Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...