Homeಚಳವಳಿಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ - ಉಪವಾಸ ಸತ್ಯಾಗ್ರಹ

ಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ – ಉಪವಾಸ ಸತ್ಯಾಗ್ರಹ

- Advertisement -
- Advertisement -

ಸ್ಥಳೀಯ ಜನರ ವಿರೋಧದ ನಡುವೆಯೂ MSIL ಮದ್ಯದಂಗಡಿ ತೆರಯಲು ಅವಕಾಶ ನೀಡಿರುವ ಹಾಸನ ಜಿಲ್ಲಾಧಿಕಾರಿಗಳ ಕ್ರಮ ಖಂಡಿಸಿ ಮತ್ತು ಕೂಡಲೇ ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷರ್ ವತಿಯಿಂದ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಅರಕಲಗೂಡು ನಗರದ ‘ಅರಕಲಗೂಡು – ಮಲ್ಲಿಪಟ್ಟಣ ರಸ್ತೆಯಲ್ಲಿ’ MSIL ಮದ್ಯದಂಗಡಿ ತೆರೆಯುವುದಕ್ಕೆ ಅವಕಾಶ ನೀಡಬಾರದೆಂದು ಸ್ಥಳೀಯ ನಿವಾಸಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳೀಯ ಶಾಸಕರು ಸೇರಿ ನೂರಾರು ಜನರು ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಕಾನೂನುಬಾಹಿರವಾಗಿ ಅವಕಾಶ ನೀಡಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕುರಿತು ಜನಸಂಗ್ರಾಮ ಪರಿಷತ್ ಕಾರ್ಯದರ್ಶಿ ಜಗದೀಶ್‌ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಯಾವುದೇ ಕಟ್ಟಡ ಮಳಿಗೆಗಳನ್ನು ರಾಜ್ಯ ಹೆದ್ದಾರಿ ಸೇರಿದಂತೆ ರಸ್ತೆಯಿಂದ 6 ಮೀಟರ್‌ ದೂರದಲ್ಲಿ ಕಟ್ಟಬೇಕು ಎನ್ನುವ ನಿಯಮವಿದೆ. ಆದರೆ ಸದರಿ ಮದ್ಯ ಮಳಿಗೆಯು ರಸ್ತೆಯಿಂದ ಕೇವಲ ಎರಡು ಮೀಟರ್ ಅಂತರದಲ್ಲಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅದೇ ರೀತಿ MSIL ಮದ್ಯದಂಗಡಿಯ ಮುಂದೆ ಮದ್ಯಪಾನ ಮಾಡುವಂತಿಲ್ಲ. ಕೇವಲ ಮನೆಗೆ ತೆಗೆದಕೊಂಡು ಹೋಗುವ ಅವಕಾಶ ಮಾತ್ರವಿದೆ. ಆದರೆ ಅರಕಲಗೂಡಿನ ಈ ಮದ್ಯದಂಗಡಿ ಮುಂದೆಯೇ ಜನ ಮದ್ಯಪಾನ ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಮಹಿಳೆಯರು, ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದರೆ ಅವರು ಉತ್ತಿರಿಸುತ್ತಿಲ್ಲ. ಹಾಗಾಗಿ ಹೋರಾಟವೊಂದೇ ನಮಗಿರುವ ಏಕೈಕ ದಾರಿಯಾಗಿದೆ. ಹಾಗಾಗಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷತ್ ಸದಸ್ಯರು ಮತ್ತು ಅರಕಲಗೂಡು – ಮಲ್ಲಿಪಟ್ಟಣ ರಸ್ತೆ ನಿವಾಸಿಗಳು ಸೇರಿ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಅಕ್ಟೋಬರ್ 08 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಮದ್ಯದಂಗಡಿ ತೆರವುಗೊಳಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಹಾಸನ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಅವರು ಲಭ್ಯವಾಗಿಲ್ಲ. ಅವರು ಪ್ರತಿಕ್ರಿಯೆಗೆ ಸಿಕ್ಕಲ್ಲಿ ಅದನ್ನು ಅಪ್ಡೇಟ್ ಮಾಡಲಾಗುವುದು.

ಕಾನೂನು ಏನು ಹೇಳುತ್ತದೆ?

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ.


ಇದನ್ನೂ ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...