Homeಕರ್ನಾಟಕʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

- Advertisement -
- Advertisement -

ದತ್ತ ಜಯಂತಿ ಹಿನ್ನೆಲೆಯಲ್ಲಿ ಕುಡಿದು ಗಲಭೆ ಮಾಡುವ ಸಾಧ್ಯತೆ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಿರಲೆಂದು ದತ್ತ ಜಯಂತಿಯ ದಿನ ಬೇಲೂರು ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇದಿಸಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದಿನಾಂಕ 19-12-2021ರಂದು (ಸೋಮವಾರ) ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ದತ್ತ ಜಯಂತಿಯ ಅಂಗವಾಗಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಅರೇಹಳ್ಳಿ, ಬಿಕ್ಕೋಡು, ಬೇಲೂರು ಮತ್ತು ಹಳೇಬೀಡು ಮಾರ್ಗವಾಗಿ ಸಾವಿರಾರು ವಾಹನಗಳಲ್ಲಿ ದತ್ತಮಾಲೆ ಧರಿಸಿಕೊಂಡು ಚಿಕ್ಕಮಗಳೂರಿಗೆ ಹೋಗಲಿದ್ದಾರೆ.

ನಂತರ ವಾಪಸ್‌ ಸಕಲೇಶಪುರದ ಕಡೆಗೆ ಬರುವಾಗ ಬೇಲೂರು, ಹಳೇಬೀಡು, ಬಿಕ್ಕೋಡು ಅರೇಹಳ್ಳಿಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯವನ್ನು ಸೇವಿಸಿ ಅನ್ಯ ಧರ್ಮಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವಂತೆ ಘೋಷಣೆಗಳನ್ನು ಕೂಗುತ್ತಾ ಹೋಗುವ ಸಂಭವವಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಜರುಗಿಸಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ತಿಳಿಸಿದ್ದಾರೆ.

“ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ವ್ಯವಸ್ಥೆಯನ್ನು ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು ತಾಲ್ಲೂಕಿನಾದ್ಯಂತ ದಿನಾಂಕ 19-12-2021ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 19-12-2021ರ ಮಧ್ಯರಾತ್ರಿ 12 ಗಂಟೆಯವರೆಗೆ ಪಾನ ನಿರೋಧ (ಒಣ) ದಿನ ಘೋಷಿಸಲು ಹಾಸನ ಪೊಲೀಸ್ ಅಧೀಕ್ಷಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ‘ಬೇಲೂರು ತಾಲ್ಲೂಕಿನಾದ್ಯಂತ’ ಮದ್ಯ ಮಾರಾಟ ನಿಷೇಧಿಸುವುದು ಅಗತ್ಯವಿರುವುದಾಗಿ ಕಂಡು ಬಂದಿರುವುದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21 ಅಡಿ ನನಗೆ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ದಿನಾಂಕ 19-12-2021ರಂದು ಬೆಳಿಗ್ಗೆ 6 ಗಂಟೆಯಿಂದ 19-12-2021ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಬೇಲೂರು ತಾಲ್ಲೂಕಿನಾದ್ಯಂತ ಎಲ್ಲ ಬಗೆಯ ಮದ್ಯ ಹಾಗೂ ಅಮಲು ಪಾನೀಯಗಳ ಶೇಖರಣೆಯನ್ನು, ಸರ್ಕಾರಿ ಹಾಗೂ ಖಾಸಗಿ ಮದ್ಯ ಅಂಗಡಿಗಳಲ್ಲಿ, ಡಾಬಾಗಳಲ್ಲಿ, ಬಾರುಗಳಲ್ಲಿ, ಹೋಟೆಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ಹಾಗೂ ಮದ್ಯ ಸಾಗಾಟ, ಸರಬರಾಜು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಆದೇಶಿದ್ದಾರೆ.


ಇದನ್ನೂ ಓದಿರಿ: ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...