Homeಕರ್ನಾಟಕಹಾಸನ: ಶಾಲೆಯಲ್ಲಿ ಬಕ್ರಿದ್ ಆಚರಣೆ ವಿರುದ್ದ ಹಿಂದುತ್ವ ಸಂಘಟನೆಗಳ ಆಕ್ರೋಶ; ಆಡಳಿತ ಮಂಡಳಿ ಸ್ಪಷ್ಟನೆ ಇಲ್ಲಿದೆ..

ಹಾಸನ: ಶಾಲೆಯಲ್ಲಿ ಬಕ್ರಿದ್ ಆಚರಣೆ ವಿರುದ್ದ ಹಿಂದುತ್ವ ಸಂಘಟನೆಗಳ ಆಕ್ರೋಶ; ಆಡಳಿತ ಮಂಡಳಿ ಸ್ಪಷ್ಟನೆ ಇಲ್ಲಿದೆ..

- Advertisement -
- Advertisement -

ಬಕ್ರೀದ್ ಹಬ್ಬದ ಹಿನ್ನೆಲೆ ಶಾಲೆಯಲ್ಲಿ ಮಕ್ಕಳು ಸಾಮೂಹಿಕ ನಮಾಜ್ ಮಾಡಿರುವ ಆರೋಪ ಹಾಸನದಲ್ಲಿ ಕೇಳಿ ಬಂದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್​ ನ್ಯಾಷನಲ್ ಶಾಲೆಯ ವಿರುದ್ಧ ಹಿಂದುತ್ವ ಸಂಘಟನೆಗಳು ಗಂಭೀರ ಆರೋಪ ಮಾಡಿದ್ದು, ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಸ್ಲಿಂ ಧರ್ಮದ ಶ್ಲೋಕ ಹೇಳಿಸಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಸಾಮೂಹಿಕವಾಗಿ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೇವಲ ಮೂರು ಮುಸ್ಲಿಂ ಮಕ್ಕಳು ಮಾತ್ರ ಪ್ರಾರ್ಥನೆ ಮಾಡಿವೆ. ಬೇರೆ ಮಕ್ಕಳಿಂದ ಪ್ರಾರ್ಥನೆ ಮಾಡಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವೈರಲ್ ಆಗಿರೋ ವಿಡಿಯೋಗೆ ಸ್ಪಷ್ಟನೆ ನೀಡಿದೆ.

ಶಾಲೆ ಆಡಳಿತ ಮಂಡಳಿ ಸ್ಪಷ್ಟನೆ

ಮಕ್ಕಳಿಂದ ಪ್ರಾರ್ಥನೆ ಮಾಡಿಸಿಲ್ಲ, ಕೇವಲ ಭಾವೈಕ್ಯತೆ ಮೂಡಿಸುವ ಉದ್ಧೇಶದಿಂದ ಆಚರಣೆ ಮಾಡಿದ್ದೇವೆ. ಮುಸ್ಲಿಂ ಸಮುದಾಯದ ಮೂರು ಮಕ್ಕಳು ಮಾತ್ರ ನಮಾಜ್ ಮಾಡಿದ್ದಾರೆ. ಉಳಿದ ಮಕ್ಕಳು ಕಣ್ಮುಚ್ಚಿ ಕುಳಿತಿದ್ದರು ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ನಾವು ಶಾಲೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಕೇವಲ ಮುಸ್ಲಿಂ ಹಬ್ಬ ಮಾತ್ರವಲ್ಲ ಎಲ್ಲಾ ಧರ್ಮದ ಹಬ್ಬಗಳ ಪರಿಚಯ ಮಾಡಲು ಸಾಂಕೇತಿಕ ಆಚರಣೆ ಮಾಡಲಾಗುತ್ತಿದೆ. ಈಗ ನೀವು ಬೇಡ ಎಂದು ಹೇಳಿದ ಮೇಲೆ ನಾವು ಆಚರಣೆ ಮಾಡಿಸಲ್ಲ ಎಂದು ಶಿಕ್ಷಕ ವರ್ಗ ಹೇಳಿದೆ.

ಮಕ್ಕಳು ಕಾರ್ಯಕ್ರಮ ನೀಡುತ್ತಿರುವ ವೇಳೆ ಇನ್ನುಳಿದವರು ಗಲಾಟೆ ಮಾಡಬಾರದು ಎಂದು ಕಣ್ಣುಚ್ಚಿ ಕುಳಿತುಕೊಳ್ಳಲು ಸೂಚನೆ ನೀಡಲಾಗಿತ್ತು. ಕುರಾನ್ ಪಠಣೆ ಮಾಡಿಸಲಾಗಿದೆಯಾ ಅಥವಾ ಇಲ್ಲವೇ ಎಂಬುದನ್ನು ಮಕ್ಕಳನ್ನು ಕೇಳಿ ತಿಳಿದುಕೊಳ್ಳಿ, ಇದು ಕೇವಲ ಮೂರು ಮಕ್ಕಳಿಂದ ನಡೆದ ಕಾರ್ಯಕ್ರಮವಾಗಿದೆ. ನಿಮಗೆ ಅನುಮಾನ ಇದ್ದರೆ ಮಕ್ಕಳ ಜೊತೆ ಮಾತನಾಡಬಹುದು ಎಂದು ಶಿಕ್ಷಕರು ಹೇಳಿದ್ದಾರೆ.

ಸೋಮವಾರ ಹೋರಾಟಕ್ಕೆ ಕರೆ

ಶಾಲೆಯಲ್ಲಿ ಮುಸ್ಲಿಂ ಧರ್ಮ ಸಾಮೂಹಿಕ ಆಚರಣೆ ಖಂಡಿಸಿ ಸೋಮವಾರ ಹೋರಾಟಕ್ಕೆ ಹಿಂದುತ್ವ ಸಂಘಟನೆಗಳು ಕರೆ ನೀಡಿದೆ. ಸದ್ಯ ಶಾಲೆಯ ಈ ಕಾರ್ಯಕ್ರಮ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....