Homeಕರ್ನಾಟಕಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

- Advertisement -
- Advertisement -

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಕೆಪಿಆರ್‌ಎಸ್‌ ಜಿಲ್ಲಾ ಸಮಿತಿ ಆಗ್ರಹಿಸಿದೆ.

“ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಮನೆ ವೃತ್ತದಲ್ಲಿ ಗ್ರಂಥಾಲಯವಿತ್ತು. ಈ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸಾರ್ವಜನಿಕರ ಉಪಯೋಗಕ್ಕಾಗಿ ಇದನ್ನು ದುರಸ್ತಿಗೊಳಿಸಿ, ಕಟ್ಟಡವನ್ನು ಉನ್ನತೀಕರಿಸಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಅನುಗುಣವಾಗಿ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ಅಭಿವೃದ್ಧಿಗೊಳಿಸಲು ವಾಸುದೇವ ರವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಪಂಚಾಯತಿ ಆಸ್ತಿ ಕಬಳಿಸುವ ದುರುದ್ದೇಶ ಹೊಂದಿದ್ದ, ಇದೇ ಸರ್ವೆ ನಂಬರ್ ಗೆ ಹೊಂದಿಕೊಂಡು ಇರುವ ಬಹು ಕೋಟಿ ಬೆಲೆ ಬಾಳುವ ಸುಮಾರು 11 ಎಕರೆ ಸರ್ಕಾರಿ ಭೂಮಿ ಕಬಳಿಸುವ ದುರುದ್ದೇಶದಿಂದ ಆಶೋಕ ನೇತೃತ್ವದ ಸುಮಾರು ಎಂಟು ಜನರಷ್ಟು ಇದ್ದ ಗೂಂಡಾಗಳು, ದಿನಾಂಕ 08-04-26 ರಂದು ಸಂಜೆ 6-30 ರ ಸಮಯದಲ್ಲಿ ಗ್ರಂಥಾಲಯ ದುರಸ್ತಿ ಕಾರ್ಯ ಮೇಲ್ವಿಚಾರಣೆ ನಡೆಸುತ್ತಿದ್ದ ವಾಸುದೇವ ರವರ ಮೇಲೆ ಹಲ್ಲೆ ನಡೆಸಿ ಗ್ರಂಥಾಲಯ ದುರಸ್ತಿ ಕಾರ್ಯ ನಿಲ್ಲಿಸುವಂತೆ ಜೀವ ಬೆದರಿಕೆ ಹಾಕಿದ್ದಾರೆ. ಸ್ಥಳೀಯ ಜನರ ಸಕಾಲಿಕ ಮಧ್ಯಪ್ರವೇಶದಿಂದ ವಾಸುದೇವರವರ ಪ್ರಾಣ ಉಳಿದಿದೆ” ಎಂದು ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ನುಗ್ಗೇಹಳ್ಳಿ ಪಿಎಸ್ ಐ ರವರಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಭೇಟಿ ನೀಡದೇ ಹಾಗೂ ದೂರು ದಾಖಲಿಸಿಕೊಳ್ಳಲು ಅನಗತ್ಯ ವಿಳಂಬ ಮಾಡುವ ಮೂಲಕ ದೌರ್ಜನ್ಯ ನಡೆಸಿದ ಗೂಂಡಾಗಳ ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಇಂತಹ ಗಂಭೀರ ಸ್ವರೂಪದ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆದಾಗಲೂ ದೂರು ತೆಗೆದುಕೊಳ್ಳಲು ನಿರಾಕರಿಸಿದ ಕುರಿತು ಇಲಾಖೆ ವಿಚಾರಣೆ ನಡೆಸಬೇಕು, ಕೂಡಲೇ ಎಲ್ಲಾ ಗೂಂಡಾಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಗೃಹ ಸಚಿವರನ್ನು ಹಾಗೂ ರಾಜ್ಯ ಸರ್ಕಾರವನ್ನು ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾ ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...