್ಟ್‌ನಲ್ಲಿ ಹಿರಿಯ ಅಧಿಕಾರಿ ವಿರುದ್ಧ ಹಲವಾರು ದೂರುಗಳಿದ್ದರೂ, ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದರು.

ಕಳೆದ ವರ್ಷ ಅವರು ಅಧಿಕಾರಿಯ ವಿರುದ್ಧ ನ್ಯಾಯಾಲಯದಲ್ಲಿ ದೂರು ನೀಡಿದ್ದರು ಮತ್ತು ಅವರ ಹಾಗೂ ಅವರ ಸಹೋದರಿಯ ಜೀವಕ್ಕೆ ಬೆದರಿಕೆ ಇದೆ ಎಂದು ಉಲ್ಲೇಖಿಸಿದ್ದರು.

ಡಿಸೆಂಬರ್ 2017 ರಲ್ಲಿ, ಸಿರ್ಸಾ ಜಿಲ್ಲೆಯ ದಬಾವಲಿಯ ಉಪವಿಭಾಗ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡ ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರಾಣಿ ತನ್ನ ಫೇಸ್‌ಬುಕ್ ಪುಟದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅವರ ದೂರಿಗೆ ಪೊಲೀಸರು “ತ್ವರಿತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ವಿಡಿಯೊ ನೋಡಿ: ಸದ್ದು, ಈ ಸುದ್ದಿಗಳು ಏನಾದವು ಸರಣಿಯ 2ನೇ ವಿಡಿಯೊ

ಸದ್ದು, ಈ ಸುದ್ದಿಗಳೇನಾದವು?

#ಸದ್ದು ಈ ಸುದ್ದಿಗಳೇನಾದವು?ಮರೆಯಬಾರದ ಸುದ್ದಿಗಳ ಜೊತೆಗೆ ಇಂದಿನ ಸುದ್ದಿಯ ಇನ್ನೊಂದು ಮುಖವನ್ನು ಮುಂದಿಡುವುದೇ ಈ ಕಾರ್ಯಕ್ರಮ

Posted by Naanu Gauri on Monday, May 4, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...