Homeಮುಖಪುಟಹರಿಯಾಣ: ಪತ್ನಿಯನ್ನು ಒಂದೂವರೆ ವರ್ಷದಿಂದ ಶೌಚಾಲಯದಲ್ಲಿ ಬಂಧಿಸಿದ್ದ ಪತಿ

ಹರಿಯಾಣ: ಪತ್ನಿಯನ್ನು ಒಂದೂವರೆ ವರ್ಷದಿಂದ ಶೌಚಾಲಯದಲ್ಲಿ ಬಂಧಿಸಿದ್ದ ಪತಿ

ಐಪಿಸಿಯ ಸೆಕ್ಷನ್ 498 ಎ ಮತ್ತು 342 ರ ಅಡಿಯಲ್ಲಿ ಪತ್ನಿಯನ್ನು ಬಂಧಿಸಿದ್ದ ಪತಿ ನರೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಹರಿಯಾಣದಲ್ಲಿ 35 ವರ್ಷದ ಮಹಿಳೆಯೊಬ್ಬರನ್ನು ಪತಿಯೇ ಕಳೆದ ಒಂದೂವರೆ ವರ್ಷದಿಂದ ಶೌಚಾಲಯದಲ್ಲಿ ಬಂಧಿಸಿದ್ದ ಅಮಾನವೀಯ ಘಟನೆ ವರದಿಯಾಗಿದೆ. ಪಾಣಿಪತ್​ ಜಿಲ್ಲೆಯ ರಿಶ್​ಪುರ್​ನಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಂತ ಕಿರಿದಾದ, ಕೆಟ್ಟ ವಾಸನೆ ಬರುತ್ತಿದ್ದ ಶೌಚಾಲಯದಲ್ಲಿ ಬಂಧಿಸಲಾಗಿದ್ದ ಮಹಿಳೆಯನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ರಕ್ಷಿಸಿದೆ. ಮೂರು ಮಕ್ಕಳ ತಾಯಿಯಾದ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ನಂತರ ಆಕೆಯ ಸೋದರಸಂಬಂಧಿಗೆ ಒಪ್ಪಿಸಲಾಗಿದೆ.

ಮಹಿಳೆಯನ್ನು ತನ್ನ ಗಂಡನೇ ಸೆರೆಯಲ್ಲಿ ಇಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಜನಿ ಗುಪ್ತಾ, ಪೊಲೀಸ್ ಅಧಿಕಾರಿಗಳೊಂದಿಗೆ ಸಂತ್ರಸ್ತೆಯ ಮನೆಗೆ ತಲುಪಿ ಮಹಿಳೆಯನ್ನು ಶೌಚಾಲಯದೊಳಗೆ ಕೂಡಿ ಬೀಗ ಹಾಕಿರುವುದನ್ನು ಕಂಡು ಆಕೆಯನ್ನು  ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

’ಸಂತ್ರಸ್ತ ಮಹಿಳೆ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರು. ಆಕೆ ತುಂಬಾ ಶಕ್ತಿಹೀನರಾಗಿದ್ದರು, ನಡೆಯುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ಆಕೆಗೆ ಸರಿಯಾಗಿ ಆಹಾರ, ಕುಡಿಯಲು ನೀರು ಸಹ ನೀಡಿಲ್ಲ. ನಾವು ಊಟ ಕೊಟ್ಟಾಗ ಒಮ್ಮೆಲೆ 8 ಚಪಾತಿಗಳನ್ನು ತಿಂದರು. ಆಕೆಯನ್ನ ಕಳೆದ ಒಂದೂವರೆ ವರ್ಷದಿಂದ ಈ ಚಿಕ್ಕ ಟಾಯ್ಲೆಟ್​ನಲ್ಲೇ ಇರಿಸಲಾಗಿತ್ತು ಅಂತ ತನಿಖೆಯಿಂದ ತಿಳಿದುಬಂದಿದೆ’ ಎಂದು ರಜನಿ ಗುಪ್ತಾ ತಿಳಿದ್ದಾರೆ.

Woman locked inside toilet for over a year by her husband in Haryana's Panipat, rescued

ಮಹಿಳೆಯನ್ನು ಕಳೆದ 17 ವರ್ಷಗಳ ಹಿಂದೆ ನರೇಶ್ ಕುಮಾರ್ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ 15 ವರ್ಷದ ಮಗಳು ಮತ್ತು 11 ಮತ್ತು 13 ವರ್ಷದ ಇಬ್ಬರು ಗಂಡು ಮಕ್ಕಳು ಸೇರಿದಂತೆ ಮೂವರು ಮಕ್ಕಳಿದ್ದಾರೆ.

ನರೇಶ್ ಕುಮಾರ್ ತನ್ನ ಪತ್ನಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಇಲಾಖೆ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಸಂತ್ರಸ್ತೆ ಸರಿಯಾಗಿ ಉತ್ತರಿಸಿದ್ದಾರೆ. ಜೊತೆಗೆ ಕುಟುಂಬದ ಎಲ್ಲ ಸದಸ್ಯರನ್ನು ಗುರುತಿಸಿದ್ದಾರೆ. ಪತಿ ನರೇಶ್ ಕುಮಾರ್‌ ತನ್ನ ಪತ್ನಿ ಮಾನಸಿಕ ಅಸ್ವಸ್ಥೆ ಎಂದು  ಹೇಳಲು ಆತನ ಬಳಿ ಆಕೆಗೆ ಚಿಕಿತ್ಸೆ ಕೊಡಿಸಿರುವ ಯಾವ ದಾಖಲೆಗಳು ಇಲ್ಲ ಎಂದು ರಜನಿ ಗುಪ್ತಾ ತಿಳಿಸಿದ್ದಾರೆ.

ಐಪಿಸಿಯ ಸೆಕ್ಷನ್ 498 ಎ ಮತ್ತು 342 ರ ಅಡಿಯಲ್ಲಿ ಪತ್ನಿಯನ್ನು ಬಂಧಿಸಿದ್ದ ಪತಿ ನರೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಸನೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸುರೇಂದರ್ ದಹಿಯಾ ತಿಳಿಸಿದ್ದಾರೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...