Homeಚಳವಳಿಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ - ಉಪವಾಸ ಸತ್ಯಾಗ್ರಹ

ಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ – ಉಪವಾಸ ಸತ್ಯಾಗ್ರಹ

- Advertisement -
- Advertisement -

ಸ್ಥಳೀಯ ಜನರ ವಿರೋಧದ ನಡುವೆಯೂ MSIL ಮದ್ಯದಂಗಡಿ ತೆರಯಲು ಅವಕಾಶ ನೀಡಿರುವ ಹಾಸನ ಜಿಲ್ಲಾಧಿಕಾರಿಗಳ ಕ್ರಮ ಖಂಡಿಸಿ ಮತ್ತು ಕೂಡಲೇ ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷರ್ ವತಿಯಿಂದ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಅರಕಲಗೂಡು ನಗರದ ‘ಅರಕಲಗೂಡು – ಮಲ್ಲಿಪಟ್ಟಣ ರಸ್ತೆಯಲ್ಲಿ’ MSIL ಮದ್ಯದಂಗಡಿ ತೆರೆಯುವುದಕ್ಕೆ ಅವಕಾಶ ನೀಡಬಾರದೆಂದು ಸ್ಥಳೀಯ ನಿವಾಸಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳೀಯ ಶಾಸಕರು ಸೇರಿ ನೂರಾರು ಜನರು ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಕಾನೂನುಬಾಹಿರವಾಗಿ ಅವಕಾಶ ನೀಡಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕುರಿತು ಜನಸಂಗ್ರಾಮ ಪರಿಷತ್ ಕಾರ್ಯದರ್ಶಿ ಜಗದೀಶ್‌ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಯಾವುದೇ ಕಟ್ಟಡ ಮಳಿಗೆಗಳನ್ನು ರಾಜ್ಯ ಹೆದ್ದಾರಿ ಸೇರಿದಂತೆ ರಸ್ತೆಯಿಂದ 6 ಮೀಟರ್‌ ದೂರದಲ್ಲಿ ಕಟ್ಟಬೇಕು ಎನ್ನುವ ನಿಯಮವಿದೆ. ಆದರೆ ಸದರಿ ಮದ್ಯ ಮಳಿಗೆಯು ರಸ್ತೆಯಿಂದ ಕೇವಲ ಎರಡು ಮೀಟರ್ ಅಂತರದಲ್ಲಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅದೇ ರೀತಿ MSIL ಮದ್ಯದಂಗಡಿಯ ಮುಂದೆ ಮದ್ಯಪಾನ ಮಾಡುವಂತಿಲ್ಲ. ಕೇವಲ ಮನೆಗೆ ತೆಗೆದಕೊಂಡು ಹೋಗುವ ಅವಕಾಶ ಮಾತ್ರವಿದೆ. ಆದರೆ ಅರಕಲಗೂಡಿನ ಈ ಮದ್ಯದಂಗಡಿ ಮುಂದೆಯೇ ಜನ ಮದ್ಯಪಾನ ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಮಹಿಳೆಯರು, ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದರೆ ಅವರು ಉತ್ತಿರಿಸುತ್ತಿಲ್ಲ. ಹಾಗಾಗಿ ಹೋರಾಟವೊಂದೇ ನಮಗಿರುವ ಏಕೈಕ ದಾರಿಯಾಗಿದೆ. ಹಾಗಾಗಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷತ್ ಸದಸ್ಯರು ಮತ್ತು ಅರಕಲಗೂಡು – ಮಲ್ಲಿಪಟ್ಟಣ ರಸ್ತೆ ನಿವಾಸಿಗಳು ಸೇರಿ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಅಕ್ಟೋಬರ್ 08 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಮದ್ಯದಂಗಡಿ ತೆರವುಗೊಳಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಹಾಸನ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಅವರು ಲಭ್ಯವಾಗಿಲ್ಲ. ಅವರು ಪ್ರತಿಕ್ರಿಯೆಗೆ ಸಿಕ್ಕಲ್ಲಿ ಅದನ್ನು ಅಪ್ಡೇಟ್ ಮಾಡಲಾಗುವುದು.

ಕಾನೂನು ಏನು ಹೇಳುತ್ತದೆ?

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ.


ಇದನ್ನೂ ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...