Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...