Homeಕರ್ನಾಟಕಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಹರ್ಷ, ಸುಖಾನಂದ ಶೆಟ್ಟಿ, ಶರತ್ ಮಡಿವಾಳ ಮೊದಲಾದವರ ಶವ ಮೆರವಣಿಗೆ ವೇಳೆ ನಡೆದಿರುವ ಅಹಿತಕರ ಘಟನೆಗಳನ್ನು ನೆನೆಯುವುದು ಅಗತ್ಯವಿದೆ.

- Advertisement -
- Advertisement -

ಸಂಘ ಪರಿವಾರದ ಕಾರ್ಯಕರ್ತರು ಯಾರಾದರೂ ಕೊಲೆಯಾದ ತಕ್ಷಣ ಪರಿವಾರಕ್ಕೆ ಬರುವ ಮೊದಲ ಆಲೋಚನೆ- ‘ಶವ ಮೆರವಣಿಗೆ’. ಇದರ ಉದ್ದೇಶವೇನು? ಶವ ಮೆರವಣಿಗೆ ಮಾಡಿದರೆ ಶಾಂತಿಯುತ ಸಮಾಜದಲ್ಲಿ ಉಂಟಾಗುವ ಪರಿಸ್ಥಿತಿ ಎಂತಹದ್ದು? ಎಂಬುದನ್ನು ಇತಿಹಾಸ ನೋಡಿ ಆತ್ಮಾವಲೋಕನ ಮಾಡಿಕೊಳ್ಳಬೇಕಾಗುತ್ತದೆ.

ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮೆರವಣಿಗೆ ನಡೆಸಲು ಸಂಘ ಪರಿವಾರದ ಸಂಘಟನೆಗಳು ಹಾಗೂ ಪ್ರವೀಣ್ ಅವರ ಬಂಧುಗಳು ನಿರ್ಧರಿಸಿದ್ದಾರೆ.

ಬುಧವಾರ ಬೆಳಗ್ಗೆ 9.30ಕ್ಕೆ ಪುತ್ತೂರು ನಗರದಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲಾಗುತ್ತದೆ. ಆ ಪ್ರಯುಕ್ತ ಇಂದು ದಕ್ಷಿಣ ಕನ್ನಡ‌ ಜಿಲ್ಲೆಯ ಪುತ್ತೂರು, ಸುಳ್ಯ ಕಡಬ ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂ ಸಂಘಟನೆಗಳ ಪ್ರಮುಖರು ಕರೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶವ ಮೆರವಣಿಗೆಯಿಂದ ಉಂಟಾಗುವ ಉದ್ವಿಗ್ನತೆ, ಅದರಿಂದಾಗುವ ಅಪಾರ ಆಸ್ತಿಪಾಸ್ತಿ ನಷ್ಟ, ಜೀವಹಾನಿ ಎಲ್ಲವನ್ನೂ ಇತಿಹಾಸವನ್ನು ನೋಡಿ ತಿಳಿದುಕೊಳ್ಳಬೇಕಾಗುತ್ತದೆ. ಕೋಮುದ್ವೇಷ ಹಿನ್ನೆಲೆಯ ಯಾವುದೇ ಶವಮೆರವಣಿಗೆ ದೇಶಕ್ಕೆ ಒಳಿತನ್ನು ಮಾಡಿಲ್ಲ ಎಂಬುದು ಸ್ಪಷ್ಟ. ಅಲ್ಲದೆ ಪೊಲೀಸ್ ವ್ಯವಸ್ಥೆಯ ವೈಫಲ್ಯವೂ ಇಲ್ಲಿ ಎದ್ದು ಕಾಣುತ್ತದೆ.

ಹರ್ಷ ಕೊಲೆ ಪ್ರಕರಣ: ನಿಷೇಧಾಜ್ಞೆಯ ನಡುವೆ ದಾಂಧಲೆ

ಕಳೆದ ಫೆಬ್ರವರಿಯಲ್ಲಿ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದಾಗ ಶವ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಅಂದು ಮುಸ್ಲಿಂ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಯಿತು. ಬೆಂಕಿ ಹಚ್ಚಲಾಯಿತು.

ಫೆ.21ರ ಸೋಮವಾರದಂದು ಸುಮಾರು ಒಂದು ಗಂಟೆ 20 ನಿಮಿಷಗಳ ಕಾಲ ಶಿವಮೊಗ್ಗದ ಆಜಾದ್ ನಗರ, ಓಟಿ ರಸ್ತೆ, ಗಾಂಧಿ ಬಜಾರ್, ಸೀಗೆಹಟ್ಟಿ, ಸಿದ್ದಯ್ಯ ನಗರ, ಉರ್ದು ಬಜಾರ್ ಮತ್ತು ಕ್ಲಾರ್ಕ್ ಪೇಟೆಯಂತಹ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳ ನಿವಾಸಿಗಳು ಭಯಭೀತರಾಗಿದ್ದರು. ವಿದ್ವಂಸಕ ಗುಂಪುಗಳು ಬೆಂಕಿ ಹಚ್ಚಿದವು, ಹಿಂಸಾತ್ಮಕವಾಗಿ ವರ್ತಿಸಿದವು.

ಇದನ್ನೂ ಓದಿರಿ: ಕರಾವಳಿಯಲ್ಲಿನ ಕೋಮುದ್ವೇಷಗಳ ಆಯಾಮ ತೆರೆದಿಡುವ ಕೃತಿ ‘ನೇತ್ರಾವತಿಯಲ್ಲಿ ನೆತ್ತರು’

ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದಿಂದ ಹರ್ಷನ ಮನೆಯವರೆಗೆ, ಅಲ್ಲಿಂದ ರೋಟರಿ ಸ್ಮಶಾನದವರೆಗೆ ಶವದ ಮೆರವಣಿಗೆಯನ್ನು ಸೆಕ್ಷನ್ 144 ಜಾರಿಯ ನಡುವೆಯೇ ನಡೆಸಲಾಯಿತು. ಸುಮಾರು 600 ಜನರು ಮೆರವಣಿಗೆಯಲ್ಲಿದ್ದರು.

ಮೆರವಣಿಗೆಗೆ ಅವಕಾಶ ನೀಡಿದರೆ ಹಿಂಸಾಚಾರ ಭುಗಿಲೇಳುತ್ತದೆ ಎಂಬುದನ್ನು ಪೊಲೀಸರು ಬಲ್ಲವರಾಗಿದ್ದರೂ ಶವದ ಮೆರವಣಿಗೆಗೆ ಅವಕಾಶ ನೀಡಲಾಯಿತು. ನೂರಾರು ಜನರು ಶವದ ವಾಹನವನ್ನು ಹಿಂಬಾಲಿಸಿದರು. ನಗರದ ಬೀದಿಗಳಲ್ಲಿ ‘ಜೈ ಶ್ರೀ ರಾಮ್’ ಘೋಷಣೆಗಳು ಪ್ರತಿಧ್ವನಿಸಿದವು. ಮೆರವಣಿಗೆಯ ನೇತೃತ್ವವನ್ನು ಬಿಜೆಪಿಯ ನಾಯರಾದ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರ, ಸಂಸದ ಬಿ.ವೈ. ರಾಘವೇಂದ್ರ ವಹಿಸಿದ್ದರು.

ಸೆಕ್ಷನ್ 144 ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆಯಾದರೂ, ಪೊಲೀಸರು ಹಿರಿಯ ಬಿಜೆಪಿ ನಾಯಕರಿಗೆ ಭದ್ರತೆಯನ್ನು ಒದಗಿಸುತ್ತಿರುವುದು, ಜನನಿಬಿಡ ಬೀದಿಗಳಲ್ಲಿ ಮೆರವಣಿಗೆಗೆ ಅವಕಾಶ ನೀಡುತ್ತಿರುವುದು ಕಂಡುಬಂದಿತ್ತು. ಕೋಮು ಘರ್ಷಣೆಗಳಿಗೆ ಸಾಕ್ಷಿಯಾಗುವ ಪ್ರದೇಶಗಳಲ್ಲಿ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು.

ಗಾಯಗೊಂಡ ನಿವಾಸಿಗಳಲ್ಲಿ ಒಬ್ಬರು 36 ವರ್ಷದ ಸಬ್ರೀನ್. ಅವರು ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಇಬ್ಬರು ಚಿಕ್ಕ ಮಕ್ಕಳು ಅವರಿಗಾಗಿ ಕಾಯುತ್ತಿದ್ದವು. ಹಾಲು ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೊರಟಿದ್ದ ಸಬ್ರೀನ್ ಅವರು ಒಟಿ ರಸ್ತೆಯ ಕಿರಿದಾದ ಹಾದಿಯಲ್ಲಿ ಜನರ ಗುಂಪೊಂದು ಪ್ರವೇಶಿಸುವುದನ್ನು ನೋಡಿದರು. ಒಂದು ಕಲ್ಲು ಅವರ ತಲೆಗೆ ಬಡಿಯಿತು. ತನ್ನನ್ನು ರಕ್ಷಿಸಿಕೊಳ್ಳಲು ತಿರುಗಿದಾಗ ಇನ್ನೊಂದು ಕಲ್ಲು ಅವರ ಬೆನ್ನಿಗೆ ಬಡಿಯಿತು ಎಂಬುದನ್ನು ಅವರು ತಿಳಿಸಿದ್ದಾರೆ. “200 ಮೀಟರ್‌ಗಿಂತ ಕಡಿಮೆ ದೂರದಲ್ಲಿ ಮೂವರು ಪೊಲೀಸರು ಇದ್ದರು” ಎಂದು ಅವರು ಆರೋಪಿಸಿದ್ದಾರೆ.

ಸಬ್ರೀನ್ ಗಾಯಗೊಂಡ ಪ್ರದೇಶದಲ್ಲಿ ಮದ್ರಸಾ ಸೇರಿದಂತೆ ಹಲವಾರು ಕಟ್ಟಡಗಳು ಹಾನಿಗೊಳಗಾದವು. ಗಾಜಿನ ಕಿಟಕಿಗಳು ಒಡೆದು ಹೋಗಿವೆ. ಗಲಭೆಕೋರರು ಮದರಸಾವನ್ನು ಗುರಿಯಾಗಿಸಿಕೊಂಡಿದ್ದರು. ಒಳಗಿದ್ದ ಸುಮಾರು 20 ಮಕ್ಕಳು ಕಲ್ಲುಗಳು ಮತ್ತು ಇಟ್ಟಿಗೆಗಳ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪಟ್ಟ ಪಾಡನ್ನು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಗಾಜುಗಳನ್ನು ಒಡೆದುಹಾಕಿದ್ದು, ನಿಲ್ಲಿಸಿದ್ದ ವಾಹನಗಳು ಪಲ್ಟಿಯಾದದ್ದು, ಕೆಲವು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ ಸದ್ದು ಕೇಳಿ ಮನೆಯಿಂದ ಹೊರ ಬಂದೆವು ಎನ್ನುತ್ತಾರೆ ಮದರಸಾದ ಸಮೀಪ ನಿವಾಸಿಗಳು. ಅನೇಕ ಅಮಾಯಕ ಮುಸ್ಲಿಮರು ಈ ಘಟನೆಯಲ್ಲಿ ಪೆಟ್ಟು ತಿಂದರು. (ವಿವರಗಳನ್ನು ‘ಇಲ್ಲಿ’ ಓದಬಹುದು.)

ಸುಖಾನಂದ ಶೆಟ್ಟಿ ಪ್ರಕರಣ: ಒಂದು ಶವ ಮೆರವಣಿಗೆಯಲ್ಲಿ ಎರಡು ಕೊಲೆ

2006ನೇ ಇಸವಿ. ಡಿಸೆಂಬರ್‌ 1ರಂದು ಬಿಜೆಪಿ ಮುಖಂಡ ಸುಖಾನಂದ ಶೆಟ್ಟಿ ಅವರು ಮಂಗಳೂರಿನ ಕುಳಾಯಿಯ ಹೊನ್ನಕಟ್ಟೆ ಎಂಬಲ್ಲಿ ಕೊಲೆಯಾಗುತ್ತಾರೆ. ಅಂದು ಶವಮೆರವಣಿಗೆ ನಡೆದಾಗ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಶೂಟೌಟ್ ಮಾಡಲಾಗಿತ್ತು.

ಕರಾವಳಿ ಕೋಮು ಚರಿತ್ರೆಯನ್ನು ಆಳವಾಗಿ ಅಧ್ಯಯನ ಮಾಡಿರುವ ಪತ್ರಕರ್ತ ನವೀನ್‌ ಸೂರಿಂಜೆ ಅವರು ಸುಖಾನಂದ ಶೆಟ್ಟಿ ಪ್ರಕರಣವನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದು ಹೀಗೆ:

“ಸುಖಾನಂದ ಶೆಟ್ಟಿಯವರು ನಳಿನ್‌ ಕುಮಾರ್‌ ಕಟೀಲ್ ಅವರ ಗುರುವಿನಂತಿದ್ದರು. ಬಂಟ ಸಮುದಾಯಕ್ಕೆ ಸೇರಿದ ಬಹುದೊಡ್ಡ ಯುವನಾಯಕ ಸುಖಾನಂದ ಶೆಟ್ಟಿ. ಅಂದು ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿತ್ತು. ನಾಗರಾಜ ಶೆಟ್ಟಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಮುಲ್ಕಿ ವಿಧಾನಸಭಾ ಕ್ಷೇತ್ರದ ಮುಂದಿನ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಸುಖಾನಂದ ಶೆಟ್ಟಿಯವರ ಶವವನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಅಲ್ಲಿಂದ ಶವ ಮೆರವಣಿಗೆ ಮಾಡಬೇಕೆಂದು ನಿರ್ಧಾರವಾಗಿತ್ತು. ಅಂದಿನ ಮಂಗಳೂರಿನ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದವರು ಈಗಿನ ಗುಪ್ತಚರ ಇಲಾಖೆಯ ಮುಖ್ಯಸ್ಥರಾದ ದಯಾನಂದ. ಎಜೆ ಆಸ್ಪತ್ರೆಗೆ ಬಂದ ದಯಾನಂದ ಅವರು ನಾಗರಾಜ್‌ ಶೆಟ್ಟಿಯವರಲ್ಲಿ- ಯಾವುದೇ ಕಾರಣಕ್ಕೂ ನೀವು ಶವಮೆರವಣಿಗೆ ಮಾಡಬಾರದು. ನಮಗೆ ಗುಪ್ತಚರ ಮಾಹಿತಿ ಇದೆ- ಎಂದು ತಿಳಿಸುತ್ತಾರೆ. ಉಸ್ತುವಾರಿ ಸಚಿವರು ಆ ಮಾತನ್ನು ಒಪ್ಪುವುದಿಲ್ಲ. ‘ಶವ ಮೆರವಣಿಗೆ ಮಾಡಲೇಬೇಕು, ಬೇಕಾದರೆ ಹೆಚ್ಚಿನ ಭದ್ರತೆ ತೆಗೆದುಕೊಳ್ಳಿ’ ಎನ್ನುತ್ತಾರೆ. ದಯಾನಂದ ಅವರು ಅಸಮ್ಮತಿ ಸೂಚಿಸುತ್ತಾರೆ. ಏಕೆಂದರೆ ಹತ್ತಾರು ಕಿ.ಮೀ. ಮೆರವಣಿಗೆ ಸಾಗಬೇಕಾಗಿದೆ. ಮಂಗಳೂರಿನಿಂದ ಮುಲ್ಕಿಗೆ ಶವ ಮೆರವಣಿಗೆ ಆಗಬೇಕೆಂದರೆ ಹೆದ್ದಾರಿ ಬ್ಲಾಕ್ ಆಗುತ್ತದೆ. ದಾರಿಯುದ್ಧಕ್ಕೂ ಮಸೀದಿಗಳು, ದೇವಸ್ಥಾನಗಳು, ಚರ್ಚ್‌‌ಗಳಿವೆ. ಯಾವುದೇ ಕಾರಣಕ್ಕೂ ಮೆರವಣಿಗೆ ಮಾಡಬಾರದು ಎನ್ನುತ್ತಾರೆ. ಆದರೆ ನಾಗರಾಜ್ ಶೆಟ್ಟಿ ಒಪ್ಪುವುದೇ ಇಲ್ಲ.”

“ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿಯಾಗುತ್ತದೆ. ಒಬ್ಬ ಕಾರ್ಯಕರ್ತನಂತೂ ಎಸ್‌ಪಿಯ ಕಾಲರ್‌ ಹಿಡಿಯಲು ಹೋಗುತ್ತಾನೆ. ಆನಂತರ ಮೆರವಣಿಗೆ ಆರಂಭವಾಗುತ್ತದೆ. ಕೋಮು ಸೂಕ್ಷ್ಮ ಪ್ರದೇಶವಾದ ಸುರತ್ಕಲ್‌ ದಾಟಿ ಹೋಗುವುದು ದೊಡ್ಡ ಸವಾಲಾಗಿತ್ತು. ಅಲ್ಲಿ ಮತ್ತಷ್ಟು ಜನ ಸೇರಿಕೊಂಡರು. ಜನ ಹೆಚ್ಚಾದರು. ಅಂತೂ ಮೆರವಣಿಗೆ ಮುಲ್ಕಿ ತಲುಪಿತು. ಒಂದು ಕಡೆ ಮಸೀದಿ, ಒಂದು ಕಡೆ ಮಂದಿರ, ಒಂದು ಕಡೆ ಸರ್ಕಲ್‌ ಇದೆ. ಅದೆಲ್ಲವೂ ದಾಟಿ ಸುಖಾನಂದ ಶೆಟ್ಟಿ ಮನೆಗೆ ತೆರಳಬೇಕಿತ್ತು. ಆಗಲೇ ಕತ್ತಲು ಆವರಿಸುತ್ತಾ ಸಂಜೆ ಏಳು ಗಂಟೆಯಾಗಿತ್ತು. ಉದ್ವಿಗ್ನ ವಾತಾವರಣ. ಹಿಂದೂ ಮುಸ್ಲಿಂ ಎಲ್ಲ ಸೇರಿದ್ದರು. ಪ್ರೇಮ್‌ ಕೋಟ್ಯಾನ್‌, ಹರೀಶ್‌ ಪೂಜಾರಿ ಎಂಬ ಇಬ್ಬರು ಬಿಲ್ಲವ ಸಮುದಾಯದ ಬಿಜೆಪಿ ಕಾರ್ಯಕರ್ತರು ಆಕ್ರೋಶಭರಿತರಾಗಿದ್ದರು. ಪೊಲೀಸ್ ವರಿಷ್ಠಾಧಿಕಾರಿ ದಯಾನಂದ ಅವರ ಮೇಲೆ ಈ ಹುಡುಗರು ಕೈ ಹಾಕುತ್ತಾರೆ. ಪರಿಸ್ಥಿತಿ ಮಿತಿಮೀರುತ್ತಿತ್ತು. ದಯಾನಂದ ಅವರ ಗನ್‌ ಮ್ಯಾನ್‌ ಆಗಿದ್ದ ಅರುಣ್‌ ಆಳ್ವ ರಿವಾಲ್ವರ್‌ ತೆಗೆದು ತನ್ನ ಪಕ್ಕದಲ್ಲಿದ್ದ ಪ್ರೇಮ್‌ ಕೋಟ್ಯಾನ್‌ ಹಾಗೂ ಹರೀಶ್‌ ಪೂಜಾರಿಗೆ ಶೂಟ್ ಮಾಡುತ್ತಾರೆ. ಮುಂದೆ ಶವ ಹೋಗುತ್ತಿದ್ದರೆ, ಹಿಂದೆ ಎರಡು ಶವ ಬಿದ್ದಿದ್ದವು. ಮಂಗಳೂರು ಹೊತ್ತಿ ಉರಿಯಿತು. ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಇಬ್ಬರು ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದರು. ದಯಾನಂದ ಅವರು ಈಗ ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ಪೂರ್ಣಪ್ರಮಾಣದ ಬಿಜೆಪಿ ಸರ್ಕಾರ ಬಂದಾಗ ಕೃಷ್ಣ ಪಾಲೇಮಾರ್‌ ಸಚಿವರಾದರು. ಅವರಿಗೆ ಅರುಣ್ ಆಳ್ವ ಗನ್‌ ಮ್ಯಾನ್ ಆಗುತ್ತಾರೆ. ಅರಣ್ ಆಳ್ವ ಈಗ ಎಸ್‌ಐ ಆಗಿದ್ದಾರೆ.”

ಶರತ್‌ ಮಡಿವಾಳ ಪ್ರಕರಣ

ಶರತ್‌ ಮಡಿವಾಳ ಪ್ರಕರಣದಲ್ಲೂ ಶವ ಮೆರವಣಿಗೆಯಾಗಿ ಗಲಭೆಯಾಗಿದ್ದನ್ನು ನವೀನ್‌ ಸೂರಿಂಜೆ ಉಲ್ಲೇಖಿಸುತ್ತಾರೆ. ಶವ ಮೆರವಣಿಗೆಯ ಅಹಿತಕರ ಘಟನೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ ಪಾಲು ಕೂಡ ಇರುತ್ತದೆ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಯಾವುದೇ ಪ್ರಕರಣ ದಾಖಲಾಗುವುದಿಲ್ಲ. ಆದರೆ ಬಿಲ್ಲವ ಸಮುದಾಯದ ಸತ್ಯಜಿತ್‌ ಸುರತ್ಕಲ್‌ ಹಾಗೂ ಕೊಟ್ಟಾರಿ ಎಂಬ ಹಿಂದುಳಿದ ಸಮುದಾಯಕ್ಕೆ ಸೇರಿದ ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ ದಾಖಲಾಗುತ್ತದೆ.

ಇದನ್ನೂ ಓದಿರಿ: ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಗೋದ್ರಾದಲ್ಲೂ ಇದೇ ಕಥೆ

‘ದಿ ಹಿಂದೂ’ ಪತ್ರಿಕೆಯ ವರದಿಗಾರರಾದ ಆದಿತ್ಯ ಭಾರದ್ವಾಜ್‌ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆಯುತ್ತಾ, “ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು. ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು. 2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತದೆ” ಎನ್ನುತ್ತಾರೆ.

ಸ್ಥಳೀಯ ಪೊಲೀಸರ ಮೇಲೆ ಕಾನೂನು ಸುವ್ಯವಸ್ಥೆ ಅವಲಂಬಿತ: ಎಸ್.ಟಿ.ರಮೇಶ್‌

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ನಿವೃತ್ತ ಡಿಜಿಪಿ ಎಸ್.ಟಿ.ರಮೇಶ್‌, “ಸ್ಥಳೀಯ ಪೊಲೀಸ್‌ ಪೊಲೀಸರಿಗೆ ಎಲ್ಲ ಮಾಹಿತಿ ಇರುತ್ತದೆ. ಅವರು ಸರಿಯಾದ ತೀರ್ಮಾನ ತೆಗೆದುಕೊಂಡರೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲ್ಲ, ಒಬ್ಬ ದೇಶಭಕ್ತ ಯುವಕನನ್ನು ಕೊಲೆ ಮಾಡುವುದು ತಪ್ಪಲ್ಲ, ಅವನ ಶವದ ಮೆರವಣಿಗೆ ಮಾಡುವುದು ತಪ್ಪಲ್ಲವೇ?

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...