Homeಚಳವಳಿಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ - ಉಪವಾಸ ಸತ್ಯಾಗ್ರಹ

ಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ – ಉಪವಾಸ ಸತ್ಯಾಗ್ರಹ

- Advertisement -
- Advertisement -

ಸ್ಥಳೀಯ ಜನರ ವಿರೋಧದ ನಡುವೆಯೂ MSIL ಮದ್ಯದಂಗಡಿ ತೆರಯಲು ಅವಕಾಶ ನೀಡಿರುವ ಹಾಸನ ಜಿಲ್ಲಾಧಿಕಾರಿಗಳ ಕ್ರಮ ಖಂಡಿಸಿ ಮತ್ತು ಕೂಡಲೇ ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷರ್ ವತಿಯಿಂದ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಅರಕಲಗೂಡು ನಗರದ ‘ಅರಕಲಗೂಡು – ಮಲ್ಲಿಪಟ್ಟಣ ರಸ್ತೆಯಲ್ಲಿ’ MSIL ಮದ್ಯದಂಗಡಿ ತೆರೆಯುವುದಕ್ಕೆ ಅವಕಾಶ ನೀಡಬಾರದೆಂದು ಸ್ಥಳೀಯ ನಿವಾಸಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳೀಯ ಶಾಸಕರು ಸೇರಿ ನೂರಾರು ಜನರು ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಕಾನೂನುಬಾಹಿರವಾಗಿ ಅವಕಾಶ ನೀಡಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕುರಿತು ಜನಸಂಗ್ರಾಮ ಪರಿಷತ್ ಕಾರ್ಯದರ್ಶಿ ಜಗದೀಶ್‌ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಯಾವುದೇ ಕಟ್ಟಡ ಮಳಿಗೆಗಳನ್ನು ರಾಜ್ಯ ಹೆದ್ದಾರಿ ಸೇರಿದಂತೆ ರಸ್ತೆಯಿಂದ 6 ಮೀಟರ್‌ ದೂರದಲ್ಲಿ ಕಟ್ಟಬೇಕು ಎನ್ನುವ ನಿಯಮವಿದೆ. ಆದರೆ ಸದರಿ ಮದ್ಯ ಮಳಿಗೆಯು ರಸ್ತೆಯಿಂದ ಕೇವಲ ಎರಡು ಮೀಟರ್ ಅಂತರದಲ್ಲಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅದೇ ರೀತಿ MSIL ಮದ್ಯದಂಗಡಿಯ ಮುಂದೆ ಮದ್ಯಪಾನ ಮಾಡುವಂತಿಲ್ಲ. ಕೇವಲ ಮನೆಗೆ ತೆಗೆದಕೊಂಡು ಹೋಗುವ ಅವಕಾಶ ಮಾತ್ರವಿದೆ. ಆದರೆ ಅರಕಲಗೂಡಿನ ಈ ಮದ್ಯದಂಗಡಿ ಮುಂದೆಯೇ ಜನ ಮದ್ಯಪಾನ ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಮಹಿಳೆಯರು, ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದರೆ ಅವರು ಉತ್ತಿರಿಸುತ್ತಿಲ್ಲ. ಹಾಗಾಗಿ ಹೋರಾಟವೊಂದೇ ನಮಗಿರುವ ಏಕೈಕ ದಾರಿಯಾಗಿದೆ. ಹಾಗಾಗಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷತ್ ಸದಸ್ಯರು ಮತ್ತು ಅರಕಲಗೂಡು – ಮಲ್ಲಿಪಟ್ಟಣ ರಸ್ತೆ ನಿವಾಸಿಗಳು ಸೇರಿ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಅಕ್ಟೋಬರ್ 08 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಮದ್ಯದಂಗಡಿ ತೆರವುಗೊಳಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಹಾಸನ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಅವರು ಲಭ್ಯವಾಗಿಲ್ಲ. ಅವರು ಪ್ರತಿಕ್ರಿಯೆಗೆ ಸಿಕ್ಕಲ್ಲಿ ಅದನ್ನು ಅಪ್ಡೇಟ್ ಮಾಡಲಾಗುವುದು.

ಕಾನೂನು ಏನು ಹೇಳುತ್ತದೆ?

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ.


ಇದನ್ನೂ ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...