Homeಮುಖಪುಟಹರಿಯಾಣ: ಪತ್ನಿಯನ್ನು ಒಂದೂವರೆ ವರ್ಷದಿಂದ ಶೌಚಾಲಯದಲ್ಲಿ ಬಂಧಿಸಿದ್ದ ಪತಿ

ಹರಿಯಾಣ: ಪತ್ನಿಯನ್ನು ಒಂದೂವರೆ ವರ್ಷದಿಂದ ಶೌಚಾಲಯದಲ್ಲಿ ಬಂಧಿಸಿದ್ದ ಪತಿ

ಐಪಿಸಿಯ ಸೆಕ್ಷನ್ 498 ಎ ಮತ್ತು 342 ರ ಅಡಿಯಲ್ಲಿ ಪತ್ನಿಯನ್ನು ಬಂಧಿಸಿದ್ದ ಪತಿ ನರೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಹರಿಯಾಣದಲ್ಲಿ 35 ವರ್ಷದ ಮಹಿಳೆಯೊಬ್ಬರನ್ನು ಪತಿಯೇ ಕಳೆದ ಒಂದೂವರೆ ವರ್ಷದಿಂದ ಶೌಚಾಲಯದಲ್ಲಿ ಬಂಧಿಸಿದ್ದ ಅಮಾನವೀಯ ಘಟನೆ ವರದಿಯಾಗಿದೆ. ಪಾಣಿಪತ್​ ಜಿಲ್ಲೆಯ ರಿಶ್​ಪುರ್​ನಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಂತ ಕಿರಿದಾದ, ಕೆಟ್ಟ ವಾಸನೆ ಬರುತ್ತಿದ್ದ ಶೌಚಾಲಯದಲ್ಲಿ ಬಂಧಿಸಲಾಗಿದ್ದ ಮಹಿಳೆಯನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ರಕ್ಷಿಸಿದೆ. ಮೂರು ಮಕ್ಕಳ ತಾಯಿಯಾದ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ನಂತರ ಆಕೆಯ ಸೋದರಸಂಬಂಧಿಗೆ ಒಪ್ಪಿಸಲಾಗಿದೆ.

ಮಹಿಳೆಯನ್ನು ತನ್ನ ಗಂಡನೇ ಸೆರೆಯಲ್ಲಿ ಇಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಜನಿ ಗುಪ್ತಾ, ಪೊಲೀಸ್ ಅಧಿಕಾರಿಗಳೊಂದಿಗೆ ಸಂತ್ರಸ್ತೆಯ ಮನೆಗೆ ತಲುಪಿ ಮಹಿಳೆಯನ್ನು ಶೌಚಾಲಯದೊಳಗೆ ಕೂಡಿ ಬೀಗ ಹಾಕಿರುವುದನ್ನು ಕಂಡು ಆಕೆಯನ್ನು  ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

’ಸಂತ್ರಸ್ತ ಮಹಿಳೆ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರು. ಆಕೆ ತುಂಬಾ ಶಕ್ತಿಹೀನರಾಗಿದ್ದರು, ನಡೆಯುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ಆಕೆಗೆ ಸರಿಯಾಗಿ ಆಹಾರ, ಕುಡಿಯಲು ನೀರು ಸಹ ನೀಡಿಲ್ಲ. ನಾವು ಊಟ ಕೊಟ್ಟಾಗ ಒಮ್ಮೆಲೆ 8 ಚಪಾತಿಗಳನ್ನು ತಿಂದರು. ಆಕೆಯನ್ನ ಕಳೆದ ಒಂದೂವರೆ ವರ್ಷದಿಂದ ಈ ಚಿಕ್ಕ ಟಾಯ್ಲೆಟ್​ನಲ್ಲೇ ಇರಿಸಲಾಗಿತ್ತು ಅಂತ ತನಿಖೆಯಿಂದ ತಿಳಿದುಬಂದಿದೆ’ ಎಂದು ರಜನಿ ಗುಪ್ತಾ ತಿಳಿದ್ದಾರೆ.

Woman locked inside toilet for over a year by her husband in Haryana's Panipat, rescued

ಮಹಿಳೆಯನ್ನು ಕಳೆದ 17 ವರ್ಷಗಳ ಹಿಂದೆ ನರೇಶ್ ಕುಮಾರ್ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ 15 ವರ್ಷದ ಮಗಳು ಮತ್ತು 11 ಮತ್ತು 13 ವರ್ಷದ ಇಬ್ಬರು ಗಂಡು ಮಕ್ಕಳು ಸೇರಿದಂತೆ ಮೂವರು ಮಕ್ಕಳಿದ್ದಾರೆ.

ನರೇಶ್ ಕುಮಾರ್ ತನ್ನ ಪತ್ನಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಇಲಾಖೆ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಸಂತ್ರಸ್ತೆ ಸರಿಯಾಗಿ ಉತ್ತರಿಸಿದ್ದಾರೆ. ಜೊತೆಗೆ ಕುಟುಂಬದ ಎಲ್ಲ ಸದಸ್ಯರನ್ನು ಗುರುತಿಸಿದ್ದಾರೆ. ಪತಿ ನರೇಶ್ ಕುಮಾರ್‌ ತನ್ನ ಪತ್ನಿ ಮಾನಸಿಕ ಅಸ್ವಸ್ಥೆ ಎಂದು  ಹೇಳಲು ಆತನ ಬಳಿ ಆಕೆಗೆ ಚಿಕಿತ್ಸೆ ಕೊಡಿಸಿರುವ ಯಾವ ದಾಖಲೆಗಳು ಇಲ್ಲ ಎಂದು ರಜನಿ ಗುಪ್ತಾ ತಿಳಿಸಿದ್ದಾರೆ.

ಐಪಿಸಿಯ ಸೆಕ್ಷನ್ 498 ಎ ಮತ್ತು 342 ರ ಅಡಿಯಲ್ಲಿ ಪತ್ನಿಯನ್ನು ಬಂಧಿಸಿದ್ದ ಪತಿ ನರೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಸನೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸುರೇಂದರ್ ದಹಿಯಾ ತಿಳಿಸಿದ್ದಾರೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....