Homeಚಳವಳಿಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ - ಉಪವಾಸ ಸತ್ಯಾಗ್ರಹ

ಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ – ಉಪವಾಸ ಸತ್ಯಾಗ್ರಹ

- Advertisement -
- Advertisement -

ಸ್ಥಳೀಯ ಜನರ ವಿರೋಧದ ನಡುವೆಯೂ MSIL ಮದ್ಯದಂಗಡಿ ತೆರಯಲು ಅವಕಾಶ ನೀಡಿರುವ ಹಾಸನ ಜಿಲ್ಲಾಧಿಕಾರಿಗಳ ಕ್ರಮ ಖಂಡಿಸಿ ಮತ್ತು ಕೂಡಲೇ ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷರ್ ವತಿಯಿಂದ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಅರಕಲಗೂಡು ನಗರದ ‘ಅರಕಲಗೂಡು – ಮಲ್ಲಿಪಟ್ಟಣ ರಸ್ತೆಯಲ್ಲಿ’ MSIL ಮದ್ಯದಂಗಡಿ ತೆರೆಯುವುದಕ್ಕೆ ಅವಕಾಶ ನೀಡಬಾರದೆಂದು ಸ್ಥಳೀಯ ನಿವಾಸಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳೀಯ ಶಾಸಕರು ಸೇರಿ ನೂರಾರು ಜನರು ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಕಾನೂನುಬಾಹಿರವಾಗಿ ಅವಕಾಶ ನೀಡಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕುರಿತು ಜನಸಂಗ್ರಾಮ ಪರಿಷತ್ ಕಾರ್ಯದರ್ಶಿ ಜಗದೀಶ್‌ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಯಾವುದೇ ಕಟ್ಟಡ ಮಳಿಗೆಗಳನ್ನು ರಾಜ್ಯ ಹೆದ್ದಾರಿ ಸೇರಿದಂತೆ ರಸ್ತೆಯಿಂದ 6 ಮೀಟರ್‌ ದೂರದಲ್ಲಿ ಕಟ್ಟಬೇಕು ಎನ್ನುವ ನಿಯಮವಿದೆ. ಆದರೆ ಸದರಿ ಮದ್ಯ ಮಳಿಗೆಯು ರಸ್ತೆಯಿಂದ ಕೇವಲ ಎರಡು ಮೀಟರ್ ಅಂತರದಲ್ಲಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅದೇ ರೀತಿ MSIL ಮದ್ಯದಂಗಡಿಯ ಮುಂದೆ ಮದ್ಯಪಾನ ಮಾಡುವಂತಿಲ್ಲ. ಕೇವಲ ಮನೆಗೆ ತೆಗೆದಕೊಂಡು ಹೋಗುವ ಅವಕಾಶ ಮಾತ್ರವಿದೆ. ಆದರೆ ಅರಕಲಗೂಡಿನ ಈ ಮದ್ಯದಂಗಡಿ ಮುಂದೆಯೇ ಜನ ಮದ್ಯಪಾನ ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಮಹಿಳೆಯರು, ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದರೆ ಅವರು ಉತ್ತಿರಿಸುತ್ತಿಲ್ಲ. ಹಾಗಾಗಿ ಹೋರಾಟವೊಂದೇ ನಮಗಿರುವ ಏಕೈಕ ದಾರಿಯಾಗಿದೆ. ಹಾಗಾಗಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷತ್ ಸದಸ್ಯರು ಮತ್ತು ಅರಕಲಗೂಡು – ಮಲ್ಲಿಪಟ್ಟಣ ರಸ್ತೆ ನಿವಾಸಿಗಳು ಸೇರಿ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಅಕ್ಟೋಬರ್ 08 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಮದ್ಯದಂಗಡಿ ತೆರವುಗೊಳಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಹಾಸನ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಅವರು ಲಭ್ಯವಾಗಿಲ್ಲ. ಅವರು ಪ್ರತಿಕ್ರಿಯೆಗೆ ಸಿಕ್ಕಲ್ಲಿ ಅದನ್ನು ಅಪ್ಡೇಟ್ ಮಾಡಲಾಗುವುದು.

ಕಾನೂನು ಏನು ಹೇಳುತ್ತದೆ?

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ.


ಇದನ್ನೂ ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...