Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...