Homeಚಳವಳಿಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಬೇಡಿಕೆಗಳನ್ನು ಸೆ. 6 ರ ಒಳಗೆ ಈಡೇರಿಸದಿದ್ದಲ್ಲಿ ಕರ್ನಾಲ್ ಮಿನಿ-ಸೆಕ್ರೆಟರಿಯೇಟ್‌ಗೆ ಅನಿರ್ದಿಷ್ಟಾವಧಿ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಕಳೆದ ಶನಿವಾರ ಹರಿಯಾಣದ ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ನಡೆದ ಮಾರಣಾಂತಿಕ ಲಾಠಿಚಾರ್ಜ್, ಪೊಲೀಸರು ಮತ್ತು ಹಲ್ಲೆಗೆ ಆದೇಶಿಸಿದ ಅಧಿಕಾರಿ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರೈತರು ಸಭೆ ನಡೆಸಿದ್ದಾರೆ.

ಹಲ್ಲೆಗೆ ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಮತ್ತು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಮಾರಣಾಂತಿಕ ಹಲ್ಲೆಯಲ್ಲಿ ಗಾಯಗಳಿಂದ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹರಿಯಾಣದ ರೈತ ಸಂಘಟನೆಗಳು ಒತ್ತಾಯಿಸಿವೆ.

ಸೋಮವಾರ ಕರ್ನಾಲ್‌ನಲ್ಲಿ ಸಭೆ ನಡೆಸಿದ ಹರಿಯಾಣ ರೈತ ಸಂಘಟನೆಗಳು, ತಮ್ಮ ಬೇಡಿಕೆಗಳನ್ನು ಸೆಪ್ಟೆಂಬರ್ 6 ರ ಒಳಗೆ ಈಡೇರಿಸದಿದ್ದಲ್ಲಿ ಕರ್ನಾಲ್ ಮಿನಿ-ಸೆಕ್ರೆಟರಿಯೇಟ್‌ಗೆ (Karnal mini-Secretariat) ಅನಿರ್ದಿಷ್ಟಾವಧಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿವೆ.

ಇದನ್ನೂ ಓದಿ: ರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

ಭಾರತೀಯ ಕಿಸಾನ್ ಯೂನಿಯನ್ (ಚಾರುಣಿ) ಅಧ್ಯಕ್ಷ ಗುರ್ನಾಮ್ ಸಿಂಗ್ ಚಾರುಣಿ, ಸರ್ಕಾರವು ಶಾಂತಿಯುತ ಪ್ರತಿಭಟನೆಗಳನ್ನು ನಡೆಸುತ್ತಿರುವ ರೈತರ ಮೇಲೆ ಹಿಂಸಾಚಾರವನ್ನು ಎಸಗಿದೆ. ಘಟನೆಯಲ್ಲಿ 11 ಜನರಿಗೆ ಗಂಭೀರ ಗಾಯಗಳಾಗಿದ್ದು, 40ಕ್ಕೂ ಹೆಚ್ಚು ರೈತರಿಗೆ ಗಾಯಗಳಾಗಿವೆ. ಹಲ್ಲೆಯಿಂದಾ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿರುವ ಸುಶೀಲ್ ಕಾಜಲ್ ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ. ಜೊತೆಗೆ ಗಾಯಗೊಂಡಿರುವ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನಿಡಬೇಕು ಎಂದಿದೆ.

ರೈತ ಸಂಘಗಳ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ, “ಮನೋಹರ್ ಲಾಲ್ ಖಟ್ಟರ್‌ ಸರ್ಕಾರವು ಲಾಠಿಚಾರ್ಜ್‌ಗೆ ಆದೇಶಿಸಿದ ಅಧಿಕಾರಿಯನ್ನು ತಕ್ಷಣವೇ ವಜಾಗೊಳಿಸದಿದ್ದರೆ, ಆತನ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಆ ಅಧಿಕಾರಿ ಬೇರೆಡೆಯಿಂದ ಬಂದ ಸೂಚನೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಯಬೇಕಾಗುತ್ತದೆ” ಎಂದು ಹರಿಯಾಣ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದ ಶನಿವಾರ “ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಆಯುಷ್ ಸಿನ್ಹಾ ಹೇಳಿದ್ದರು.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...