Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...