Homeಮುಖಪುಟಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

- Advertisement -
- Advertisement -

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ ನೀಡಿದ್ದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರೊಫೆಸರ್ ಅಲಿ ಅವರ ಹೇಳಿಕೆಯು, ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ಅವಹೇಳನವಾಗಿದ್ದು ಮತ್ತು ಕೋಮು ಸೌಹಾರ್ದತೆಯನ್ನು ಹಾಳುಗೆಡವುವ ಉದ್ದೇಶ ಹೊಂದಿದೆ ಎಂದು ಆಯೋಗ ಆರೋಪಿಸಿದೆ.

ವಿಶ್ವವಿದ್ಯಾನಿಲಯದ ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಅಲಿ ಅವರನ್ನು ಬುಧವಾರ ಆಯೋಗದ ಮುಂದೆ ಹಾಜರಾಗಲು ನಿರ್ದೇಶಿಸಲಾಗಿದೆ. ಪ್ರೊಫೆಸರ್ ಅಲಿ ಅವರು ಮೇ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿಯನ್ನು ಹೊಗಳುತ್ತಿರುವ ಹಿಂದುತ್ವವಾದಿಗಳ ದ್ವಿಮುಖ ನೀತಿಯನ್ನು ಎತ್ತಿ ತೋರಿಸಿದ್ದರು.

“ಬಹುಶಃ ಅವರು ಗುಂಪು ಹತ್ಯೆಗಳು, ಅನಿಯಂತ್ರಿತ ಬುಲ್ಡೋಜಿಂಗ್ ಮತ್ತು ಬಿಜೆಪಿಯ ದ್ವೇಷ ಪ್ರಚಾರಕ್ಕೆ ಬಲಿಯಾದ ಇತರರ ಬಗ್ಗೆ ಕೂಡಾ ಭಾರತೀಯ ನಾಗರಿಕರಾಗಿ ಅವರನ್ನು ರಕ್ಷಿಸಬೇಕೆಂದು ಅಷ್ಟೇ ಜೋರಾಗಿ ಒತ್ತಾಯಿಸಬಹುದಿತ್ತು” ಎಂದು ಅವರು ಹೇಳಿದ್ದರು.

ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಪತ್ರಿಕಾಗೋಷ್ಠಿಗಳ ಮೂಲಕ ಹೇಳಲು ಹೊರಟಿದ್ದನ್ನು ವಾಸ್ತವವಾಗಿ ಕೂಡಾ ಮಾಡಬೇಕು. ಇಲ್ಲವೆಂದರೆ ಅದು ಕೇವಲ ಬೂಟಾಟಿಕೆ ಎಂದು ಪ್ರೊಫೆಸರ್ ಹೇಳಿದ್ದರು.

“ವಾಸ್ತವದಲ್ಲಿ ಮುಸ್ಲಿಮರು ಎದುರಿಸುತ್ತಿರುವುದು ಸರ್ಕಾರವು ತೋರಿಸಲು ಪ್ರಯತ್ನಿಸಿದಕ್ಕಿಂತ ಭಿನ್ನವಾಗಿದೆ. ಆದರೆ ಪತ್ರಿಕಾಗೋಷ್ಠಿಗಳು ಭಾರತವು ತನ್ನ ವೈವಿಧ್ಯತೆಯನ್ನು ಒಗ್ಗಟ್ಟಾಗಿದೆ ಎಂಬ ಒಂದು ಕಲ್ಪನೆಯಾಗಿ ಸಂಪೂರ್ಣವಾಗಿ ಸತ್ತಿಲ್ಲ ಎಂದು ತೋರಿಸಿದವು” ಎಂದು ಅವರು ಹೇಳಿದ್ದರು.

ಭಾನುವಾರ ಪ್ರತ್ಯೇಕ ಪೋಸ್ಟ್‌ನಲ್ಲಿ ಅವರು, “ನಾಗರಿಕರು ಯಾವಾಗಲೂ ಯುದ್ಧದ ದುಷ್ಪರಿಣಾಮಗಳಿಗೆ ಒಳಗಾಗುತ್ತಲೆ ಇದ್ದಾರೆ… ಹಾಗಾದರೆ ನೀವು ಯುದ್ಧಕ್ಕಾಗಿ ಕೂಗಾಡಿದಾಗ ಅಥವಾ ಒಂದು ದೇಶವನ್ನು ನಾಶಮಾಡಬೇಕೆಂದು ಕರೆ ನೀಡಿದಾಗ, ನಿಖರವಾಗಿ ನೀವು ಏನು ಕೇಳುತ್ತಿದ್ದೀರಿ? ಇಡೀ ಜನರ ನರಮೇಧಕ್ಕಾಗಿಯೆ?” ಎಂದು ಶ್ನಿಸಿದ್ದರು.

ಮೇ 8 ರಂದು, ಆಪರೇಷನ್ ಸಿಂಧೂರ ಭಯೋತ್ಪಾದನೆಯನ್ನು ಎದುರಿಸುವ ಭಾರತದ ವಿಧಾನದಲ್ಲಿ ಕಾರ್ಯತಂತ್ರದ ಬದಲಾವಣೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳುತ್ತಾ ಯುದ್ಧಪ್ರೇಮಿಗಳ ವಿರುದ್ಧ ಎಚ್ಚರಿಕೆ ನೀಡಿದ್ದರು. ಈ ಯುದ್ಧದಿಂದಾಗಿ “ಬಡವರು ಅಸಮಾನವಾಗಿ ಬಳಲುತ್ತಿದ್ದಾರೆ ಮತ್ತು ಪ್ರಯೋಜನ ಪಡೆಯುವ ಏಕೈಕ ಜನರೆಂದರೆ ರಾಜಕಾರಣಿಗಳು ಮತ್ತು ರಕ್ಷಣಾ ಕಂಪನಿಗಳು” ಎಂದು ಅವರು ಹೇಳಿದ್ದರು.

ಪ್ರೊಫೆಸರ್ ಅಲಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ರಾಜ್ಯ ಮಹಿಳಾ ಆಯೋಗವು ಕಳವಳಗಳ ವ್ಯಕ್ತಪಡಿಸಿದೆ. ಪ್ರೊಫೆಸರ್ ಅವರು ಮಹಿಳಾ ಅಧಿಕಾರಿಗಳ ಬಗ್ಗೆ ಅಗೌರವ, ಭಯೋತ್ಪಾದನೆಯ ಮೇಲಿನ ಮಿಲಿಟರಿ ಕ್ರಮದ ದೂಷಣೆ, ಸತ್ಯಗಳ ತಪ್ಪು ನಿರೂಪಣೆ, ಕೋಮು ಅಶಾಂತಿಯ ಪ್ರಚೋದನೆ, ಮಹಿಳೆಯರ ಘನತೆಯ ಉಲ್ಲಂಘನೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಗದಿಪಡಿಸಿದ ನೈತಿಕ ಮಾನದಂಡಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಹಿಳಾ ಆಯೋಗ ಆರೋಪಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ಹೇಳಿಕೆಗಳು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರವನ್ನು ದುರ್ಬಲಗೊಳಿಸುತ್ತವೆ ಮತ್ತು ಮಿಲಿಟರಿ ಕ್ರಮಗಳ ಹಿಂದೆ ಕೋಮು ಉದ್ದೇಶಗಳಿವೆ ಎಂದು ಪ್ರತಿಪಾದಿಸುತ್ತಿವೆ ಎಂದು ಆಯೋಗ ಆರೋಪಿಸಿದೆ. ಪ್ರೊಫೆಸರ್ ಅವರು ಲಿಖಿತ ವಿವರಣೆ ನೀಡಿ, ಅವರ ಪ್ರತಿಪಾದನೆಗೆ ಸಂಬಂಧಿತ ದಾಖಲೆಗಳು, ವಿಶ್ವವಿದ್ಯಾಲಯದ ನೀತಿ ಸಂಹಿತೆಯ ಪ್ರತಿ ಮತ್ತು ಅವರ ಅಧ್ಯಾಪಕರ ಒಪ್ಪಂದವನ್ನು ಸಲ್ಲಿಸಬೇಕು ಎಂದು ಆಯೋಗ ಕೇಳಿದೆ.

“ನಿರ್ದೇಶಿತ ಅವಧಿಯೊಳಗೆ ಸಾಕಷ್ಟು ಕಾರಣವಿಲ್ಲದೆ ಹಾಜರಾಗಲು ವಿಫಲವಾದರೆ, ಆಯೋಗದ ಸಂಬಂಧಿತ ಕಾನೂನುಗಳು ಮತ್ತು ಅಧಿಕಾರಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಮಹಿಳಾ ಆಯೋಗ ಎಚ್ಚರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...