Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...