Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...